
'ಆಧಾರ್ ಸಂಖ್ಯೆಯನ್ನು ಪಡೆಯುವ ಪ್ರಕ್ರಿಯೆಗೆ ತಗಲುವ ಸಮಯವನ್ನು ಪರಿಗಣಿಸಿದರೆ ಇಪಿಎಫ್ ಸದಸ್ಯರು 2013 ಮಾರ್ಚ್ 1ರೊಳಗೆ ಆಧಾರ್ ಸಂಖ್ಯೆಯನ್ನು ಪಡೆಯಲು ಸಾಧ್ಯವಾಗದು. ಹಾಗಾಗಿ ನೂತನ ಇಪಿಎಫ್ ಸದಸ್ಯರಿಗೆ 2013 ಮಾರ್ಚ್ 1ರಿಂದ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸದಿರಲು ನಿರ್ಧರಿಸಲಾಗಿದೆ' ಎಂದು Retirement fund body ಸಂಸ್ಥೆಯ ಆದೇಶದಲ್ಲಿ ಹೇಳಲಾಗಿದೆ.
ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ನಿರ್ಧಾರಕ್ಕೆ ಕಳೆದ ತಿಂಗಳು ಕಾರ್ಮಿಕ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಸಂಸ್ಥೆ ತನ್ನ ನಿರ್ಧಾರವನ್ನು ತಡೆಹಿಡಿಯಲು ನಿರ್ಧರಿಸಿದೆ.
ಆದರೆ, ಈಗಾಗಲೇ ಆಧಾರ್ ಸಂಖ್ಯೆ ಹೊಂದಿರುವ ಸದಸ್ಯರ ಸಂಖ್ಯೆಯನ್ನು ಪಡೆದುಕೊಳ್ಳುವಂತೆ ಸಂಸ್ಥೆ ತನ್ನ ಸಿಬ್ಬಂದಿಗೆ ಸೂಚಿಸಿದೆ. ಎಲ್ಲ ಇಪಿಎಫ್ ಸದಸ್ಯರ ಕೋರ್ ಬ್ಯಾಂಕಿಂಗ್ ಖಾತೆ ಸಂಖ್ಯೆಗಳನ್ನು ಪಡೆದುಕೊಳ್ಳುವಂತೆಯೂ ಇಪಿಎಫ್ ಸಿಬ್ಬಂದಿಗೆ ಸೂಚಿಸಲಾಗಿದೆ.
ಆಧಾರ್ ಸಂಖ್ಯೆಯನ್ನು ಪಡೆದುಕೊಳ್ಳುವುದು ದೀರ್ಘ ಪ್ರಕ್ರಿಯೆಯಾಗಿದೆ ಹಾಗೂ ಈ ಯೋಜನೆ ಕೇವಲ 18 ರಾಜ್ಯಗಳಲ್ಲಿ ಮಾತ್ರ ಜಾರಿಯಲ್ಲಿದೆ ಎಂದು ಇಪಿಎಫ್ಒ ಆದೇಶ ಹೇಳಿದೆ.
ಉಳಿದ ರಾಜ್ಯಗಳಲ್ಲಿ ರಿಜಿಸ್ಟರ್ ಜನರಲ್ ಆಫ್ ಇಂಡಿಯಾವು ‘ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್' ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿದೆ. ಇದು ದೇಶದ ನಿವಾಸಿಗಳ ಡಿಜಿಟಲ್ ಡಾಟಾಬೇಸ್ ಆಗಿದೆ.
ಇಪಿಎಫ್ ಸದಸ್ಯರು ತಮ್ಮ ಕೆಲಸಗಳನ್ನು ಬದಲಾಯಿಸುವಾಗ ಹಾಗೂ ಹಳೆಯ ಖಾತೆಯಲ್ಲಿರುವ ಹಣವನ್ನು ಹೊಸ ಖಾತೆಗೆ ಹಾಕುವಾಗ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ನಿವಾರಿಸುವುದಕ್ಕಾಗಿ ಸದಸ್ಯರ ಆಧಾರ್ ಸಂಖ್ಯೆಗಳನ್ನೇ ಅವರ ಇಪಿಎಫ್ ಖಾತೆಯ ಸಂಖ್ಯೆಗಳನ್ನಾಗಿ ಪರಿವರ್ತಿಸುವ ಯೋಜನೆಯನ್ನು ಭವಿಷ್ಯನಿಧಿ ಸಂಸ್ಥೆ ಕೈಗೆತ್ತಿಕೊಂಡಿತ್ತು.
ಈಗ ಭವಿಷ್ಯನಿಧಿ ಸಂಸ್ಥೆ ಕೇಂದ್ರೀಯ ಡಾಟಾ ಬೇಸನ್ನು ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ. ಇಲ್ಲಿ ಭವಿಷ್ಯನಿಧಿ ಸದಸ್ಯರು ಖಾಯಂ ಖಾತೆ ಸಂಖ್ಯೆಯನ್ನು ಹೊಂದುತ್ತಾರೆ ಹಾಗೂ ಉದ್ಯೋಗಗಳನ್ನು ಬದಲಿಸುವಾಗ ಪಿಎಫ್ ಖಾತೆಗಳನ್ನು ಬದಲಿಸುವ ಅಗತ್ಯವಿಲ್ಲ.(ಪಿಟಿಐ)
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications