ದೇಶದ ಪ್ರತಿಷ್ಠಿತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಮುಕೇಶ್ ಅಂಬಾನಿ ತಮ್ಮ ಮಗನ ಮದುವೆಗೆ ಭರದ ಸಿದ್ಧತೆ ನಡೆಸಿದ್ದಾರೆ. ದೇಶದಲ್ಲಿ ಇಷ್ಟೋಂದು ಪ್ರಸಿದ್ಧ ಸ್ಥಳಗಳು ಶ್ರೀಮಂತರಿಗೆ ಕೈ ಬೀಸಿ ಕರೆಯುತ್ತಿವೆ. ಅಲ್ಲದೆ ವಿದೇಶಗಳು ಸಹ ಹಣವಂತರನ್ನು ಆಕರ್ಷಿಸುತ್ತಿವೆ. ಆದರೆ ಈ ಸ್ಥಳಗಳನ್ನು ಬಿಟ್ಟು ಜಾಮ್ನಗರದಲ್ಲಿ ಏಕೆ ಮದುವೆ ಪೂರ್ವ ಕಾರ್ಯಕ್ರಮ ಏರ್ಪಡಿಸಿದ್ದಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.
ಮದುವೆ ಪೂರ್ವ ಕಾರ್ಯಕ್ರಮಕ್ಕೆ ಸಿದ್ಧತೆಗಳು ಶರವೇಗದಲ್ಲಿ ನಡೆಯುತ್ತಿವೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮಾರ್ಚ್ 1-3 ರಿಂದ ಗುಜರಾತ್ನ ಜಾಮ್ನಗರದಲ್ಲಿ ತಮ್ಮ ಅದ್ಧೂರಿ ವಿವಾಹಪೂರ್ವ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ. ಬಾಲಿವುಡ್ ತಾರೆಯರಲ್ಲದೆ, ರಾಜಕೀಯ ವ್ಯಕ್ತಿಗಳು, ದೊಡ್ಡ ಉದ್ಯಮಿಗಳು, ಅಂತರರಾಷ್ಟ್ರೀಯ ಅತಿಥಿಗಳು ಸಹ ದಂಪತಿಗಳ ವಿವಾಹಪೂರ್ವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಜಾಮ್ನಗರವೇ ಏಕೆ?
ಸೆಲೆಬ್ರಟಿಗಳು ಈ ಹಿಂಡು ಜಾಮ್ನಗರದಲ್ಲಿ ಜಮಾವಣೆ ಆಗಲಿದೆ. ಹಾಗಿದ್ದರೆ ಜಾಮನ್ಗರವನ್ನೇ ಆಯ್ಕೆ ಮಾಡಿದ್ದು ಏಕೆ ಎಂಬ ಪ್ರಶ್ನೆಗೆ ಅನಂತ್ ಅಂಬಾನಿ ಉತ್ತರ ನೀಡಿದ್ದಾರೆ. ಅವರ ಅಜ್ಜಿ ಜಾಮ್ನಗರದಲ್ಲಿ ಜನಿಸಿದರು. ಅಲ್ಲದೆ ಅವರ ಅಜ್ಜ ಧೀರೂಭಾಯಿ ಅಂಬಾನಿ ಮತ್ತು ತಂದೆ ಮುಖೇಶ್ ಅಂಬಾನಿ ತಮ್ಮ ವ್ಯಾಪಾರವನ್ನು ಜಾಮ್ನಗರದಿಂದಲೇ ಪ್ರಾರಂಭಿಸಿದರು. ಈ ಕಾರಣಕ್ಕಾಗಿ ಅವರಿಗೆ ಜಾಮ್ನಗರದೊಂದಿಗೆ ವಿಶೇಷವಾದ ಬಾಂಧವ್ಯವಿದೆ ಎಂದು ತಿಳಿಸಿದರು.
ವೆಡ್ ಇನ್ ಇಂಡಿಯಾ
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಭಾರತದಲ್ಲಿ ಅಂದರೆ 'ವೆಡ್ ಇನ್ ಇಂಡಿಯಾ'ದಲ್ಲಿ ಮದುವೆಯಾಗಲು ಮನವಿ ಮಾಡಿದ್ದರು. ಪ್ರಧಾನಿಯವರ ಈ ಮನವಿಯಿಂದ ಅನಂತ್ ಅಂಬಾನಿ ಬಹಳ ಪ್ರಭಾವಿತರಾಗಿದ್ದಾರೆ. ಈ ಕಾರಣಕ್ಕೆ ದೇಶದಲ್ಲೇ ಮದುವೆಯಾಗಲು ನಿರ್ಧರಿಸಿದ್ದಾರೆ.

ಮೋದಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಮದುವೆಗೆ ವಿದೇಶಿ ಸ್ಥಳವನ್ನು ಆಯ್ಕೆ ಮಾಡುವ ದಂಪತಿಗಳಿಗೆ ಭಾರತದಲ್ಲಿ ಮದುವೆಯಾಗುವಂತೆ ಮನವಿ ಮಾಡಿದ್ದರು. ಕೆಲವು ದೊಡ್ಡ ಕುಟುಂಬಗಳು ವಿದೇಶಗಳಲ್ಲಿ ಮದುವೆಗಳನ್ನು ಆಯೋಜಿಸುವ ಪ್ರವೃತ್ತಿಯಿಂದ ನಾನು ತೊಂದರೆಗೀಡಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದರು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications