ನ್ಯಾಯಾಂಗದ ದಾರಿ ಮೂಲಕ ಭಾರತಕ್ಕೆ ಹಸ್ತಾಂತರ ಆಗುವುದನ್ನು ತಡೆಯುವುದಕ್ಕೆ ಆಗಲ್ಲ ಎಂದು ವಿಜಯ್ ಮಲ್ಯ ಅವರಿಗೆ ಖಾತ್ರಿ ಆದಂತಿದೆ. ಇದೀಗ ಮಲ್ಯ ವಕೀಲರು ಸುಪ್ರೀಂ ಕೋರ್ಟ್ ಮುಂದೆ ಗುರುವಾರ ಪ್ರಸ್ತಾವವೊಂದನ್ನು ಇಟ್ಟಿದ್ದಾರೆ. ಭಾರತದಲ್ಲಿನ ಬ್ಯಾಂಕ್ ಗಳ ಒಕ್ಕೂಟಕ್ಕೆ ಬಾಕಿ ಉಳಿಸಿಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಚುಕ್ತಾ ಮಾಡುವುದಾಗಿ ಹೇಳಿದ್ದಾರೆ.
ಒಂದು ವೇಳೆ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದೇ ಆದಲ್ಲಿ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ದಾಖಲಿಸಿರುವ ಎಲ್ಲ ಪ್ರಕರಣಗಳು ಬಗೆಹರಿಯಲಿವೆ. ಎಷ್ಟು ಮೊತ್ತವನ್ನು ನೀಡಲಾಗುತ್ತದೆ ಎಂದು ಮಲ್ಯ ಪರ ಕಾನೂನು ಸಲಹೆಗಾರರು ತಿಳಿಸಿಲ್ಲ. ಕಳೆದ ತಿಂಗಳು ಮಲ್ಯ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಕೊಂಡಿದ್ದರು 13,960 ಕೋಟಿ ರುಪಾಯಿಯನ್ನು ಅಂತಿಮ ಹಾಗೂ ಪೂರ್ತಿ ಸಾಲದ ಮೊತ್ತ ಎಂದು ಪಾವತಿಸುವುದಾಗಿ ತಿಳಿಸಿದ್ದರು.
ಇದೀಗ ಮುಖ್ಯ ನ್ಯಾಯ ಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ಪೀಠದ ಎದುರು ಮಲ್ಯ ಪರ ವಕೀಲರು ಸಾಲ ತೀರಿಸುವ ಬಗ್ಗೆ ಹೇಳಿದ್ದಾರೆ. ಅಂದ ಹಾಗೆ ವಿಜಯ್ ಮಲ್ಯ ತೆಗೆದುಕೊಂಡ ಸಾಲದ ಅಸಲು ಮೊತ್ತವೇ 9000 ಕೋಟಿ ರುಪಾಯಿಗೂ ಹೆಚ್ಚಿದೆ. ಈಗ ಮಲ್ಯ ನೀಡುವುದಾಗಿ ಹೇಳುತ್ತಿರುವ ಮೊತ್ತವು ಈ ಹಿಂದೆ ಕೊಡುವುದಾಗಿ ಹೇಳಿದ್ದ ಮೊತ್ತಗಳಿಗಿಂತ ಹೆಚ್ಚಿನದಾಗಿದೆ.

ಆದರೆ, ತಮ್ಮ ವಿರುದ್ಧ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ರದ್ದು ಮಾಡಬೇಕು ಎಂಬುದು ಮಲ್ಯ ಮನವಿಯಾಗಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ಎತ್ತಿದ್ದು, ವಿಜಯ್ ಮಲ್ಯ ಆಗಾಗ ಈ ರೀತಿಯ ಆಫರ್ ಗಳನ್ನು ಮುಂದಿಡುತ್ತಾರೆ. ಭಾರತಕ್ಕೆ ಬರುವ ಮುನ್ನ ಅವರು ಹಣವನ್ನು ಠೇವಣಿ ಇಡಲಿ ಎಂದಿದ್ದಾರೆ.
ಆ ಮೂಲಕ ಮಲ್ಯರನ್ನು ಯಾವುದೇ ಸಮಯದಲ್ಲಿ ಭಾರತಕ್ಕೆ ಕರೆತರಬಹುದು ಎಂಬ ಸುಳಿವು ನೀಡಿದ್ದಾರೆ. ಯು.ಕೆ. ಕೋರ್ಟ್ ಗಳಲ್ಲಿ ಭಾರತಕ್ಕೆ ಹಸ್ತಾಂತರ ಆಗದಿರಲು ಸಲ್ಲಿಸಿದ್ದ ಮಲ್ಯ ಅರ್ಜಿಗಳು ತಿರಸ್ಕೃತ ಆಗಿವೆ. ಈಗ ಅಲ್ಲಿನ ಆಶ್ರಯ ಕೋರಿ ಅರ್ಜಿ ಸಲ್ಲಿಸಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications