ನಾನಿನ್ನೂಅಪರಾಧಿಯಾಗಿರಲು ಹೇಗೆ ಸಾಧ್ಯ?ಹೊಸ ವರಸೆ ತೆಗೆದ ಮದ್ಯ ದೊರೆ ವಿಜಯ್ ಮಲ್ಯ

ಬ್ಯಾಂಕ್‌ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಬಿಟ್ಟು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಡುವೆ ಮಾತಿನ ಸಮರ ಆರಂಭವಾಗಿದೆ. ಸದ್ಯ ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ನಿರ್ಮಲಾ, ಆರ್ಥಿಕ ಅಪರಾಧ ಎಸಗಿದ ಯಾರನ್ನೂ ಸರ್ಕಾರ ಬಿಡುವುದಿಲ್ಲ. ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹14,131.6 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಯಶಸ್ವಿಯಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಮರಳಿ ನೀಡಲಾಗಿದೆ ಎಂದು ತಿಳಿಸಿದ್ದರು. ಅದರೆ ನಿರ್ಮಲಾ ಅವರ ಈ ಹೇಳಿಕೆಗೆ ವಿಜಯ್‌ ಮಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಜಾರಿ ಸಂಸ್ಥೆಗಳು ನಾನು ಮಾಡಿದ ಸಾಲ ಹಾಗೂ ಅದರ ಬಡ್ಡಿಗಿಂತ ಎರಡು ಪಟ್ಟು ಹೆಚ್ಚಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಯತ್ನ ಮಾಡುತ್ತಿರುವುದೇಕೆ ಅನ್ನೋದನ್ನು ಕಾನೂನುಬದ್ಧವಾಗಿ ಸಮರ್ಥಿಸಿಕೊಳ್ಳಬೇಕು. ಹಾಗಾಗಿ ಪರಿಹಾರಕ್ಕೆ ನಾನು ಅರ್ಹನಾಗಿದ್ದೇನೆ ಎಂದು ತಿಳಿಸಿದ್ದಾರೆ. ಸಾಲ ವಸೂಲಾತಿ ನ್ಯಾಯಮಂಡಳಿ ತನ್ನ ಸಾಲವನ್ನು 6203 ಕೋಟಿ ರೂ. ಎಂದು ತಿಳಿಸಿದೆ. ಸರಿಹೊಂದಿಸಿದೆ. ಅದೂ ಅಲ್ಲದೆ ಇದರಲ್ಲಿ 1,200 ಕೋಟಿ ರೂ. ಬಡ್ಡಿಯೂ ಸೇರಿದೆ. ಆದರೆ ಅವರ ಹೇಳಿಕೆಯ ಪ್ರಕಾರ ಜಾರಿ ನಿರ್ದೇಶನಾಲಯ ಮತ್ತು ಬ್ಯಾಂಕುಗಳು ಸಾಲಕ್ಕಿಂತ ಎರಡು ಪಟ್ಟು ಹೆಚ್ಚು ವಸೂಲಿ ಮಾಡಿವೆ ಎಂದು ಮಲ್ಯ ತಿಳಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಹೇಳಿಕೆ ಏನು?

ಆರ್ಥಿಕ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು 22,280 ಕೋಟಿ ರೂ. ಮೌಲ್ಯದ ವ್ಯಕ್ತಿಗಳು ಮತ್ತು ಕಂಪೆನಿಗಳ ಆಸ್ತಿಯನ್ನು ಕೇಂದ್ರ ಜಾರಿ ಸಂಸ್ಥೆ ಯಶಸ್ವಿಯಾಗಿ ಮರುವಶಕ್ಕೆ ಪಡೆದುಕೊಂಡಿದೆ ಎಂದು ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದರು. ಇನ್ನು ವಶಕ್ಕೆ ಪಡೆಯಲಾದ ಆಸ್ತಿಯಲ್ಲಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ 14,131.6 ಕೋಟಿ ರೂ. ಮೌಲ್ಯದ ಸಂಪೂರ್ಣ ಜಪ್ತಿ ಮಾಡಿದ ಆಸ್ತಿಯನ್ನು ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವರ್ಗಾಯಿಸಲಾಗಿದೆ ಎಂದು ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಆರ್ಥಿಕ ಅಪರಾಧಗಳಲ್ಲಿ ನಾವು ಯಾರನ್ನೂ ಬಿಟ್ಟಿಲ್ಲ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ. ಬ್ಯಾಂಕ್‌ಗಳಿಗೆ ಹೋಗಬೇಕಾದ ಅರ್ಹ ಹಣವನ್ನು ಹಿಂತಿರುಗಿಸುವಂತೆ ಮಾಡುತ್ತೇವೆ ಎಂದು ಅವರು ಸಂಸತ್ತಿನಲ್ಲಿ ತನ್ನ ಒಂದು ಗಂಟೆಯ ಸುದೀರ್ಘ ಹೇಳಿಕೆಯಲ್ಲಿ ತಿಳಿಸಿದ್ದರು.

 ಸಚಿವೆ ನಿರ್ಮಲಾಗೆ ತಿರುಗೇಟು ನೀಡಿದ ಉದ್ಯಮಿ ವಿಜಯ್‌ ಮಲ್ಯ!

ವಿಜಯ್ ಮಲ್ಯ ಅವರ ವಾದವೇನು?

ಇನ್ನು ಸಂಸತ್ತಿನಲ್ಲಿ ವಿಜಯ್‌ ಮಲ್ಯ ಅವರ ಆಸ್ತಿ ವಶಕ್ಕೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮ್‌ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಇದೀಗ ವಿಜಯ್‌ ಮಲ್ಯ ಅವರು ಎಕ್ಸ್‌ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೆ ತನ್ನನ್ನು ಆರ್ಥಿಕ ಅಪರಾಧಿ ಎಂಬುದಾಗಿ ಕರೆಯುತ್ತಿರುವುದನ್ನು ಕೂಡ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ತನಗೆ ಪರಿಹಾರ ನೀಡಬೇಕೆಂದು ಕೂಡ ಆಗ್ರಹಿಸಿದ್ದಾರೆ. ಸಾಲ ವಸೂಲಾತಿ ನ್ಯಾಯಮಂಡಳಿಯು ಕೆಎಫ್‌ಎ ಸಾಲವನ್ನು 1200 ಕೋಟಿ ರೂ. ಸೇರಿದಂತೆ 6203 ಕೋಟಿ ರೂ. ಎಂದು ನಿರ್ಣಯಿಸಿದೆ. ಅದೂ ಅಲ್ಲದೆ 6203 ಕೋಟಿಗಳ ಸಾಲದ ವಿರುದ್ಧ ಇಡಿ ಮೂಲಕ ಬ್ಯಾಂಕ್‌ಗಳು 14,131.60 ಕೋಟಿ ರೂ.ಗಳನ್ನು ನನ್ನಿಂದ ವಸೂಲಿ ಮಾಡಿವೆ. ಆದರೂ ನಿರ್ಮಲಾ ಅವರು ನನ್ನನ್ನು ಆರ್ಥಿಕ ಅಪರಾಧಿ ಎಂದು ಸಂಸತ್ತಿನಲ್ಲಿ ಘೋಷಿಸಿದ್ದಾರೆ. ಇಡಿ ಮತ್ತು ಬ್ಯಾಂಕ್‌ಗಳು ಎರಡು ಪಟ್ಟು ಹೆಚ್ಚು ಸಾಲವನ್ನು ಹೇಗೆ ತೆಗೆದುಕೊಂಡಿವೆ ಎಂಬುದನ್ನು ಕಾನೂನುಬದ್ಧವಾಗಿ ಸಮರ್ಥಿಸದಿದ್ದರೆ, ನಾನು ಪರಿಹಾರಕ್ಕೆ ಅರ್ಹನಾಗಿರುತ್ತೇನೆ, ಅದನ್ನು ನಾನು ಮುಂದುವರಿಸುತ್ತೇನೆ ಎಂದು ಮಲ್ಯ ಅವರು ಆಕ್ರೋಶಿತರಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉದ್ಯಮಿ ವಿಜಯ್‌ ಮಲ್ಯ ಅವರ ನಡುವಿನ ಉತ್ತರ ಪ್ರತ್ಯುತ್ತರ ಸದ್ಯ ಗಮನ ಸೆಳೆದಿದೆ.

ಏನಿದು ಪ್ರಕರಣ?

2016 ರಲ್ಲಿ ಭಾರತದಿಂದ ಪಲಾಯನ ಮಾಡಿ, ಇಂಗ್ಲೆಂಡ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್‌ ಮಲ್ಯ ಅವರನ್ನು 2019 ರಲ್ಲಿ ಪ್ಯುಗಿಟಿವ್ ಎಕನಾಮಿಕ್ ಅಪರಾಧಿಗಳ ಕಾಯಿದೆಯಡಿ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲಾಯಿತು. ಮಲ್ಯ ಹಸ್ತಾಂತರ ಪ್ರಕರಣವು UK ನ್ಯಾಯಾಲಯಗಳಲ್ಲಿ ಸದ್ಯ ಈಗಲೂ ನಡೆಯುತ್ತಿದೆ, ಭಾರತದಲ್ಲಿನ ಅವರ ಕಾನೂನು ಮತ್ತು ಆರ್ಥಿಕ ಸ್ಥಿತಿಯನ್ನು ಸುತ್ತುವರಿದ ಸಾಕಷ್ಟು ಕಾನೂನಾತ್ಮಕ ಸವಾಲುಗಳನ್ನು ಅವರು ಎದುರಿಸುತ್ತಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+