ಬೆಂಗಳೂರು, ಮೇ.4: ಉದ್ಯೋಗಿಗಳ ಭವಿಷ್ಯನಿಧಿ ಮಾಹಿತಿ ಆನ್ ಲೈನ್ ನಲ್ಲಿ ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಈ ಸೌಲಭ್ಯ ಆರಂಭಿಸಿ ಎರಡು ವರ್ಷ ಕಳೆದಿದೆ. ಈಗ ಮೊಬೈಲ್ ಫೋನಿನಿಂದ ಎಸ್ಎಂಎಸ್ ಕಳುಹಿಸುವಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗಿದೆ.
ಭವಿಷ್ಯ ನಿಧಿಯನ್ನು ಆನ್ ಲೈನ್ ಮೂಲಕ ವರ್ಗಾಯಿಸುವ ನೂತನ ಕ್ರಮವನ್ನು ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಎಫ್ ಪಿಒ) ಯು ಜಾರಿಗೆ ತಂದ ಮೇಲೆ ಆನ್ ಲೈನ್ ನಲ್ಲೇ ಪಾಸ್ ಬುಕ್ ಓಪನ್ ಮಾಡಬಹುದಾಗಿತ್ತು. ಇದರಿಂದ ವಾರ್ಷಿಕವಾಗಿ ಲಕ್ಷಾಂತರ ಫಲಾನುಭವಿಗಳಿಗೆ ಉಪಯೋಗವಾಗಲಿದೆ.
ಮೊಬೈಲ್ ಫೋನ್ ಮೂಲಕ ಇಪಿಎಫ್ ಬ್ಯಾಲೆನ್ಸ್ ತಿಳಿಯಲು ಉದ್ಯೋಗ ಸಂಸ್ಥೆ ನೀಡುವ ಯೂನಿವರ್ಸಲ್ ಅಕೌಂಟ್ ನಂಬರ್ (UAN) ಹೊಂದಿರಬೇಕು. ಈ ಮೂಲಕ ಭವಿಷ್ಯ ನಿಧಿ ಮೊತ್ತವನ್ನು ತಿಳಿಯಬಹುದು. ಹಳೆ ಪಿಎಫ್ ನಂಬರ್ ಕೂಡಾ ಯುಎಎನ್ ಗೆ ಹೊಂದಿಸಿಕೊಳ್ಳಬಹುದು.

ಪದೇ ಪದೇ ಉದ್ಯೋಗ ಬದಲಾಯಿಸುವವರೂ ಕೂಡಾ ಪಿಎಫ್ ನಂಬರ್ ಬದಲಾವಣೆಯಾದರೆ ಯುಎಎನ್ ನಂಬರ್ ಮೂಲಕ ಇಪಿಎಫ್ ವರ್ಗಾವಣೆ ಆನ್ ಲೈನ್ ನಲ್ಲೇ ಮಾಡಿಕೊಳ್ಳಬಹುದು. ಅದರೆ, ಇಪಿಎಫ್ ವರ್ಗಾವಣೆ ಹಾಗೂ ವಿಥ್ ಡ್ರಾ ಮಾಡಲು ಕೆಲ ಸಮಯ ಹಿಡಿಯುತ್ತದೆ. [ಇಪಿಎಫ್ ಆನ್ ಲೈನ್ ವರ್ಗ]
ಮೊಬೈಲ್ ಮೂಲಕ ಚೆಕ್ ಮಾಡುವ ವಿಧಾನ
ಇಪಿಎಫ್ ಒ ಈಗ ಎಸ್ಎಂಎಸ್ ಬ್ಯಾಲೆನ್ಸ್ ಚೆಕ್ಕಿಂಗ್ ವ್ಯವಸ್ಥೆ ನೀಡುತ್ತಿದೆ. ಯುಎಎನ್ ಹಾಗೂ ನೋಂದಾಯಿತ ಮೊಬೈಲ್ ಸಂಖ್ಯೆ ಇದ್ದರೆ ಬ್ಯಾಲೆನ್ಸ್ ವಿವರ ಪಡೆದುಕೊಳ್ಳಬಹುದು.
ನೋಂದಾಯಿತ ಮೊಬೈಲ್ ಫೋನಿನಿಂದ ಹೀಗೆ ಟೈಪ್ ಮಾಡಿ
EPFOHO UAN ENG ಈ ಸಂದೇಶವನ್ನು 7738299899 ಸಂಖ್ಯೆಗೆ ಎಸ್ಎಂಎಸ್ ಕಳಿಸಿ
ಕನ್ನಡದಲ್ಲೂ ಮಾಹಿತಿ: ಇಪಿಎಫ್ಒ ಈಗ 10 ಭಾಷೆಗಳಲ್ಲಿ ಬ್ಯಾಲೆನ್ಸ್ ಮಾಹಿತಿ ನೀಡುತ್ತಿದೆ. ಕನ್ನಡ ಅಲ್ಲದೆ ಇಂಗ್ಲೀಷ್, ಹಿಂದಿ, ಪಂಜಾಬಿ, ಗುಜರಾತಿ, ಮರಾಠಿ, ಮಲೆಯಾಳಂ, ತಮಿಳು ಹಾಗೂ ಬೆಂಗಾಲಿ.
ಗಮನಿಸಿ: ನಿಮ್ಮ ಉದ್ಯೋಗ ಸಂಸ್ಥೆಯಿಂದ ಆಧಾರ್, ಪ್ಯಾನ್ ಅಥವಾ ಬ್ಯಾಂಕ್ ಅಕೌಂಟ್ ಮಾಹಿತಿ ಡಿಜಿಟಲಿ ಅನುಮೋದನೆಯಾಗಿದ್ದರೆ ಮಾತ್ರ ಮಾಹಿತಿ ಸಿಗಲಿದೆ.
ಹೆಚ್ಚಿನ ಮಾಹಿತಿಗೆ 1800118005 ಸಹಾಯವಾಣಿಗೆ ಕರೆ ಮಾಡಿ.
ಈ ಸುದ್ದಿಯನ್ನು ಕೇಳಿಸಿಕೊಳ್ಳಿ:
(ಗುಡ್ ರಿಟರ್ನ್ಸ್,ಇನ್)
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications