ದೀರ್ಘ ಕಾಲದಿಂದ ರೈಲಿನಲ್ಲಿ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವಂತೆ ಒತ್ತಾಯಿಸುತ್ತಿದ್ದ ಹಿರಿಯ ನಾಗರಿಕರಿಗೆ ಇಲ್ಲಿ ಒಂದು ದೊಡ್ಡ ಅಪ್ಡೇಟ್ ಇದೆ. ಭಾರತೀಯ ರೈಲ್ವೇಯು ಪೂರ್ವ ಕೋವಿಡ್ ಸಂದರ್ಭದಲ್ಲಿದ್ದ ಟಿಕೆಟ್ ದರದ ರಿಯಾಯಿತಿಯನ್ನು ಮತ್ತೆ ಆರಂಭಿಸುತ್ತದೆಯೇ?
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪ್ರತಿ ಪ್ರಯಾಣಿಕರು ರೈಲು ಪ್ರಯಾಣದಲ್ಲಿ ಶೇಕಡ 55 ರಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ. ಹಿರಿಯ ನಾಗರಿಕರು ಮತ್ತು ಮಾಧ್ಯಮದವರಿಗೆ ಕೋವಿಡ್ ಪೂರ್ವದ ಪ್ರಯಾಣ ದರದ ರಿಯಾಯಿತಿಗಳನ್ನು ಮತ್ತೆ ಆರಂಭಿಸುವ ಬೇಡಿಕೆಗಳ ಕುರಿತು ಮಾತನಾಡಿದರು.

ಟಿಕೆಟ್ ದರದಲ್ಲಿ ಕಡಿತ ಮತ್ತೆ ಆರಂಭಿಸಲಾಗುತ್ತಾ?
ರಿಯಾಯಿತಿಗಳನ್ನು ಮತ್ತೆ ಆರಂಭ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಯಾವುದೇ ನೇರ ಉತ್ತರವನ್ನು ನೀಡದೆ ವೈಷ್ಣವ್, "ಭಾರತೀಯ ರೈಲ್ವೆ ಈಗಾಗಲೇ ಪ್ರತಿ ರೈಲು ಪ್ರಯಾಣಿಕರಿಗೆ ರೈಲು ದರದಲ್ಲಿ ಶೇಕಡ 55 ರಷ್ಟು ರಿಯಾಯಿತಿಯನ್ನು ನೀಡುತ್ತಿದೆ," ಎಂದು ಹೇಳಿದರು.
ಅಹಮದಾಬಾದ್ನಲ್ಲಿ ನಡೆಯುತ್ತಿರುವ ಬುಲೆಟ್ ರೈಲು ಯೋಜನೆಯ ಪ್ರಗತಿಯನ್ನು ಪರಿಶೀಲಿಸಲು ಬಂದ ವೈಷ್ಣವ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ ಈ ಮೇಲಿನ ಹೇಳಿಕೆ ನೀಡಿದ್ದಾರೆ.
ಭಾರತೀಯ ರೈಲ್ವೆಯು ಕೋವಿಡ್ ಸಂದರ್ಭದಲ್ಲಿ 50% ರಿಯಾಯಿತಿಯನ್ನು ನೀಡಿದೆ. ಮಾರ್ಚ್ 2020 ರಲ್ಲಿ ವಿಧಿಸಲಾದ ಕೋವಿಡ್ ಲಾಕ್ಡೌನ್ಗೆ ಮೊದಲು, ರೈಲ್ವೆಯು ಹಿರಿಯ ನಾಗರಿಕರು ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಪತ್ರಕರ್ತರಿಗೆ ರೈಲು ದರಗಳಲ್ಲಿ ಶೇಕಡ 50 ರಷ್ಟು ರಿಯಾಯಿತಿಯನ್ನು ನೀಡಿತು.
ಲಾಕ್ಡೌನ್ ಸಮಯದಲ್ಲಿ ರೈಲ್ವೇ ಕಾರ್ಯಾಚರಣೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಜೂನ್ 2022 ರಲ್ಲಿ ಪೂರ್ಣ ಪ್ರಮಾಣದ ಪುನರಾರಂಭವಾದಾಗ, ರೈಲ್ವೆ ಸಚಿವಾಲಯವು ಈ ರಿಯಾಯಿತಿಗಳನ್ನು ಮತ್ತೆ ಸ್ಥಾಪಿಸಿಲ್ಲ. ಅಂದಿನಿಂದ ಸಂಸತ್ತಿನ ಉಭಯ ಸದನಗಳು ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಈ ಸಮಸ್ಯೆಯನ್ನು ಎತ್ತಲಾಗಿದೆ.
ಆದರೆ ಅನೇಕ ಸಹ ಸಂಸದರು ಪ್ರಶ್ನಿಸಿದಾಗ ರೈಲ್ವೆ ಸಚಿವರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿವಿಧ ಸಂದರ್ಭಗಳಲ್ಲಿ ಇದೇ ನಿಲುವನ್ನು ಸಚಿವರು ಉಳಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು, ಮಧ್ಯಪ್ರದೇಶ ಮೂಲದ ಚಂದ್ರಶೇಖರ್ ಗೌರ್ ಅವರು ಸಲ್ಲಿಸಿದ ಆರ್ಟಿಐ ಅರ್ಜಿಗೆ ಪ್ರತಿಕ್ರಿಯಿಸಿದ ಭಾರತೀಯ ರೈಲ್ವೇ 2022-23ರ ಹಣಕಾಸು ವರ್ಷದಲ್ಲಿ ಸರಿಸುಮಾರು 15 ಕೋಟಿ ಹಿರಿಯ ನಾಗರಿಕರಿಂದ ಸುಮಾರು 2,242 ಕೋಟಿ ರೂಪಾಯಿ ಗಳಿಸಿದೆ ಎಂದು ಹೇಳಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications