ಬ್ಯಾಂಕ್ ಗಳ ಪೂರ್ತಿ ಸಾಲ ತೀರಿಸುವುದಾಗಿ ಮತ್ತೊಮ್ಮೆ ಮಲ್ಯ ಮನವಿ

ನ್ಯಾಯಾಂಗದ ದಾರಿ ಮೂಲಕ ಭಾರತಕ್ಕೆ ಹಸ್ತಾಂತರ ಆಗುವುದನ್ನು ತಡೆಯುವುದಕ್ಕೆ ಆಗಲ್ಲ ಎಂದು ವಿಜಯ್ ಮಲ್ಯ ಅವರಿಗೆ ಖಾತ್ರಿ ಆದಂತಿದೆ. ಇದೀಗ ಮಲ್ಯ ವಕೀಲರು ಸುಪ್ರೀಂ ಕೋರ್ಟ್ ಮುಂದೆ ಗುರುವಾರ ಪ್ರಸ್ತಾವವೊಂದನ್ನು ಇಟ್ಟಿದ್ದಾರೆ. ಭಾರತದಲ್ಲಿನ ಬ್ಯಾಂಕ್ ಗಳ ಒಕ್ಕೂಟಕ್ಕೆ ಬಾಕಿ ಉಳಿಸಿಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಚುಕ್ತಾ ಮಾಡುವುದಾಗಿ ಹೇಳಿದ್ದಾರೆ.

ಒಂದು ವೇಳೆ ಈ ಪ್ರಸ್ತಾವವನ್ನು ಒಪ್ಪಿಕೊಂಡಿದ್ದೇ ಆದಲ್ಲಿ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ದಾಖಲಿಸಿರುವ ಎಲ್ಲ ಪ್ರಕರಣಗಳು ಬಗೆಹರಿಯಲಿವೆ. ಎಷ್ಟು ಮೊತ್ತವನ್ನು ನೀಡಲಾಗುತ್ತದೆ ಎಂದು ಮಲ್ಯ ಪರ ಕಾನೂನು ಸಲಹೆಗಾರರು ತಿಳಿಸಿಲ್ಲ. ಕಳೆದ ತಿಂಗಳು ಮಲ್ಯ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿಕೊಂಡಿದ್ದರು 13,960 ಕೋಟಿ ರುಪಾಯಿಯನ್ನು ಅಂತಿಮ ಹಾಗೂ ಪೂರ್ತಿ ಸಾಲದ ಮೊತ್ತ ಎಂದು ಪಾವತಿಸುವುದಾಗಿ ತಿಳಿಸಿದ್ದರು.

ಇದೀಗ ಮುಖ್ಯ ನ್ಯಾಯ ಮೂರ್ತಿ ಎಸ್.ಎ. ಬೋಬ್ಡೆ ನೇತೃತ್ವದ ಪೀಠದ ಎದುರು ಮಲ್ಯ ಪರ ವಕೀಲರು ಸಾಲ ತೀರಿಸುವ ಬಗ್ಗೆ ಹೇಳಿದ್ದಾರೆ. ಅಂದ ಹಾಗೆ ವಿಜಯ್ ಮಲ್ಯ ತೆಗೆದುಕೊಂಡ ಸಾಲದ ಅಸಲು ಮೊತ್ತವೇ 9000 ಕೋಟಿ ರುಪಾಯಿಗೂ ಹೆಚ್ಚಿದೆ. ಈಗ ಮಲ್ಯ ನೀಡುವುದಾಗಿ ಹೇಳುತ್ತಿರುವ ಮೊತ್ತವು ಈ ಹಿಂದೆ ಕೊಡುವುದಾಗಿ ಹೇಳಿದ್ದ ಮೊತ್ತಗಳಿಗಿಂತ ಹೆಚ್ಚಿನದಾಗಿದೆ.

ಬ್ಯಾಂಕ್ ಗಳ ಪೂರ್ತಿ ಸಾಲ ತೀರಿಸುವುದಾಗಿ ಮತ್ತೊಮ್ಮೆ ಮಲ್ಯ  ಮನವಿ

ಆದರೆ, ತಮ್ಮ ವಿರುದ್ಧ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ರದ್ದು ಮಾಡಬೇಕು ಎಂಬುದು ಮಲ್ಯ ಮನವಿಯಾಗಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ಎತ್ತಿದ್ದು, ವಿಜಯ್ ಮಲ್ಯ ಆಗಾಗ ಈ ರೀತಿಯ ಆಫರ್ ಗಳನ್ನು ಮುಂದಿಡುತ್ತಾರೆ. ಭಾರತಕ್ಕೆ ಬರುವ ಮುನ್ನ ಅವರು ಹಣವನ್ನು ಠೇವಣಿ ಇಡಲಿ ಎಂದಿದ್ದಾರೆ.

ಆ ಮೂಲಕ ಮಲ್ಯರನ್ನು ಯಾವುದೇ ಸಮಯದಲ್ಲಿ ಭಾರತಕ್ಕೆ ಕರೆತರಬಹುದು ಎಂಬ ಸುಳಿವು ನೀಡಿದ್ದಾರೆ. ಯು.ಕೆ. ಕೋರ್ಟ್ ಗಳಲ್ಲಿ ಭಾರತಕ್ಕೆ ಹಸ್ತಾಂತರ ಆಗದಿರಲು ಸಲ್ಲಿಸಿದ್ದ ಮಲ್ಯ ಅರ್ಜಿಗಳು ತಿರಸ್ಕೃತ ಆಗಿವೆ. ಈಗ ಅಲ್ಲಿನ ಆಶ್ರಯ ಕೋರಿ ಅರ್ಜಿ ಸಲ್ಲಿಸಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+