ಹಿಂದೂ ಹಬ್ಬಗಳಲ್ಲಿ (Hindu Festival) ಮಕರ ಸಂಕ್ರಾಂತಿ ಹಬ್ಬ ಬಹಳ ಮಹತ್ವವನ್ನು ಪಡೆದುಕೊಂಡಿದೆ. ಭಾರತದಲ್ಲಿ ಬಹಳಷ್ಟು ಮಂದಿ ಆಚರಿಸುವ ಹಬ್ಬಗಳಲ್ಲಿ ಮಕರ ಸಂಕ್ರಾಂತಿಯೂ ಒಂದು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುದ ಭಾರತ, ಪ್ರತೀ ಹಬ್ಬ, ವಿಶೇಷ ದಿನಗಳನ್ನು ಬಹಳ ಸಂಭ್ರಮದಿಂದ ಆಚರಿಸುತ್ತದೆ. ಇನ್ನು ಮಕರ ಸಂಕ್ರಾಂತಿಯನ್ನು ಒಂದೊಂದು ಕಡೆ ಒಂದೊಂದು ಹೆಸರಲ್ಲಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮಕರ ಸಂಕ್ರಾಂತಿ (Makara Sankranti) ಎಂದರೆ, ಆಂಧ್ರಪ್ರದೇಶ ತಮಿಳುನಾಡಿನಲ್ಲಿ ಪೊಂಗಲ್ (Pongal), ಪಂಜಾಬ್-ಹರಿಯಾಣದಲ್ಲಿ ಲೋಹರಿ, ಅಸ್ಸಾಂನಲ್ಲಿ ಮಘಾ ಬಿಹು, ಬಿಹಾರದಲ್ಲಿ ಕಿಚಡಿ ಎಂದು ಆಚರಿಸಲಾಗುತ್ತದೆ.

ಮಕರ ಸಂಕ್ರಾಂತಿಯು ಭಾರತದಲ್ಲಿ ಆಚರಿಸಲಾಗುವ ಒಂದು ಪ್ರಮುಖ ಧಾರ್ಮಿಕ ಹಬ್ಬ. ಇದನ್ನು ಉತ್ತರಾಯಣ ಎಂದೂ ಕರೆಯಲಾಗುತ್ತದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವುದನ್ನು ಸೂಚಿಸುವ ಈ ಹಬ್ಬ, ಚಳಿಗಾಲದ ಅಂತ್ಯ ಮತ್ತು ಬಿಸಿಲು ಹೆಚ್ಚಾಗುವ ಹೊಸ ಋತುವಿನ ಆರಂಭವನ್ನು ಸೂಚಿಸುತ್ತದೆ. ಇದು ಸೂರ್ಯ ದೇವರು, ಸೂರ್ಯನನ್ನು ಗೌರವಿಸುವ ದಿನವನ್ನಾಗಿ ಪರಿಗಣಿಸಲಾಗಿದೆ.
ಯಾವಾಗ ಆಚರಿಸಲಾಗುತ್ತೆ ಮಕರ ಸಂಕ್ರಾಂತಿ?
- 2026ರಲ್ಲಿ ಮಕರ ಸಂಕ್ರಾಂತಿಯನ್ನು ಜನವರಿ 14, ಬುಧವಾರದಂದು ಆಚರಿಸಲಾಗುತ್ತದೆ. ದೃಕ್ ಪಂಚಾಂಗದ ಪ್ರಕಾರ, ಈ ಕೆಳಗಿನ ಸಮಯಗಳು ಶುಭಕರವಾಗಿವೆ:
- ಮಕರ ಸಂಕ್ರಾಂತಿ ಪುಣ್ಯಕಾಲ ಮಧ್ಯಾಹ್ನ 03:13 ರಿಂದ ಸಂಜೆ 06:15 ರವರೆಗೆ ಇರಲಿದೆ (03 ಗಂಟೆ 02 ನಿಮಿಷಗಳು).
- ಮಕರ ಸಂಕ್ರಾಂತಿ ಮಹಾ ಪುಣ್ಯಕಾಲ ಮಧ್ಯಾಹ್ನ 03:13 ರಿಂದ ಸಂಜೆ 05:02 ರವರೆಗೆ (01 ಗಂಟೆ 49 ನಿಮಿಷಗಳು).
ಮಕರ ಸಂಕ್ರಾಂತಿ ಹಬ್ಬದ ಮಹತ್ವ:
ಮಕರ ಸಂಕ್ರಾಂತಿ ಹಬ್ಬವನ್ನು ಸೂರ್ಯ ದೇವನಿಗಾಗಿ ಆಚರಿಸಲಾಗುತ್ತದೆ. ಈ ಹಬ್ಬವು ಹಿಂದೂ ಕ್ಯಾಲೆಂಡರ್ನಲ್ಲಿ ಉತ್ತರಾಯಣ ಅವಧಿ ಎಂದು ಕರೆಯಲ್ಪಡುತ್ತದೆ. ಆಧ್ಯಾತ್ಮಿಕವಾಗಿ ಈ ಅವಧಿಯನ್ನು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಇನ್ನು ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಜನರು ಗಂಗಾ ಮತ್ತು ಯಮುನಾ ನದಿಗಳು ಸಂಗಮವಾಗುವ ಸ್ಥಳದಲ್ಲಿ ಪವಿತ್ರ ಸ್ನಾನವನ್ನು ಕೈಗೊಳ್ಳುತ್ತಾರೆ. ಈ ಪವಿತ್ರ ಸ್ನಾನದಿಂದಾಗಿ ಹಿಂದಿನ ಪಾಪಗಳಿಗೆಲ್ಲಾ ಪರಿಹಾರ ಸಿಗುತ್ತದೆ ಎಂಬುದು ನಂಬಿಕೆ.
ಇನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ, ಪ್ರತೀ ತಿಂಗಳಿನಂತೆ, ಒಂದು ವರ್ಷದಲ್ಲಿ 12 ಸಂಕ್ರಾಂತಿಗಳಿವೆ. ಆದ್ರೆ ಮಕರ ಸಂಕ್ರಾಂತಿ ಬಹಳ ಮಹತ್ವ ನೀಡಲಾಗುತ್ತದೆ.
ಪುರಾಣಗಳ ಪ್ರಕಾರ, ಸಂಕ್ರಾಂತಿ ಎಂಬ ದೇವತೆಯು (ಸೂರ್ಯನ ಶಕ್ತಿಯಿಂದ ಉಗಮವಾದ ದೇವಿ) ಭೂಮಿಯ ಮೇಳೆ ಭಯ ಹುಟ್ಟಿಸುತ್ತಿದ್ದ ಶಂಕರಾಸುರ ಎಂಬ ರಾಕ್ಷಸನನ್ನು ವಧಿಸಿದಳು. ಈ ರಾಕ್ಷಸನು ಜನರಿಗೆ ಹಿಂಸೆ ನೀಡುತ್ತಿದ್ದನು. ಇದೇ ಕಾರಣದಿಂದ ದೇವಿ ಈ ದುಷ್ಟ ರಾಕ್ಷಸನನ್ನು ಸಂಹರಿಸಿ ಭೂಮಿಯನ್ನು ರಕ್ಷಿಸಿದಳು. ಇದೇ ಕಾರಣಕ್ಕೆ ಈ ದಿನವನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುತ್ತದೆ. ಇನ್ನು ಮರುದಿನವನ್ನು ಕಿಂಕ್ರಾಂತ್ ಅಥವಾ ಕರಿದಿನ ಎಂದೂ ಕರೆಯುತ್ತಾರೆ.
ಪೂಜಾ ವಿಧಾನ:
ಮಕರ ಸಂಕ್ರಾಂತಿಯಂದು ಭಕ್ತರು ಸೂರ್ಯೋದಯಕ್ಕೂ ಮುನ್ನ ಎದ್ದು ಗಂಗಾ, ಕಾವೇರಿ, ಕೃಷ್ಣಾ ಮುಂತಾದ ಪವಿತ್ರ ನದಿಗಳಲ್ಲಿ ಸ್ನಾನ ಮಾಡುತ್ತಾರೆ. ಪ್ರಾರ್ಥನೆ ಮತ್ತು ಮಂತ್ರ ಪಠಣದೊಂದಿಗೆ ಈ ಸ್ನಾನ ಪಾಪಗಳನ್ನು ತೊಳೆದು ಶುಭ ತರುತ್ತದೆ ಎಂಬ ನಂಬಿಕೆಯಿದೆ. ಶುಭ ದಿನವಾದ್ದರಿಂದ, ಈ ದಿನ ದಾನ ಧರ್ಮಗಳನ್ನು ಮಾಡುವುದರಿಂದ ಆತ್ಮ ಶುದ್ಧಿ ಮತ್ತು ಸಕಾರಾತ್ಮಕ ಕರ್ಮ ಲಭಿಸುತ್ತದೆ ಎಂಬ ನಂಬಿಕೆಯಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications