ಭ್ರಷ್ಟಾಚಾರ ನಿಯಂತ್ರಣಕ್ಕೆ ಮುಂದಾಗಿರುವ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಗುರುವಾರ ಪ್ರಸ್ತಾವವೊಂದಕ್ಕೆ ಒಪ್ಪಿಗೆ ಸೂಚಿಸಿದೆ. ಲಂಚದ ಪ್ರಕರಣಗಳನ್ನು ವರದಿ ಮಾಡಿ, 1 ಸಾವಿರದಿಂದ 50 ಸಾವಿರ ರುಪಾಯಿ ತನಕ ನಗದು ಪುರಸ್ಕಾರ ಪಡೆಯಿರಿ ಎಂದು ಜನರಿಗೆ ಆಹ್ವಾನ ನೀಡಿದೆ.
ಬಿಹಾರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ 16 ಪ್ರಸ್ತಾವಗಳಲ್ಲಿ ಇದೂ ಒಂದು. ಈ ನಿರ್ಧಾರದ ಅನ್ವಯ, ಲಂಚಕ್ಕಾಗಿ ಬೇಡಿಕೆ ಇಡುವ ಸಿಬ್ಬಂದಿ, ಅಧಿಕಾರಿಗಳ ಬಗ್ಗೆ ದೂರು ನೀಡುವ ಜನರಿಗೆ ರಾಜ್ಯ ಸರ್ಕಾರವು ನಗದು ಪುರಸ್ಕಾರವನ್ನು ನೀಡಲಿದೆ. ಇದಕ್ಕಾಗಿ ರಾಜ್ಯ ಸರ್ಕಾರದಿಂದ ಬಹುಮಾನ ನಿಧಿಯನ್ನು ಸಹ ಸ್ಥಾಪಿಸಿದೆ.
ಈ ನಿಧಿಯ ಮೂಲಕ ದೂರುದಾರರು ಕೋರ್ಟ್ ಗೆ ಹೋಗಿಬರುವ ಖರ್ಚು, ಕೋರ್ಟ್ ವೆಚ್ಚಗಳು, ಆಹಾರ- ಪಾನೀಯಕ್ಕಾಗಿ ಹೆಚ್ಚುವರಿಯಾಗಿ 200 ರುಪಾಯಿ ಮೀಸಲಿಡಲಾಗುವುದು. ದೂರುದಾರರ ಗುರುತನ್ನು ಗೋಪ್ಯವಾಗಿ ಇಡಲಾಗುತ್ತದೆ.

ಇದೇ ವೇಳೆ ಸಚಿವರ ಆಪ್ತ ಸಹಾಯಕರಿಗೆ ಹಾಗೂ ಕಾರ್ಯದರ್ಶಿಗಳಿಗೆ ಇದ್ದ ಪ್ರಯಾಣ ಭತ್ಯೆ ವಾರ್ಷಿಕ ಮೊತ್ತವನ್ನು 1.5 ಲಕ್ಷದಿಂದ 3 ಲಕ್ಷ ರುಪಾಯಿಗೆ ಏರಿಕೆ ಮಾಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications