ನವದೆಹಲಿ, ಜನವರಿ 16: ಇತ್ತೀಚೆಗೆ ತನ್ನ ಸೇವಾ ನಿಯಮಗಳು ಮತ್ತು ಗೌಪ್ಯತೆ ನೀತಿಯನ್ನು ನವೀಕರಿಸಿದ್ದ ವಾಟ್ಸಾಪ್ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ನವೀಕರಣವನ್ನು ಮುಂದೂಡಿದೆ.
ವಾಟ್ಸಾಪ್ ತನ್ನ ನಿಯಮಗಳನ್ನು ನವೀಕರಿಸುವ ಬದಲು ಹಿಂದೆ ಸರಿಯಲು ಪ್ರಮುಖ ಕಾರಣವು ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ವಾಟ್ಸಾಪ್ ಬಳಕೆದಾರರ ವಿರೋಧವಾಗಿದೆ. ಜೊತೆಗೆ ವಾಟ್ಸಾಪ್ ಕೂಡ ತನ್ನ ಗೌಪ್ಯತೆ ನೀತಿಗಳನ್ನು ನವೀಕರಿಸಿದ ಮೇಲಂತೂ, ಜನರು ಸಿಗ್ನಲ್ ಆ್ಯಪ್ ಕಡೆಗೆ ಹೆಚ್ಚು ಮುಖ ಮಾಡುತ್ತಿದ್ದಾರೆ.
ಸದ್ಯ ವಾಟ್ಸಾಪ್ ನ ಸೇವಾ ನಿಯಮವನ್ನು ವಿರೋಧಿಸುತ್ತಿರುವ ಹೆಚ್ಚಿನ ಮಂದಿ ಹಾಗೂ ಮುಂದಿನ ದಿನಗಳಲ್ಲಿ ಹಣ ಪಾವತಿ ಮಾಡಬೇಕೆಂದಿರುವ ಟೆಲಿಗ್ರಾಮ್ ಆ್ಯಪ್ಗೂ ಗುಡ್ಬೈ ಹೇಳಲು ಜನರು ಮನಸ್ಸು ಮಾಡುತ್ತಿದ್ದಾರೆ. ಹೀಗಾಗಿ ಸಿಗ್ನಲ್ ಆ್ಯಪ್ಗೆ ಬೇಡಿಕೆ ಹೆಚ್ಚಿದೆ.

ತನ್ನ ಹೊಸ ಗೌಪ್ಯತೆ ಸೇವಾ ನಿಯಮಗಳ ನವೀಕರಣದಿಂದಾಗಿಯೇ ವಾಟ್ಸಾಪ್ಗೆ ದೊಡ್ಡ ಹೊಡೆತ ನೀಡಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಜನರು ಸಿಗ್ನಲ್ ಆ್ಯಪ್ ಬಳಕೆಗೆ ಮುಂದಾಗಿದ್ದಾರೆ. ಹೀಗಾಗಿ ವಾಟ್ಸಾಪ್ ತನ್ನ ನಿರ್ಧಾರವನ್ನು ಸ್ವಲ್ಪ ದಿನಗಳ ಮುಂದೂಡಿದೆ
'' ಈ ಸಂದೇಶ ತಲುಪಿದ ಎಲ್ಲರಿಗೂ ಧನ್ಯವಾದಗಳು. ವಾಟ್ಸಾಪ್ ಬಳಕೆದಾರರೊಂದಿಗೆ ನೇರವಾಗಿ ಸಂವಹನ ಮಾಡುವ ಮೂಲಕ ಯಾವುದೇ ಗೊಂದಲಗಳನ್ನು ಎದುರಿಸಲು ನಾವು ಇನ್ನೂ ಕೆಲಸ ಮಾಡುತ್ತಿದ್ದೇವೆ" ಎಂದು ಕಂಪನಿಯು ಶುಕ್ರವಾರ ತಡವಾಗಿ ಟ್ವೀಟ್ ಮಾಡಿದೆ.
''ಫೆಬ್ರವರಿ 8 ರಂದು ಯಾರ ಖಾತೆಯನ್ನು ಅಮಾನತುಗೊಳಿಸಲಾಗುವುದಿಲ್ಲ ಅಥವಾ ಅಳಿಸುವುದಿಲ್ಲ, ಮತ್ತು ಮೇ ನಂತರದವರೆಗೆ ನಾವು ನಮ್ಮ ವ್ಯವಹಾರ ಯೋಜನೆಗಳೊಂದಿಗೆ ಹಿಂತಿರುಗುತ್ತೇವೆ" ಎಂದು ಅದು ಹೇಳಿದೆ.
ಹೊಸ ವಾಟ್ಸಾಪ್ ಗೌಪ್ಯತೆ ನೀತಿಯು ಟೆಲಿಗ್ರಾಮ್ ಮತ್ತು ಸಿಗ್ನಲ್ಗೆ ಅನುಕೂಲವಾಗಿದೆ. ಟೆಲಿಗ್ರಾಮ್ ಅಪ್ಲಿಕೇಶನ್ ಜನವರಿಯಲ್ಲಿ 500 ಮಿಲಿಯನ್ ಮಾಸಿಕ ಸಕ್ರಿಯ ಬಳಕೆದಾರರಿಗೆ ತಲುಪಿದೆ. ಇದು ಕೇವಲ 72 ಗಂಟೆಗಳಲ್ಲಿ 25 ಮಿಲಿಯನ್ ಬಳಕೆದಾರರನ್ನು ಪಡೆದಿದ್ದು ಹೊಸ ದಾಖಲೆಯನ್ನೇ ಮಾಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications