ಹಣಕಾಸು ಬಜೆಟ್ ಮಂಡನೆಯಾಗಿದೆ. ವಿವಿಧ ವಿಶ್ಲೇಷಣೆಗಳು ಹೊರಬಿದ್ದಿವೆ. ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.
ಈಗ ಎಲ್ಲರ ಮುಂದೆ ಇರುವ ಪ್ರಶ್ನೆ ಎಂದರೆ ಸಾಮಾನ್ಯ ನಾಗರಿಕನೊಬ್ಬನ ಮೇಲೆ ಬಜೆಟ್ ಯಾವ ಪರಿಣಾಮ ಬೀರಲಿದೆ? ಎನ್ನುವುದು. ಅದಕ್ಕೆ ಉತ್ತರ ಇಲ್ಲಿದೆ.
* ನೀವು ವರ್ಷಕ್ಕೆ 5 ಲಕ್ಷ ರು. ಸಂಪಾದನೆ ಮಾಡುತ್ತಿದ್ದೀರಾ? ನೀವು ಹೆಚ್ಚುವರಿ ಮೂರು ಸಾವಿರ ರು. ಟ್ಯಾಕ್ಸ್ ರಿಬೇಟ್ ಪಡೆದುಕೊಳ್ಳುತ್ತೀರಿ.[ಆದಾಯ ತೆರಿಗೆ ದರ, ಮಿತಿ, ಸಂಪೂರ್ಣ ವಿವರ]

* ನೀವು ಬಾಡಿಗೆ ಮನೆಯಲ್ಲಿ ವಾಸವಿದ್ದು ನಿಮ್ಮ ಒಡೆತನದಲ್ಲಿ ಯಾವುದೇ ಮನೆ ಇಲ್ಲವಾದರೆ 60 ಸಾವಿರ ರು. ವರೆಗೆ ತೆರಿಗೆ ವಿನಾಯಿತಿ ಪಡೆದುಕೊಳ್ಳಲಿದ್ದಾರೆ.
* ನೀವು ಡೀಸೆಲ್ ವಾಹನವೊಂದನ್ನು ಖರೀದಿ ಮಾಡಬೇಕು ಎಂದು ಅಂದುಕೊಂಡಿದ್ದೀರಾ? ಹಾಗಾದರೆ ಸ್ವಲ್ಪ ಹೆಚ್ಚಿಗೆ ಹಣವನ್ನು ತೆಗೆದಿರಿಸಬೇಕಾಗುತ್ತದೆ.[ಕೇಂದ್ರ ಬಜೆಟ್ 2016: ಯಾವುದು ಅಗ್ಗ? ಯಾವುದು ತುಟ್ಟಿ?]
* ಸಿಗರೇಟ್ ಸೇದುವ ಅಭ್ಯಾಸವಿದ್ದರೆ ಶೇ. 10-15 ಹೆಚ್ಚುವರಿ ಹಣ ನೀಡಬೇಕಾಗುತ್ತದೆ.
* ಬ್ರ್ಯಾಂಡೆಡ್ ವಸ್ತುಗಳನ್ನು ಕೊಳ್ಳುವ ಚಾಳಿ ನಿಮಗಿದ್ದರೆ ಹೆಚ್ಚಿಗೆ ಹಣ ನೀಡಲು ಸಿದ್ಧರಿರಬೇಕಾಗಿದೆ.
* ಕಾರು ಖರೀದಿ ಮಾಡುವುದು ದುಬಾರಿ
* ಎನ್ ಪಿಎಎಸ್ ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚುವರಿ ತೆರಿಗೆ ವಿನಾಯಿತಿ ಲಾಭವನ್ನು ಪಡೆದುಕೊಳ್ಳಬಹುದು.
* ನ್ಯಾಶನಲ್ ಪೆನ್ಶನ್ ಸ್ಕೀಮ್ ನಲ್ಲಿ ಹೂಡಿಕೆ ಮಾಡಿದರೆ ಶೇ. 40 ರಷ್ಟು ತೆರಿಗೆ ಲಾಭ ಪಡೆದುಕೊಳ್ಳಬಹುದು.
* ಅಧಿಕ ಮೌಲ್ಯದ ಡಿವಿಡೆಂಡ್ ಪಡೆದುಕೊಂಡರೆ ನೀವು ಕೆಲ ಪ್ರಮಾಣದಲ್ಲಿ ತೆರಿಗೆ ಪದ್ಧತಿ ಅಡಿಗೆ ಬರುತ್ತೀರಿ.
* ಎನ್ ಆರ್ ಐ ಆಗಿದ್ದರೆ ಕೆಲ ದಾಖಲೆ ಪತ್ರ ಹಾಜರು ಪಡಿಸಿದರೆ ನೀವು ಕಡಿಮೆ ಪ್ರಮಾಣದ ಟಿಡಿಎಸ್ ಸಲ್ಲಿಕೆ ಮಾಡಿದರೆ ಸಾಕು.
* ಹೊಸ ಕೆಲಸಕ್ಕೆ ಸೇರುವವರೇ ಅದೃಷ್ಟವಂತರು. ಇನ್ನು ಮುಂದೆ ಮೂರು ವರ್ಷಗಳ ಕಾಲ ಇಪಿಎಫ್ ನಲ್ಲಿ ಶೇ. 8.33 ಹೆಚ್ಚುವರಿ ಲಾಭ ಪಡೆದುಕೊಳ್ಳವಬಹುದು.
* ಆರೋಗ್ಯವಿಮೆಗೆ ಸಂಬಂಧಿಸಿದ ಹೊಸ ಯೋಜನೆಯ ಅನ್ವಯ ಕುಟುಂಬಕ್ಕೆ ಒಂದು ಲಕ್ಷ ರು. ವರೆಗೆ ಲಾಭ ಸಿಗಲಿದೆ.
* ಸೆಕ್ಯೂರಿಟಿ ತೆರಿಗೆ ಹೆಚ್ಚಳವಾಗಿರುವುದರಿಂದ ಪ್ಯೂಚರ್ ಮಾರುಕಟ್ಟೆಯಲ್ಲಿ ತೊಡಗಿಕೊಂಡವರು ಹೆಚ್ಚಿನ ಹಣ ಇಟ್ಟುಕೊಂಡು ವ್ಯವಹಾರ ನಡೆಸಬೇಕಾಗುತ್ತದೆ.
ಆದಾಯ ತೆರಿಗೆ ವರ್ಗೀಕರಣದ ಪ್ರಕಾರದಲ್ಲಿ ಯಾವ ಬದಲಾವಣೆಯನ್ನು ಮಾಡಲಾಗಿಲ್ಲ. ಆದರೆ ಹಣದ ಮೌಲ್ಯದಲ್ಲಿ ಬದಲಾವಣೆ ಮಾಡಲಾಗಿದೆ. ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸಿ ಸಾಮಾನ್ಯ ಜನರು ಹೆಜ್ಜೆ ಇಡಬೇಕಾಗುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications