
ಸೆಪ್ಟೆಂಬರ್ 2012ರ ತನಕ ಸಿಕ್ಕಿರುವ ಲೆಕ್ಕಾಚಾರದ ಪ್ರಕಾರ ತಮಿಳುನಾಡಿನಲ್ಲಿ ಅತ್ಯಧಿಕ ಕಂಪನಿಗಳು ಪಿಎಫ್ ಹಣವನ್ನು ನುಂಗಿ ಹಾಕಿರುವುದು ಕಂಡು ಬಂದಿದೆ. ರಾಜಧಾನಿ ದೆಹಲಿಯ ಕಂಪನಿಗಳು ಅತ್ಯಧಿಕ ಬಾಕಿ ಮೊತ್ತ ಉಳಿಸಿಕೊಂಡಿರುವುದು ಪತ್ತೆಯಾಗಿದೆ.
ತಮಿಳುನಾಡಿನಲ್ಲಿ ಒಟ್ಟಾರೆ 17,309 ಕಂಪನಿಗಳು ಭವಿಷ್ಯ ನಿಧಿ (Employees' Provident Fund) ಮೊತ್ತ 313.47 ಕೋಟಿ ರು ಪಾವತಿಸದೆ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ ಕಾರ್ಮಿಕ ಖಾತೆ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಗೆ ಮಾಹಿತಿ ನೀಡಿದರು.
ಈ ರೀತಿ ವಂಚನೆಯಲ್ಲಿ ಆಂಧ್ರಪ್ರದೇಶ ಎರಡನೇ ಸ್ಥಾನದಲ್ಲಿದೆ. ಆಂಧ್ರದಲ್ಲಿ 12,720 ಕಂಪನಿಗಳು 268.34 ಕೋಟಿ ರು ಕಟ್ಟದೆ ಯಾಮಾರಿಸಿದೆ. ದೆಹಲಿಯಲ್ಲಿ ಅತ್ಯಧಿಕ PF ಪೇಮೆಂಟ್ ಬಾಕಿ ಉಳಿದಿರುವುದು ಪತ್ತೆಯಾಗಿದೆ. ದೆಹಲಿ ಕಂಪನಿಗಳು ಸುಮಾರು 671.97 ಕೋಟಿ ರು ಬಾಕಿ ಉಳಿಸಿಕೊಂಡಿದೆ.
ದೆಹಲಿಯಲ್ಲಿ ಕೇವಲ 565 ಕಂಪನಿಗಳು ಮಾತ್ರ defaulters ಪಟ್ಟಿಯಲ್ಲಿದೆ. ಮಹಾರಾಷ್ಟ್ರದಲ್ಲಿ 7,013 ಕಂಪನಿಗಳು 536.99 ಕೋಟಿ ಬಾಕಿ ಉಳಿಸಿಕೊಂಡಿದೆ.ಒಟ್ಟಾರೆ ಭವಿಷ್ಯ ನಿಧಿ ಮೊತ್ತ ಸೆಪ್ಟೆಂಬರ್ 2012ಕ್ಕೆ ಅನ್ವಯವಾಗುವಂತೆ 3,853.06 ಕೋಟಿ ರು ಬರಬೇಕಿದೆ. ಒಟ್ಟಾರೆ 88,730 ಕಂಪನಿಗಳು PF ಪಾವತಿಸುವ ಗೋಜಿಗೆ ಹೋಗಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಭವಿಷ್ಯ ನಿಧಿ (Employees' Provident Fund) ಖಾತೆಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ? ಅದರಲ್ಲಿ ನಿಮ್ಮ ಕಾಣಿಕೆ ಎಷ್ಟು, ಉದ್ಯೋಗದಾತರ ಕೊಡುಗೆ ಎಷ್ಟು? ಎಂಬ ವಿಷಯಗಳು ತಿಳಿಯುವುದು ಈಗ ಸುಲಭ. ಇಂಟರ್ನೆಟ್ ಸಂಪರ್ಕವಿದ್ದರೆ ಇದ್ದಲ್ಲಿಂದಲೇ ಆನ್ ಲೈನ್ ಮುಖಾಂತರವೇ ಈ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. www.epfindia.com ಅಂತರ್ಜಾಲ ತಾಣ ಜಾಲಾಡಿ ನಮಗೆ ಅಗತ್ಯವಿರುವ ಸೇವೆಯ ಲಿಂಕ್ ಅನ್ನು ಕ್ಲಿಕ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೆ. [ಆನ್ಲೈನ್ನಲ್ಲಿ ಪಿಎಫ್ ಮಾಹಿತಿ step by step]
ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಯೋಜನೆಯ ನೂತನ ಸದಸ್ಯರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು 2013 ಮಾರ್ಚ್ 1 ರಿಂದ ಆಧಾರ್ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ತಡೆಹಿಡಿಯಲು Retirement fund body ನಿರ್ಧರಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications