ಬೆಂಗಳೂರು, ಜುಲೈ 14: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಜುಲೈ 23ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಬಗ್ಗೆ ತಜ್ಞರ ವಲಯದಲ್ಲಿ ಸಾಕಷ್ಟು ಚರ್ಚೆಗಳು, ವಿಶ್ಲೇಷಣೆಗಳು ನಡೆಯುತ್ತಿದ್ದು, ಯಾವ ವಲಯಕ್ಕೆ ಯಾವ ರೀತಿಯ ಬರಪೂರ ಕೊಡುಗೆ ದೊರೆಯಬಹುದು ಎನ್ನುವ ಲೆಕ್ಕಾಚಾರಗಳು ಶುರುವಾಗಿದೆ.
ಹೀಗಿರುವಾಗ, ಮೋದಿ ಅವರ 3.0 ಸರ್ಕಾರದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಈ ಬಾರಿಯ ಬಜೆಟ್ ಭಾರತವನ್ನು 2047ರಲ್ಲಿ ಅಭಿವೃದ್ಧಿಯ ದೇಶವನ್ನಾಗಿ ರೂಪಿಸುವಲ್ಲಿ ರೋಡ್ಮ್ಯಾಪ್ ಆಗಲಿದೆ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ ವೇಳೆ, ದೇಶದ ಆರ್ಥಿಕ ಬಲವರ್ಧನೆಗೆ ಐತಿಹಾಸಿಕ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಜು.23ರಂದು ಮಂಡಿಸುವ ಬಜೆಟ್ನಲ್ಲಿ ಕೈಗಾರಿಕೆ, ರೈತರು, ತೆರಿಗೆದಾರರು, ಮಧ್ಯಮ ವರ್ಗದವರು ಸೇರಿದಂತೆ ಎಲ್ಲ ವಲಯ, ವರ್ಗದ ಜನರು ಕೂಡ ಗಮನಾರ್ಹವಾದ ತೆರಿಗೆ ವಿನಾಯಿತಿ, ಪ್ರೋತ್ಸಾಹದಾಯಕ ಕ್ರಮಗಳನ್ನು ಎದುರು ನೋಡುತ್ತಿದ್ದಾರೆ. ಮಧ್ಯಮ ವರ್ಗದ ತೆರಿಗೆದಾರರಿಗೆ ಸಂಬಂಧಿಸಿದಂತೆ 80ಸಿ ಕಡಿತ ಹಾಗೂ ಸ್ಟಾಂಡರ್ಡ್ ಡಿಡಕ್ಷನ್ ಮಿತಿಯನ್ನು ಹೆಚ್ಚಿಸಬೇಕೆಂಬುದು ಪ್ರಮುಖ ಬೇಡಿಕೆಯಾಗಿದೆ. ಹೀಗಾಗಿ, ತೆರಿಗೆ ಕಡಿತದ ಬಗ್ಗೆ ಹೆಚ್ಚಿನ ಮಂದಿ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ.
ಬಸಿಝ್ ಫಂಡ್ ಸರ್ವೀಸ್ ಪ್ರೈವೆಟ್ ಲಿಮಿಟೆಡ್ನ ಸ್ಥಾಪಕ ಆದಿತ್ಯ ಶೇಷಾದ್ರಿನಾಥನ್ ಅವರ ಪ್ರಕಾರ, 80ಸಿ ಸೆಕ್ಷನ್ ಕಡಿತದ ಮಿತಿಯನ್ನು 2ಲಕ್ಷಕ್ಕೆ ಏರಿಸಬೇಕು. 2023ರ ಏಪ್ರಿಲ್ ನಂತರ ಹೂಡಿಕೆದಾರರ ಹಂಚಿಕೆಗಳಲ್ಲಿ ಈಕ್ವಿಟಿಗಳ ಕಡೆಗೆ ಗಮನಾರ್ಹವಾದ ಬದಲಾವಣೆ ಕಾಣುತ್ತಿದೆ. ಹೀಗಾಗಿ, ಹೂಡಿಕೆದಾರರು ಮ್ಯುಚುವಲ್ ಫಂಡ್ ಸಾಲದಲ್ಲಿ ಕೆಲವೊಂದು ಪ್ರೋತ್ಸಾಹದಾಯಕ ಕ್ರಮಗಳನ್ನು ನಿರೀಕ್ಷೆ ಮಾಡುತ್ತಿದ್ದಾರೆ. ಜತೆಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯ ಫಲಾನುಭವಿಗಳ ನೆಲೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎನ್ನುತ್ತಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಈ ಬಾರಿಯ ಬಜೆಟ್ನ್ನು ದೇಶದ ಭವಿಷ್ಯದ ಆರ್ಥಿಕ ಬೆಳವಣಿಗೆ ದೊಡ್ಡ ಬುನಾದಿ ಹಾಕುವ ನಿಟ್ಟಿನಲ್ಲಿ ಏನೆಲ್ಲ ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಹಲವು ಕ್ಷೇತ್ರಗಳ ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ. ದೇಶದ ಹಣದುಬ್ಬರವನ್ನು ನಿಯಂತ್ರಿಸುವ ಜತೆಗೆ ದೇಶದ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವ ಮೂಲಕ ಸಾಮಾನ್ಯ ಜನರಿಗೆ ತೆರಿಗೆ ವಿನಾಯಿತಿ ಘೋಷಿಸುವಂತೆ ಹಲವು ತಜ್ಞರು ಅರ್ಥ ಸಚಿವರಿಗೆ ಸಲಹೆಗಳನ್ನು ನೀಡಿರುವುದಾಗಿ ವರದಿಯಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications