ಈಗಾಗಲೇ ಹೊಸ ವರ್ಷದ (New Year) ಆಗಮನವಾಗಿದೆ. ಹೊಸ ವರ್ಷ ಆರಂಭವಾಗುತ್ತಿದ್ದಂತೆ ಹೊಸ ಹೊಸ ನಿಯಮಗಳು, ಹೊಸ ಹೊಸ ಕನಸುಗಳನ್ನ ಇಟ್ಟುಕೊಳ್ಳೋದು ಸಾಮಾನ್ಯ. ಇದೀಗ ಎಲ್ಲರ ಚಿತ್ತ ಫೆಬ್ರವರಿಯಲ್ಲಿ ಮಂಡನೆಯಾಗುವ ಕೇಂದ್ರ ಬಜೆಟ್ ಮೇಲೆ ನೆಟ್ಟಿದೆ. ಹೆಚ್ಚುತ್ತಿರುವ ಹಣದುಬ್ಬರದ ನಡುವೆ, ದುಡಿದ ಹಣದಲ್ಲಿ ಉಳಿತಾಯ ಮಾಡೋದು ಸವಾಲಾಗಿಬಿಟ್ಟಿದೆ. ಈಗಾಗಲೇ ಬಜೆಟ್ ಮಂಡನೆಗೆ ತಯಾರಿಗಳು ನಡೆಯುತ್ತಲೇ ಇದೆ. ಈ ಹಿನ್ನೆಲೆ ಫೆಬ್ರವರಿ 1 ರಂದು 2026-27ರ ಹಣಕಾಸು ವರ್ಷದ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026ರ ಫೆಬ್ರವರಿ 1ರಂದು ಸಂಸತ್ತಿನಲ್ಲಿ 2026-27ರ ಹಣಕಾಸು ವರ್ಷದ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಆದರೆ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವಾಲಯವು ಆರ್ಥಿಕ ಸಮೀಕ್ಷೆಯನ್ನು ಪ್ರಕಟಿಸುತ್ತದೆ. ಅದಾದ ನಂತರ, ಈ ಕುರಿತು ಮುಖ್ಯ ಆರ್ಥಿಕ ಸಲಹೆಗಾರರು ಹಾಗೂ ಸಚಿವಾಲಯದ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸುತ್ತಾರೆ. ಹಾಗಿದ್ರೆ ಆರ್ಥಿಕ ಸಮೀಕ್ಷೆ ಎಂದರೇನು? ಇದನ್ನು ಯಾರು ಮತ್ತು ಯಾವಾಗ ಮಂಡಿಸುತ್ತಾರೆ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಆರ್ಥಿಕ ಸಮೀಕ್ಷೆ ಎಂದರೇನು?
ಆರ್ಥಕ ಸಮೀಕ್ಷೆ ಎಂದರೆ ಭಾರತ ಸರ್ಕಾರ ಹಣಕಾಸು ಸಚಿವಾಲಯದ ಸಹಕಾರಿದಂ ವಾರ್ಷಿಕವಾಗಿ ಸಿದ್ಧಪಡಿಸುವ ಮುಖ್ಯ ದಾಖಲೆಯಾಗಿದೆ. ಇನ್ನು ಇದನ್ನು ಮುಖ್ಯ ಆರ್ಥಿಕ ಸಲಹೆಗಾರ (ChieF Economic Adviser) ನೇತೃತ್ವದಲ್ಲಿ ತಯಾರಿಸಲಾಗುತ್ತದೆ.
ಬಜೆಟ್ಗೂ ಮುನ್ನ ರಚಿಸುವ ಆರ್ಥಿಕ ಸಮೀಕ್ಷೆಯು ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಅವರ ಮಾರ್ಗದರ್ಶನದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಸಿದ್ಧಪಡಿಸುವ ವಾರ್ಷಿಕ ವರದಿಯಾಗಿರುತ್ತದೆ. ಇದು ಹಿಂದಿನ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಸ್ಥಿತಿಗತಿಯನ್ನು ವಿವರವಾಗಿ ವಿವರಿಸುವ ಒಂದು ಸಮೀಕ್ಷೆಯಾಗಿದೆ. ಇದು ದೇಶದ ಆರ್ಥಿಕ ಪ್ರಗತಿ ಮತ್ತು ಸವಾಲುಗಳ ಬಗ್ಗೆ ಸಮಗ್ರ ನೋಟ ನೀಡುತ್ತದೆ.
ಈ ಸಮೀಕ್ಷೆಯನ್ನು ಭಾಗ ಎ ಮತ್ತು ಭಾಗ ಬಿ ಎಂದು ಎರಡು ವಿಭಾಗಗಳಾಗಿ ವಿಂಗಡಿಸಲಾಗುತ್ತದೆ. ಮೊದಲ ಭಾಗವು ವರ್ಷದ ಪ್ರಮುಖ ಆರ್ಥಿಕ ಬೆಳವಣಿಗೆಗಳು ಹಾಗೂ ಆರ್ಥಿಕತೆಯ ಸಮಗ್ರ ವಿವರಣೆಯನ್ನು ನೀಡುತ್ತದೆ. ಅದೇ ರೀತಿ ಎರಡನೇ ಭಾಗವು ಸಾಮಾಜಿಕ ಭದ್ರತೆ, ಬಡತನ, ಶಿಕ್ಷಣ, ಆರೋಗ್ಯ ರಕ್ಷಣೆ, ಮಾನವ ಅಭಿವೃದ್ಧಿ ಹಾಗೂ ಹವಾಮಾನದಂತಹ ನಿರ್ದಿಷ್ಟ ಪ್ರಮುಖ ವಿಷಯಗಳನ್ನು ವಿವರಿಸುತ್ತದೆ.
ಯಾವಾಗ ಸಲ್ಲಿಸಲಾಗುತ್ತದೆ?
- ಕೇಂದ್ರ ಬಜೆಟ್ ಮಂಡಿಸುವ ಒಂದು ದಿನ ಮೊದಲು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಡಿಸಲಾಗುತ್ತದೆ.
- ಅಂದರೆ ಫೆಬ್ರವರಿ 1ಕ್ಕೆ ಬಜೆಟ್ ಮಂಡನೆ ಮಾಡುವುದಾದ್ರೆ, ಜನವರಿ 31 ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆಯಾಗುತ್ತದೆ.
- ಹಣಕಾಸು ಸಚಿವರು ಇದನ್ನು ಸಂಸತ್ತಿನಲ್ಲಿ ಮಂಡಿಸುತ್ತಾರೆ ಮತ್ತು ಮುಖ್ಯ ಆರ್ಥಿಕ ಸಲಹೆಗಾರರು ಪತ್ರಿಕಾಗೋಷ್ಠಿ ನಡೆಸಿ ಇದನ್ನು ವಿವರಿಸುತ್ತಾರೆ.
ಮೊದಲ ಆರ್ಥಿಕ ಸಮೀಕ್ಷೆ ಮಂಡನೆಯಾಗಿದ್ದು ಯಾವಾಗ?
ಭಾರತದಲ್ಲಿ ಮೊದಲ ಆರ್ಥಿಕ ಸಮೀಕ್ಷೆಯನ್ನು 1950-51ರಲ್ಲಿ ಮಂಡಿಸಲಾಯಿತು. 1964ರವರೆಗೆ ಈ ವರದಿಯನ್ನು ಕೇಂದ್ರ ಬಜೆಟ್ ಜೊತೆಯಲ್ಲೇ ಮಂಡನೆ ಮಾಡಲಾಗುತ್ತಿತ್ತು. ಆದರೆ ಕ್ರಮೇಣ, ಇದನ್ನು ಪ್ರತ್ಯೇಕಿಸಿ ಬಜೆಟ್ ಮಂಡನೆಗೂ ಮುನ್ನ ಪ್ರಸ್ತುತಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications