ಭಾರತದ ಬ್ಯಾಂಕ್ ಗಳ ಒಕ್ಕೂಟಕ್ಕೆ ಬಾಕಿ ಉಳಿಸಿಕೊಂಡಿರುವ ಸಾಲವನ್ನು ಹಿಂತಿರುಗಿಸುವುದಾಗಿ ಮಂಗಳವಾರ ವಿಜಯ್ ಮಲ್ಯ ಮತ್ತೊಮ್ಮೆ ಹೇಳಿದ್ದಾರೆ. ಇದೇ ವೇಳೆ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿರುವ ಸಂದರ್ಭದಲ್ಲಿ ಉದ್ಯಮಗಳಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.
"ಭಾರತ ಲಾಕ್ ಡೌನ್ ಮಾಡಲಾಗಿದೆ. ನಾವು ಇದನ್ನು ಗೌರವಿಸುತ್ತೇವೆ. ಲಾಕ್ ಡೌನ್ ಕಾರಣಕ್ಕೆ ನನ್ನ ಕಂಪೆನಿಗಳ ಕಾರ್ಯಚಟುವಟಿಕೆ ನಿಂತಿದೆ. ಎಲ್ಲ ಉತ್ಪಾದನೆ ನಿಂತಿದೆ. ಆದರೂ ನಮ್ಮ ಸಿಬ್ಬಂದಿಯನ್ನು ವಾಪಸ್ ಕಳಿಸಿಲ್ಲ ಮತ್ತು ಅದಕ್ಕಾಗಿ ಹಣ ಪಾವತಿಸುತ್ತಿದ್ದೇವೆ. ಸರ್ಕಾರ ನಮಗೆ ಸಹಾಯ ಮಾಡಬೇಕು" ಎಂದಿದ್ದಾರೆ ಮಲ್ಯ.
ಭಾರತ ಬಿಟ್ಟು ಪರಾರಿ ಆಗಿರುವ ವಿಜಯ್ ಮಲ್ಯ, ಸದ್ಯಕ್ಕೆ ಲಂಡನ್ ನಲ್ಲಿ ಇದ್ದಾರೆ. ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ. ಬಾಕಿ ಇರುವ ಹಣ ವಾಪಸ್ ಮಾಡುವುದಾಗಿ ಹಲವು ಬಾರಿ ಹೇಳಿದರೂ ತನಿಖಾ ಸಂಸ್ಥೆಗಳಾಗಲೀ ಅಥವಾ ಬ್ಯಾಂಕ್ ಗಳಾಗಲೀ ಸಹಕಾರ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಾದರೂ ತನ್ನ ಮಾತನ್ನು ಕೇಳಿಸಿಕೊಳ್ಳಬಹುದು ಎಂಬ ಭರವಸೆಯನ್ನು ವಿಜಯ್ ಮಲ್ಯ ವ್ಯಕ್ತಪಡಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಮಲ್ಯ ವಿದೇಶದಲ್ಲೇ ನೆಲೆಸಿದ್ದಾರೆ. ಭಾರತದಲ್ಲಿ ಅವರ ವಿರುದ್ಧ ದೋಷಾರೋಪ ಇರುವುದರಿಂದ ವಾಪಸ್ ಬರಲು ಆಗುತ್ತಿಲ್ಲ. 13 ಭಾರತೀಯ ಬ್ಯಾಂಕ್ ಗಳಿಗೆ ವಿಜಯ್ ಮಲ್ಯ 9 ಸಾವಿರ ಕೋಟಿಗೂ ಹೆಚ್ಚು ಮೊತ್ತ ಬಾಕಿ ಇದ್ದಾರೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications