"ಬಾಕಿ ಇರುವ ಹಣವನ್ನು ಶೇಕಡಾ ನೂರರಷ್ಟು ವಾಪಸ್ ಮಾಡ್ತೀನಿ. ಇದನ್ನು ತೆಗೆದುಕೊಂಡು, ಈ ಕೇಸ್ ಇಲ್ಲಿಗೆ ಮುಗಿಸಿಬಿಡಿ" ಎಂದು ದೇಶಬಿಟ್ಟು ಪರಾರಿ ಆಗಿರುವ ಮದ್ಯದ ಉದ್ಯಮಿ ವಿಜಯ್ ಮಲ್ಯ ಬುಧವಾರ ಮಗದೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರುಪಾಯಿ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಅಭಿನಂದನೆ ಸಲ್ಲಿಸಿ, ಆ ನಂತರ ಈ ಹಿಂದೆ ಕೂಡ ಇಟ್ಟಿದ್ದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ.
"Covid 19 ಪ್ಯಾಕೇಜ್ ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ತಮಗೆ ಬೇಕಾದಷ್ಟು ಕರೆನ್ಸಿ ಮುದ್ರಿಸಿಕೊಳ್ಳಬಹುದು. ಆದರೆ ಸರ್ಕಾರದ ಒಡೆತನದಲ್ಲಿ ಇರುವ ಬ್ಯಾಂಕ್ ಗೆ ನನ್ನಂಥ ಸಣ್ಣ ಕಾಂಟ್ರಿಬ್ಯೂಟರ್ ಗಳು ಶೇಕಡಾ 100ರಷ್ಟು ಹಿಂತಿರುಗಿಸಲು ಬಯಸುವ ಸಾಲವನ್ನು ನಿರಂತರವಾಗಿ ನಿರ್ಲಕ್ಷಿಸುವುದು ಸರಿಯೇ?" ಎಂದು ಟ್ವೀಟ್ ಮಾಡಿದ್ದಾರೆ.
ಬೇಷರತ್ ಆಗಿ ಪೂರ್ತಿ ಹಣ ವಾಪಸ್ ಮಾಡ್ತೀನಿ
ಕಿಂಗ್ ಫಿಷರ್ ಏರ್ ಲೈನ್ಸ್ ಗಾಗಿ ಮಾಡಿದ ಸಾಲವನ್ನು ಹಿಂತಿರುಗಿಸದ ಮಲ್ಯ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಅವರ ಮೇಲೆ 9000 ಕೋಟಿ ರುಪಾಯಿಯಷ್ಟು ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳಿವೆ. ಇದೀಗ, "ಬೇಷರತ್ ಆಗಿ ಪೂರ್ತಿ ಹಣವನ್ನು ಹಿಂತಿರುಗಿಸುತ್ತೇನೆ, ಅದನ್ನು ದಯವಿಟ್ಟು ತೆಗೆದುಕೊಳ್ಳಿ" ಎಂದಿದ್ದಾರೆ.
ಯು.ಕೆ. ಸುಪ್ರೀಂ ಕೋರ್ಟ್ ನಲ್ಲಿ ಮನವಿ
ಯು.ಕೆ.ಯಿಂದ ಭಾರತಕ್ಕೆ ಹಸ್ತಾಂತರ ಪ್ರಕರಣದಲ್ಲಿ ಲಂಡನ್ ಹೈಕೋರ್ಟ್ ನಲ್ಲಿ ವಿಜಯ್ ಮಲ್ಯ ಹಾಕಿಕೊಂಡಿದ್ದ ಮೇಲ್ಮನವಿ ತಿರಸ್ಕೃತವಾಗಿದೆ. ಇದೀಗ ಅವರು ಯು.ಕೆ. ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿಂದೆ ಕೂಡ, ಕಿಂಗ್ ಫಿಷರ್ ಏರ್ ಲೈನ್ಸ್ ಗಾಗಿ ಪಡೆದಿದ್ದ ಮೊತ್ತವನ್ನು ಪೂರ್ತಿಯಾಗಿ ಹಿಂತಿರುಗಿಸುವುದಾಗಿ ಮಲ್ಯ ಟ್ಬೀಟ್ ಗಳನ್ನು ಮಾಡಿದ್ದಾರೆ.
ಬ್ಯಾಂಕ್ ಗಳು ಹಣ ಸ್ವೀಕರಿಸುವ ಸ್ಥಿತಿಯಲ್ಲಿ ಇಲ್ಲ
ಆದರೆ, ಬ್ಯಾಂಕ್ ಗಳು ಹಣವನ್ನು ಸ್ವೀಕರಿಸುವ ಸ್ಥಿತಿಯಲ್ಲಿ ಇಲ್ಲ ಹಾಗೂ ಜಾರಿ ನಿರ್ದೇಶನಾಲಯವು ಬ್ಯಾಂಕ್ ಗಳ ಪರವಾಗಿ ಜಪ್ತಿ ಮಾಡಿಕೊಂಡಿರುವ ವಿಜಯ್ ಮಲ್ಯ ಆಸ್ತಿಯನ್ನು ಬಿಡುಗಡೆ ಮಾಡಿಕೊಡುವ ಪರಿಸ್ಥಿತಿಯಲ್ಲಿ ಇಲ್ಲ. ಈ ಮಧ್ಯೆ ವಿಜಯ್ ಮಲ್ಯ ಕೇಂದ್ರ ಸರ್ಕಾರವನ್ನು ಪದೇ ಪದೇ ಮನವಿ ಮಾಡುತ್ತಲೇ ಇದ್ದಾರೆ.
More From GoodReturns

Biggest Airport: ಭಾರತದ ಅತಿದೊಡ್ಡ ವಿಮಾನ ನಿಲ್ದಾಣ ಸಂಚಾರಕ್ಕೆ ಸಿದ್ಧ; 45 ದಿನದೊಳಗೆ ಆರಂಭ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ



Click it and Unblock the Notifications