ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಏಪ್ರಿಲ್ 20ರಂದು ಯು.ಕೆ. ಕೋರ್ಟ್ ರದ್ದು ಮಾಡಿದೆ. ಭಾರತಕ್ಕೆ ಹಸ್ತಾಂತರ ಮಾಡುವಂತೆ 2018ರಲ್ಲಿ ಬಂದಿದ್ದ ತೀರ್ಮಾನದ ವಿರುದ್ಧ ವಿಜಯ್ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು.
ಕಿಂಗ್ ಫಿಷರ್ ಏರ್ ಲೈನ್ಸ್ ಗಾಗಿ ಭಾರತದಲ್ಲಿನ ಹಲವು ಬ್ಯಾಂಕ್ ಗಳಿಂದ 9000 ಕೋಟಿ ರುಪಾಯಿ ಸಾಲ ಮಾಡಿದ್ದು, ಅದರ ಜತೆಗೆ ಹಣಕಾಸು ವಂಚನೆ ಆರೋಪ ಇದೆ. ಆದ್ದರಿಂದ ವಿಜಯ್ ಮಲ್ಯ ಭಾರತಕ್ಕೆ ಬರಬೇಕು. 64 ವರ್ಷದ ವಿಜಯ್ ಮಲ್ಯ ಅವರನ್ನು ವಾಪಸ್ ಕರೆತರಲು ಭಾರತ ಸರ್ಕಾರ ಪ್ರಯತ್ನಿಸುತ್ತಿದೆ.
ಯಾವುದೇ ತಪ್ಪು ಮಾಡಿಲ್ಲ. ನಾನು ಹಣ ವಾಪಸ್ ಮಾಡಲು ಸಿದ್ಧನಿದ್ದೇನೆ ಎಂದು ವಿಜಯ್ ಮಲ್ಯ ಈಚೆಗೆ ಹೇಳಿದ್ದಾರೆ. ಮಾರ್ಚ್ 31ರಂದು ಟ್ವೀಟ್ ಮಾಡಿದ್ದ ಮಲ್ಯ, ನಾನು ಶೇಕಡಾ ನೂರರಷ್ಟು ಹಣ ವಾಪಸ್ ಮಾಡಲು ಸಿದ್ಧನಿದ್ದೇನೆ. ಆದರೆ ಬ್ಯಾಂಕ್ ಹಣ ಪಡೆಯಲು ಸಿದ್ಧವಿಲ್ಲ ಹಾಗೂ ಇ.ಡಿ. ಆಸ್ತಿಯನ್ನು ಜಪ್ತಿ ಮಾಡಿಕೊಂಡಿರುವುದು ಬಿಡಲು ಸಿದ್ಧವಿಲ್ಲ. ಈ ಸಲವಾದರೂ ಕೇಂದ್ರ ಹಣಕಾಸು ಸಚಿವೆ ಬಿಕ್ಕಟ್ಟಿನ ವೇಳೆ ಕೇಳಿಸಿಕೊಳ್ಳಬಹುದು ಎಂದಿದ್ದರು.

ಭಾರತಕ್ಕೆ ಹಸ್ತಾಂತರ ಮಾಡಬೇಕು ಎಂಬ ಮನವಿಯನ್ನು ಪುರಸ್ಕರಿಸಿ, ಲಂಡನ್ ನಲ್ಲಿ 2017ರಲ್ಲಿ ಲಂಡನ್ ನಲ್ಲಿ ಮಲ್ಯರನ್ನು ಬಂಧಿಸಲಾಗಿತ್ತು. ಆದರೆ ಕೆಲ ಹೊತ್ತಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಜಾರಿ ನಿರ್ದೇಶನಾಲಯ ಅಫಿಡವಿಟ್ ಸಲ್ಲಿಸಿದ ಮೇಲೆ ಅದೇ ವರ್ಷ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಮಲ್ಯರನ್ನು ಬಂಧಿಸಲಾಗಿತ್ತು.
2018ರ ಡಿಸೆಂಬರ್ ನಲ್ಲಿ ವಿಜಯ್ ಮಲ್ಯ ಹಸ್ತಾಂತರಕ್ಕೆ ಯು.ಕೆ. ಕೋರ್ಟ್ ಆದೇಶ ನೀಡಿತ್ತು. ಆ ನಂತರ ಭಾರತದಲ್ಲಿನ ಪಿಎಂಎಲ್ ಎ ಕೋರ್ಟ್ ನಿಂದ ವಿಜಯ್ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲಾಯಿತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications