ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಮತ್ತು ವಿವಿಧ ದಾಖಲಾತಿ ನೋಂದಣಿಗೆ ಆಧಾರ್ ಕಾರ್ಡ್ ನ್ನು ಮಾನದಂಡವಾಗಿ ಬಳಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆಧಾರ್ ನಂಬರ್ ನೋಂದಣಿಯಾಗಿದ್ದರೆ ಆದಾಯ ತೆರಿಗೆ ತುಂಬುವವರು ಐಟಿಆರ್ ವಿ ಕಳುಹಿಸಿಕೊಡಬೇಕಾದ ಅಗತ್ಯವಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ನೀವು ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದೀರಿ, ಆದರೆ ಕಾರ್ಡ್ ನಿಮ್ಮ ಕೈ ಸೇರಿಲ್ಲ ಅಥವಾ ನಿಮ್ಮ ಬಳಿಯಿದ್ದ ಆಧಾರ್ ಕಾರ್ಡ್ ಯಾವುದೋ ಕಾರಣದಿಂದ ಕಳೆದುಕೊಂಡಿದ್ದೀರಿ. ಇಂಥ ಸಂದರ್ಭದಲ್ಲಿ ಆಧಾರ್ ಸಂಖ್ಯೆ ಅಗತ್ಯ ಬಿದ್ದರೆ ಏನು ಮಾಡಬೇಕು? ಅದಕ್ಕೆ ಉತ್ತರ ಇಲ್ಲಿದೆ.[ಪ್ಯಾನ್ ಕಾರ್ಡ್ನೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಹೇಗೆ?]

ನಿಮ್ಮ ಹೆಸರಿನ ಆಧಾರದಲ್ಲಿ ಆಧಾರ್ ಕಾರ್ಡ್ ನ ಎಲ್ಲ ದಾಖಲೆಗಳನ್ನು ಪಡೆದುಕೊಳ್ಳುವಂಥ ವ್ಯವಸ್ಥೆಯನ್ನು ಯುಐಡಿ ಪೋರ್ಟಲ್ ಸಿದ್ಧಮಾಡಿ ನೀಡಿದೆ.
* https://resident.uidai.net.in/find-uid-eid ತಾಣಕ್ಕೆ ಭೇಟಿ ನೀಡಿ
* ಆಧಾರ್ ಯುಐಡಿ ಅಥವಾ ಎನ್ರೊಲ್ ಮೆಂಟ್ ನಂಬರ್ ಆಯ್ಕೆ ಆಯ್ದುಕೊಳ್ಳಿ
* ನಿಮ್ಮ ಪೂರ್ಣ ಹೆಸರನ್ನು ದಾಖಲು ಮಾಡಿ
* ಮೊಬೈಲ್ ಸಂಖ್ಯೆ ದಾಖಲಿಸಿ
* ಸೆಕ್ಯೂರಿಟಿಗೆ ಸಂಬಂಧಿಸಿದ ಅಂಶಗಳನ್ನು ನೋಂದಣಿ ಮಾಡಿ
* ಒಟಿಪಿ ಆಯ್ಕೆ ಮೇಲೆ ಕ್ಲಿಕ್ ಮಾಡಿ[ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]
* ನಿಮ್ಮ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಗೆ ಒಟಿಪಿ ಬರುವುದು
* ನಂತರ ಒಟಿಪಿ ಮೂಲಕ ಪುನರ್ ಪರಿಶೀಲನೆ ಮಾಡಲಾಗುವುದು. ನಂತರ ನಿಮ್ಮ ಮೊಬೈಲ್ ಗೆ ಆಧಾರ್ ಸಂಖ್ಯೆ ಬರುತ್ತದೆ.
ಅಂತರ್ಜಾಲದಿಂದ ಆಧಾರ್ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳುವುದು ಹೇಗೆ?
ಆಧಾರ್ ಸಂಖ್ಯೆ ನಿಮ್ಮ ಕೈ ಸೇರಿದ ನಂತರ ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ಡೌನ್ ಲೋಡ್ ಮಾಡಿಕೊಳ್ಳುವುದು ಬಹಳ ಸುಲಭ
* ನಿಮ್ಮ ಎಲ್ಲ ಮಾಹಿತಿ ಅಂದರೆ ಎನ್ ರೋಲ್ ಮೆಂಟ್ ನಂಬರ್, ವಾಸಸ್ಥಳ, ಪಿನ್ ಕೋಡ್ ಎಲ್ಲವನ್ನು ದಾಖಲು ಮಾಡಿ.
* ನಿಮ್ಮ ಬಳಿ ಆಧಾರ್ ಸಂಖ್ಯೆಯಿದ್ದರೆ ಕೆಲಸ ಮತ್ತಷ್ಟು ಸುಲಭ. ಆಧಾರ್ ಆಯ್ಕೆ ಸೆಲೆಕ್ಟ್ ಮಾಡಿ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಐ ಹಾವ್ ಆಯ್ಕೆ ಯನ್ನು ಆರಿಸಿಕೊಳ್ಳಿ
* ನಂತರ ನಿಮ್ಮ ನೋಂದಣಿಯಾದ ಮೊಬೈಲ್ ಸಂಖ್ಯೆಗೆ ಒಟಿಪಿಯನ್ನು ಕಳುಹಿಸಿಕೊಡಲಾಗುವುದು.[ಮದುವೆ ಪ್ರಮಾಣ ಪತ್ರ ಪಡೆಯುವುದು ಹೇಗೆ?]
* ನಂತರ ಇದನ್ನು ಬಳಸಿಕೊಂಡು ಆಧಾರ್ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಳ್ಳಲು ಸಾಧ್ಯವಿದೆ. ಇದು ಸಾಮಾನ್ಯವಾಗಿ ಪಿಡಿಎಫ್ ಮಾದರಿಯಲ್ಲಿ ಇರುತ್ತದೆ.
ಕೊನೆ ಮಾತು
ಗ್ಯಾಸ್ ಸಬ್ಸಿಡಿ, ಆದಾಯ ತೆರಿಗೆ ಪಾವತಿ, ಬ್ಯಾಂಕ್ ಸೌಲಭ್ಯ ಎಲ್ಲದಕ್ಕೂ ಆಧಾರ್ ಕಾರ್ಡ್ ನ್ನು ಪರಿಗಣಿಸಲಾಗುತ್ತಿದೆ. ಆನ್ ಲೈನ್ ಮುಖಾಂತರ ಸುಲಭವಾಗಿ ನಿಮ್ಮ ಕಾರ್ಡ್ ಪಡೆದುಕೊಳ್ಳಬಹುದು.(ಗುಡ್ ರಿಟರ್ನ್ಸ್)
More From GoodReturns

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications