ಯೆಸ್ ಬ್ಯಾಂಕ್- ಡಿಎಚ್ ಎಫ್ ಎಲ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾದ ಡಿಎಚ್ ಎಫ್ ಎಲ್ ಪ್ರವರ್ತಕರಾದ ಕಪಿಲ್ ಹಾಗೂ ಧೀರಜ್ ವಾಧ್ವಾನ್ ಅವರನ್ನು ಸಿಬಿಐ ವಶಕ್ಕೆ ಪಡೆಯಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಭಾನುವಾರ ಹೇಳಿದ್ದಾರೆ.
"ಸಿಬಿಐ ತಂಡವು ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರನ್ನು ಕಸ್ಟಡಿಗೆ ಪಡೆದುಕೊಂಡಿದೆ. ಸತಾರಾ ಪೊಲೀಸರು ಅವರಿಗೆ ಎಲ್ಲ ಅಗತ್ಯ ನೆರವು ನೀಡಿದ್ದಾರೆ. ಲಿಖಿತವಾಗಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಬೆಂಗಾವಲು ವಾಹನ ಮತ್ತು ಹದಿಮೂರು ಮಂದಿ ಭದ್ರತಾ ಸಿಬ್ಬಂದಿ ಜತೆಗೆ ಮುಂಬೈನ ತನಕ ಬಿಡಲಾಗಿದೆ. ಬಂಧನದ ಪ್ರಕ್ರಿಯೆಗಳು ನಡೆಯುತ್ತಿವೆ. ಕಾನೂನು ಎಲ್ಲರಿಗೂ ಒಂದೇ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಯೆಸ್ ಬ್ಯಾಂಕ್ ನಿಂದ ಡಿಎಚ್ ಎಫ್ ಎಲ್ ಗ್ರೂಪ್ 3700 ಕೋಟಿ ರುಪಾಯಿ ಸಾಲ ಪಡೆದಿತ್ತು. ಆ ಸಾಲವು "ಒತ್ತಡ"ದಲ್ಲಿತ್ತು. ಎರಡು ಸಂಸ್ಥೆಗಳ ಮಧ್ಯದ ಈ ವ್ಯವಹಾರ ಮತ್ತು ಅದರ ಪ್ರವರ್ತಕರ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಇ.ಡಿ.ಯನ್ನು ಹೊರತುಪಡಿಸಿ, ಯೆಸ್ ಬ್ಯಾಂಕ್ ಹಗರಣದಲ್ಲಿ ಸಿಬಿಐ ಎಫ್ ಐಆರ್ ನಲ್ಲೂ ವಾಧ್ವಾನ್ ಸೋದರರ ಹೆಸರಿದೆ.

ಭೂಗತ ಪಾತಕಿ ಇಕ್ಬಾಲ್ ಮಿರ್ಚಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾನೂನು ಅಡಿಯಲ್ಲಿ ಇವರ ವಿರುದ್ಧ ಕ್ರಿಮಿನಲ್ ಕೇಸ್ ಕೂಡ ದಾಖಲಾಗಿದ್ದು, ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯುತ್ತಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications