ವಾಟ್ಸಾಪ್ ಇಂಡಿಯಾ ಮುಖ್ಯಸ್ಥರಾದ ಅಭಿಜಿತ್ ಬೋಸ್ ಹಾಗೂ ಮೆಟಾ ಇಂಡಿಯಾ ಪಾಲಿಸಿ ಡೈರೆಕ್ಟರ್ ಆಗಿರುವ ರಾಜೀವ್ ಅಗರ್ವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ವರದಿಯ ಪ್ರಕಾರ ಪ್ರಸ್ತುತ ವಾಟ್ಸಾಪ್ ಪಬ್ಲಿಕ್ ಪಾಲಿಸಿ ಮುಖ್ಯಸ್ಥರಾದ ಶಿವನಾಥ್ ಠುಕ್ರಲ್ರನ್ನು ಪ್ರಸ್ತುತ ಭಾರತದಲ್ಲಿನ ಎಲ್ಲ ಮೆಟಾ ಬ್ರಾಂಡ್ಗಳಿಗೆ ನಿರ್ವಾಹಕರಾಗಿ ನೇಮಕಾತಿ ಮಾಡಲಾಗಿದೆ. ಮೆಟಾ ಈ ಕೆಲವು ದಿನಗಳ ಹಿಂದೆ ಸುಮಾರು 11,000 ಜನರನ್ನು ಉದ್ಯೋಗದಿಂದ ವಜಾ ಮಾಡುವುದಾಗಿ ಘೋಷಣೆ ಮಾಡಿತ್ತು ಎಂಬುವುದನ್ನು ನಾವಿಲ್ಲಿ ಗಮನಿಸಬಹುದು.
ಇನ್ನು ಈಗಾಗಲೇ ಹಲವಾರು ಸಂಸ್ಥೆಗಳು ನಷ್ಟ ಹಾಗೂ ಬೇರೆ ಕಾರಣಗಳನ್ನು ನೀಡಿ ತಮ್ಮ ಸಂಸ್ಥೆಯಲ್ಲಿನ ಸಿಬ್ಬಂದಿಗಳನ್ನು ವಜಾ ಮಾಡುತ್ತಿದೆ. ಈ ಉದ್ಯೋಗಿಗಳನ್ನು ಸೆಳೆಯುವ ಕಾರ್ಯವನ್ನು ಕೆಲವು ಐಟಿ ಸಂಸ್ಥೆಗಳು ನಡೆಸುತ್ತಿದೆ.

"ವಾಟ್ಸಾಪ್ ಇಂಡಿಯಾದ ಮೊದಲ ಮುಖ್ಯಸ್ಥರಾಗಿ ಅಭೂತಪೂರ್ವ ಕೊಡುಗೆಯನ್ನು ನೀಡಿರುವ ಅಭಿಜಿತ್ ಬೋಸ್ರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಅಭಿಜಿತ್ ಬೋಸ್ ನಾಯಕತ್ವದಲ್ಲಿ ನಮಗೆ ಹೊಸ ಹೊಸ ಸೇವೆಯನ್ನು ಆರಂಭ ಮಾಡಲು ಸಾಧ್ಯವಾಗಿದೆ. ಅದರಲ್ಲೂ ಮುಖ್ಯವಾಗಿ ಕೋಟ್ಯಾಂತರ ಜನರಿಗೆ ಹಾಗೂ ವ್ಯಾಪಾರಕ್ಕೆ ಸಹಾಯವಾಗಿದೆ. ವಾಟ್ಸಾಪ್ ಭಾರತದಲ್ಲಿ ಇನ್ನು ಹಲವಾರು ಅಪ್ಡೇಟ್ಗಳನ್ನು ಮಾಡಲಿದೆ. ಡಿಜಿಟಲೀಕರಣಕ್ಕೆ ಈ ಮೂಲಕ ನಾವು ಸಹಕಾರ ನೀಡುತ್ತೇವೆ," ಎಂದು ವಾಟ್ಸಾಪ್ನ ಮುಖ್ಯಸ್ಥ ವಿಲ್ ಕ್ಯಾತ್ಕಾರ್ಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮೆಟಾ ಇಂಡಿಯಾದ ಮುಖ್ಯಸ್ಥ ಅಜಿತ್ ಮೋಹನ್ ರಾಜೀನಾಮೆ ನೀಡಿದ್ದರು. ಆದರೆ ಶೀಘ್ರದಲ್ಲೇ ಅಜಿತ್ ಮೋಹನ್ ಸ್ನಾಪ್ಚಾಟ್ನ ಮುಖ್ಯಸ್ಥರಾದರು. ಇನ್ನು ರಾಜೀವ್ ಅಗರ್ವಾಲ್ ಕೂಡಾ ಬೇರೆ ಸಂಸ್ಥೆಯಲ್ಲಿನ ಅವಕಾಶಕ್ಕೆ ಮನ್ನಣೆ ನೀಡಿ, ನಮ್ಮ ಸಂಸ್ಥೆಯಿಂದ ಹೊರನಡೆಯುತ್ತಿದ್ದಾರೆ ಎಂದು ಸಂಸ್ಥೆಯು ತಿಳಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications