ಚಿಕ್ಕಬಳ್ಳಾಪುರ: 'ಕೋಲಾರ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ಕೋಲಾರ ಡಿಸಿಸಿ ಬ್ಯಾಂಕ್ ಹಿಂದೆ ದೊಡ್ಡವರ ಕೈವಾಡ ಇದೆ. ತನಿಖೆ ನಡೆಸಲು ಹೋದರೆ ನಿಮಗೂ ತೊಂದರೆಯಾಗುತ್ತದೆ ಎಂದು ಹಲವರು ಹೇಳಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ' ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಸೋಮವಾರ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ನಾನು ಯಾರಿಗೂ ಯಾವುದೇ ಕಾರಣಕ್ಕೂ ಹೆದರುವವನಲ್ಲ. ಕೋಲಾರ ಡಿಸಿಸಿ ಬ್ಯಾಂಕ್ ಅವ್ಯವಹಾರಗಳ ಹಿಂದೆ ಅದೆಷ್ಟೇ ದೊಡ್ಡ ತಲೆಗಳು ಇದ್ದರೂ ನನಗೆ ಭಯವಿಲ್ಲ. ತನಿಖೆ ನಡೆಸಿಯೇ ನಡೆಸುತ್ತೇನೆ' ಎಂದು ಸಚಿವರು ತಿಳಿಸಿದರು.
''ಮುಖ್ಯಮಂತ್ರಿಗಳ ಜಿಲ್ಲೆಯಾದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ನಡೆದಿತ್ತು. ಅಲ್ಲೂ ಸಹ ನಿರ್ಭೀತಿಯಿಂದ ಕಾರ್ಯನಿರ್ವಹಿಸಿ ಅವ್ಯವಹಾರದ ತನಿಖೆ ನಡೆಸಿ ಕ್ರಮ ಕೈಗೊಂಡಿದ್ದೇನೆ. ಸೆಕ್ಷನ್ 65ರ ಪ್ರಕಾರ ಆದೇಶ ಹೊರಡಿಸಿ ಪೊಲೀಸ್ ಸಿಬ್ಬಂದಿ ಸುಪರ್ದಿಯಲ್ಲಿ ಎಲ್ಲ ದಾಖಲೆಯನ್ನು ವಾಪಸ್ ಪಡೆದಿದ್ದಲ್ಲದೆ, ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗಿದೆ'' ಎಂದು ಸಚಿವರು ತಿಳಿಸಿದರು.
''ಕೋಲಾರ ಡಿಸಿಸಿ ಬ್ಯಾಂಕ್ ಅವ್ಯವಹಾರದ ಬಗ್ಗೆ ಮಾಹಿತಿಯನ್ನು ಕೋರಲಾಗಿದ್ದರಿಂದ ಮೂರ್ನಾಲ್ಕು ದಿನದಲ್ಲಿ ತನಿಖೆ ಕೈಗೊಳ್ಳಲಾಗುವುದು. ವರದಿ ಬಳಿಕ ಕ್ರಮ ವಹಿಸಲಾಗುವುದು'' ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

''ಡಿಸಿಸಿ ಬ್ಯಾಂಕ್ ಗಳಿಂದ ನೂರಾರು ಕೋಟಿ ರೂಪಾಯಿ ಸಾಲವನ್ನು ಸಕ್ಕರೆ ಕಾರ್ಖಾನೆಗಳಿಗೆ ಕೊಡಲಾಗುತ್ತಿದೆ. ಆದರೆ, ಯಾರೂ ಅಸಲು ಹಾಗೂ ಬಡ್ಡಿಯನ್ನೂ ಕಟ್ಟಲ್ಲ. ಕೆಲವೇ ಕೆಲವರು ಬಡ್ಡಿ ಕಟ್ಟುತ್ತಾರೆ. ಹೀಗಾಗಿ ಇಂಥವರಿಗೆ ಸಾಲ ಕೊಡುವ ಬದಲು ನಿಜವಾಗಿ ಸಾಲ ತೀರಿಸುವ ರೈತರಿಗೆ ಹೆಚ್ಚು ಸಾಲವನ್ನು ಕೊಡುವಂತೆ ನಾನು ಈಗಾಗಲೇ ಸೂಚನೆ ನೀಡಿದ್ದೇನೆ'' ಎಂದು ಸಚಿವ ಸೋಮಶೇಖರ್ ತಿಳಿಸಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications