ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸತತ ಎಂಟನೇ ಬಾರಿ ಸಂಸತ್ನಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಈ ವೇಳೆ ಸರ್ಕಾರದ ಯೋಜನೆಗಳು, ತೆರಿಗೆ, ವೆಚ್ಚಗಳು, ಆರ್ಥಿಕ ಬೆಳವಣಿಗೆಗಳ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಲಿದ್ದಾರೆ.
ನಿರ್ಮಲಾ ಸೀತಾರಾಮನ್ ಸತತ 8ನೇ ಬಾರಿ ಬಜೆಟ್ ಮಂಡಿಸುತ್ತಿದ್ದರೂ ಕೂಡ ಈ ಬಜೆಟ್ಅನ್ನು ತಯಾರು ಮಾಡಲು ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಪ್ರಮುಖರು ಭಾಗಿಯಾಗಿರುತ್ತಾರೆ. ಹೌದು ದೇಶವೇ ಎದುರು ನೋಡುತ್ತಿರುವ ಬಜೆಟ್ 2025ರ ರುವಾರಿಗಳ ಬಗ್ಗೆ ನೀವು ತಿಳಿಯಲೇಬೇಕು.

ಈ ಬಜೆಟ್ ಶಿಸ್ತುಬದ್ಧವಾಗಿ ಮೂಡಿಬರಲು ತೆರೆಯ ಹಿಂದೆ ಕೆಲಸಮಾಡಿದವರ ಬಗ್ಗೆ ನಾವು ತಿಳಿಯಲೇ ಬೇಕಾಗುತ್ತದೆ. ಇವರುಗಳು ಆದಾಯ ನಿರ್ವಹಣೆ, ಸಾರ್ವಜನಿಕ ವೆಚ್ಚವನ್ನ ಯೋಜಿಸುವುದರ ಜೊತೆಗೆ ಆರ್ಥಿಕತೆಯ ಪ್ರತೀ ಹಂತದಲ್ಲೂ ಕೂಡ ಕೆಲಸ ಮಾಡುತ್ತಾರೆ. ಅವರ ಬಗ್ಗೆ ಇಲ್ಲಿ ನೋಡೋಣ.
ತುಹಿನ್ ಕಾಂತಾ ಪಾಂಡೆ- ಹಣಕಾಸು ಮತ್ತು ಕಂದಾಯ ಕಾರ್ಯದರ್ಶಿ
ತುಹಿನ್ ಕಾಂತಾ ಪಾಂಡೆ ಅವರು ಭಾರತದ ಹಣಕಾಸು ಮತ್ತು ಕಂದಾಯ ಕಾರ್ಯದರ್ಶಿಯಾಗಿದ್ದಾರೆ . ಹಣಕಾಸು ಕಾರ್ಯದರ್ಶಿಯಾಗಿ, ಅವರು ದೇಶದ ಹಣಕಾಸು ನೀತಿಗಳು, ಸಾರ್ವಜನಿಕ ಹಣಕಾಸು ಮತ್ತು ಒಟ್ಟಾರೆ ಆರ್ಥಿಕ ಯೋಜನೆಗಳನ್ನು ನಿರ್ವಹಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಅವರು 1987ರ ಬ್ಯಾಚ್ನ ಒಡಿಶಾ ಕೇಡರ್ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿ. ಇತ್ತೀಚೆಗೆ ಅವರು ಕಾರ್ಯದರ್ಶಿಯಾಗಿ ನೇಮಕರಾಗಿರುವುದು.
ಅವರು ಭಾರತದ ಹಣಕಾಸು ಮತ್ತು ವಿತ್ತೀಯ ನೀತಿಗಳಿಗೆ ಸಂಬಂಧಿಸಿದ ಅಂಶಗಳನ್ನ ಒಳಗೊಂಡಂತೆ ಹಣಕಾಸು ಮತ್ತು ಆರ್ಥಿಕ ನೀತಿ ವಿಷಯಗಳ ಮೇಲೆ ಕೆಲಸ ಮಾಡಿದ್ದಾರೆ. ಪಾಂಡೆ ಅವರು ದೇಶದ ಹಣಕಾಸು ನಿರ್ವಹಣೆ, ತೆರಿಗೆಗಳ ಆಡಳಿತದ ಮೇಲ್ವಿಚಾರಣೆ ಮತ್ತು ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದ ನೀತಿಗಳನ್ನ ರೂಪಿಸುವಲ್ಲಿ ತಮ್ಮನ್ನ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಬಜೆಟ್ನ ಅನುಷ್ಠಾನದ ಮೇಲ್ವಿಚಾರಣೆ ಮತ್ತು ಕೇಂದ್ರ ಸರ್ಕಾರದ ಆದಾಯದ ಮಾರ್ಗಗಳಾದ ಜಿಎಸ್ಟಿ, ಆದಾಯ ತೆರಿಗೆ ಮತ್ತು ಕಾರ್ಪೊರೇಟ್ ತೆರಿಗೆ ಸಂಗ್ರಹವನ್ನು ನಿರ್ವಹಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.
ವಿ ಅನಂತ ನಾಗೇಶ್ವರನ್- ಮುಖ್ಯ ಆರ್ಥಿಕ ಸಲಹೆಗಾರ
ವಿ ಅನಂತ ನಾಗೇಶ್ವರನ್ ಅವರು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದಾರೆ (CEA). ಹಿಂದಿನ ಸಿಇಎ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ನಿವೃತ್ತಿಯ ನಂತರ ಅವರು 2022ರಲ್ಲಿ ಅವರು ನೇಮಕಗೊಂಡರು. ಭಾರತದ ಆರ್ಥಿಕ ನೀತಿಯನ್ನು ರೂಪಿಸುವಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಾರೆ. ಪ್ರಮುಖ ಆರ್ಥಿಕ ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವಲ್ಲಿ, ದೇಶದ ಬೆಳವಣಿಗೆಯ ಕುರಿತು ಸೂಚನೆಗಳನ್ನ ನೀಡುವಲ್ಲಿ ಮತ್ತು ಹಣಕಾಸಿನ ನೀತಿಗಳ ಮೇಲ್ವಿಚಾರಣೆಯಲ್ಲಿ ನಾಗೇಶ್ವರನ್ ಪ್ರಮುಖ ಪಾತ್ರ ವಹಿಸುತ್ತಾರೆ.
ಅಲ್ಲದೆ ಪ್ರತೀ ವರ್ಷ ಭಾರತದ ಆರ್ಥಿಕ ಸಮೀಕ್ಷೆಯನ್ನು ರೂಪಿಸುವ ಮತ್ತು ಮೇಲ್ವಿಚಾರಣೆ ಮಾಡುವ ಜವಬ್ದಾರಿಯನ್ನ ಹೊಂದಿದ್ದಾರೆ. ಭಾರತದ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ, ಹಣಕಾಸು, ವಿತ್ತೀಯ ಮತ್ತು ಬೆಳವಣಿಗೆಯ ಕಾರ್ಯತಂತ್ರಗಳ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತಾರೆ. ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ವ್ಯಾಪಾರ, ಹೂಡಿಕೆ ಮತ್ತು ಆರ್ಥಿಕ ಸ್ಥಿರತೆಯ ಕುರಿತು ಮಾಹಿತಿಯನ್ನ ಕಲೆ ಹಾಕುತ್ತಾರೆ.
ಮನೋಜ್ ಗೋವಿಲ್- ಕಾರ್ಯದರ್ಶಿ, ಖರ್ಚು ಇಲಾಖೆ
ಮನೋಜ್ ಗೋವಿಲ್ ಅವರು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯ ಕಾರ್ಯದರ್ಶಿಯಾಗಿದ್ದಾರೆ . 1991 ರ ಬ್ಯಾಚ್ನ ಮಧ್ಯಪ್ರದೇಶ ಕೇಡರ್ನ ಐಎಎಸ್ ಅಧಿಕಾರಿಯಾಗಿರುವ ಗೋವಿಲ್ ಅವರು ಕಾರ್ಯದರ್ಶಿಯಾಗಿ, ಸಾರ್ವಜನಿಕ ಹಣಕಾಸು ನಿರ್ವಹಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನ ಹೊಂದಿದ್ದಾರೆ. ಬಜೆಟ್ ತಯಾರಿಕೆಯನ್ನು ಸಂಯೋಜಿಸುವುದು, ಸರ್ಕಾರದ ವೆಚ್ಚವನ್ನು ಮೇಲ್ವಿಚಾರಣೆ ಮಾಡುವುದು ಮತ್ತು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಾದ್ಯಂತ ಹಣಕಾಸು ಸಂಪನ್ಮೂಲಗಳನ್ನು ನಿರ್ವಹಿಸುವ ಪಾತ್ರವನ್ನ ವಹಿಸಿದ್ದಾರೆ.
ಖರ್ಚು ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸರ್ಕಾರಿ ನೀತಿಗಳನ್ನ ಅನುಷ್ಠಾನಗೊಳಿಸುವುದು ಇವರ ಕೆಲಸ ಆಗಿದೆ. ಅಲ್ಲದೆ ಕೇಂದ್ರ ಬಜೆಟ್ನ ರಚನೆ ಮತ್ತು ವಿವಿಧ ಕ್ಷೇತ್ರಗಳಿಗೆ, ರಾಜ್ಯಗಳಿಗೆ ಸಂಪನ್ಮೂಲಗಳನ್ನ ಹಂಚುವ ಕೆಲಸ ಇವರದ್ದು.
ಅಜಯ್ ಸೇಠ್ - ಕಾರ್ಯದರ್ಶಿ, ಆರ್ಥಿಕ ವ್ಯವಹಾರಗಳ ಇಲಾಖೆ
ಅಜಯ್ ಸೇಠ್ ಅವರು 1987ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ. ಈಗ ಅವರು ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದಾರೆ. ಅವರು ಭಾರತದ ಹಣಕಾಸು ಮತ್ತು ಆರ್ಥಿಕ ನಿರ್ವಹಣೆಗೆ ಸಂಬಂಧಿಸಿದ ಆರ್ಥಿಕ ನೀತಿಗಳನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.
ಆರ್ಥಿಕ ವ್ಯವಹಾರಗಳ ಇಲಾಖೆಯು ಸ್ಥೂಲ ಆರ್ಥಿಕ ಸಮಸ್ಯೆಗಳು, ಸರ್ಕಾರಿ ಸಾಲ, ಸಾರ್ವಜನಿಕ ವಲಯದ ಹೂಡಿಕೆಗಳು, ಹಣಕಾಸು ಮಾರುಕಟ್ಟೆಗಳು ಮತ್ತು ಅಂತರರಾಷ್ಟ್ರೀಯ ಹಣಕಾಸು ಸಂಬಂಧಗಳನ್ನು ಮೇಲ್ವಿಚಾರಣೆ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಅವರು ಭಾರತದ ಹಣಕಾಸಿನ ಚೌಕಟ್ಟಿನ ನಿರ್ವಹಣೆ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಸಾಧಿಸುವ ಕಾರ್ಯತಂತ್ರಗಳನ್ನು ಒಳಗೊಂಡಂತೆ ಆರ್ಥಿಕ ನೀತಿಯ ರಚನೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ.
ಎಂ ನಾಗರಾಜು - ಕಾರ್ಯದರ್ಶಿ, ಹಣಕಾಸು ಸೇವೆಗಳ ಇಲಾಖೆ
ಎಂ ನಾಗರಾಜು ಅವರು 1993ರ ಬ್ಯಾಚ್ನ ತ್ರಿಪುರ ಕೇಡರ್ನ ಐಎಎಸ್ ಅಧಿಕಾರಿ. ಈಗ ಅವರು ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿಯಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಹಣಕಾಸು ಸಂಸ್ಥೆಗಳು, ಬ್ಯಾಂಕ್ಗಳು, ವಿಮಾ ಕಂಪನಿಗಳು ಮತ್ತು ಪಿಂಚಣಿ ನಿಧಿಗಳನ್ನು ನಿರ್ವಹಿಸುವ ಭಾರತೀಯ ಹಣಕಾಸು ಕ್ಷೇತ್ರದ ಕಾರ್ಯನಿರ್ವಹಣೆಯನ್ನ ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನ ಹೊಂದಿದ್ದಾರೆ.
ನಾಗರಾಜು ಅವರು ಈ ಹಿಂದೆ ಕಲ್ಲಿದ್ದಲು ಸಚಿವರಾಗಿದ್ದರು. ಈಗ ಬ್ಯಾಂಕಿಂಗ್ ಕ್ಷೇತ್ರ, ವಿಮೆ, ಪಿಂಚಣಿ ಯೋಜನೆಗಳು ಮತ್ತು ಸರ್ಕಾರಿ ಪ್ರಾಯೋಜಿತ ಹಣಕಾಸು ಕಾರ್ಯಕ್ರಮಗಳಿಗೆ ಸಂಬಂಧಿಸಿದ ನೀತಿಗಳನ್ನು ರೂಪಿಸುವ ಪಾತ್ರವನ್ನ ವಹಿಸಿದ್ದಾರೆ.
ಅರುಣೀಶ್ ಚಾವ್ಲಾ- ಕಾರ್ಯದರ್ಶಿ, DIPAM ಮತ್ತು DPE
ಅರುಣೀಶ್ ಚಾವ್ಲಾ ಅವರು 1992ರ ಬ್ಯಾಚ್ನ ಬಿಹಾರ್ ಕೇಡರ್ನ ಐಎಎಸ್ ಅಧಿಕಾರಿ. ಈಗ ಅವರು ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (DIPAM) ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆ (DPE) ಕಾರ್ಯದರ್ಶಿಯಾಗಿದ್ದಾರೆ. ಹೂಡಿಕೆ ಮತ್ತು ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಂಬಂಧಿಸಿದ ಸರ್ಕಾರದ ನೀತಿಗಳನ್ನು ನಿರ್ವಹಿಸುವ ಮತ್ತು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಚಾವ್ಲಾ ಹೊಂದಿದ್ದಾರೆ.
ಚಾವ್ಲಾ ಅವರು ಭಾರತದ ಹಣಕಾಸಿನ ಕಾರ್ಯತಂತ್ರದ ಪ್ರಮುಖ ಅಂಶವಾಗಿರುವ ಹೂಡಿಕೆಯ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ. ಇದು ಸಾರ್ವಜನಿಕ ವಲಯದ ಉದ್ಯಮಗಳ ಖಾಸಗೀಕರಣವನ್ನು ನಿರ್ವಹಿಸುವುದು, ಕಾರ್ಯತಂತ್ರದ ಮಾರಾಟಗಳು ಮತ್ತು ವ್ಯಾಪಾರ ಚಟುವಟಿಕೆಗಳಲ್ಲಿ ಸರ್ಕಾರದ ನೇರ ಒಳಗೊಳ್ಳುವಿಕೆಯನ್ನು ಕಡಿಮೆ ಮಾಡುವ ಪ್ರಕ್ರಿಯೆಯನ್ನು ಒಳಗೊಂಡಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications