ದಿನನಿತ್ಯದ ಜೀವನದಲ್ಲಿ ಹಣಕಾಸಿನ ವಂಚನೆಯನ್ನು ಅನೇಕ ಸಂದರ್ಭಗಳಲ್ಲಿ ಎದುರಿಸಿರುತ್ತೇವೆ. ಒಟ್ಟಾರೆ ಲೆಕ್ಕಾಚಾರದ ಪ್ರಕಾರ ಸ್ನೇಹಿತರು, ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ನೆರೆಹೊರೆಯವರೇ ವಂಚನೆ/ಕಳ್ಳತನ ಮಾಡುತ್ತಾರೆ ಎಂಬುದು ಸಾಬಿತಾಗಿದೆ. ಅಂದರೆ ನಮ್ಮನ್ನು ಚೆನ್ನಾಗಿ ಬಲ್ಲವರು ಹೆಚ್ಚು ವಂಚನೆ ಮಾಡುತ್ತಾರೆ.
ಹೀಗಾಗಿ ಮಾಹಿತಿಯನ್ನು ಹಂಚಿಕೊಳ್ಳುವಾಗ ತುಂಬಾ ಹುಷಾರಾಗಿ ಇರಬೇಕಾಗುತ್ತದೆ. ಅದಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಅನೇಕ ಮಾರ್ಗಗಳಿದ್ದು, ಅವುಗಳನ್ನು ಪಾಲಿಸಿದರೆ ಹಣಕಾಸು ವಂಚನೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ಅವುಗಳು ಇಲ್ಲಿವೆ ನೋಡಿ...
ಪರಿಚಿತ/ಅಪರಿಚಿತರಿಗೆ ಪಾಸ್ವರ್ಡ್ ಹೇಳಬೇಡಿ
ಪ್ರಾಥಮಿಕ ಹಂತದಲ್ಲಿ ಪರಿಚಿತ ಅಥವಾ ಅಪರಿಚಿತ ವ್ಯಕ್ತಿಗಳಿಗೆ ನಿಮ್ಮ ಪಾಸ್ವರ್ಡ್ ಮಾಹಿತಿಯನ್ನು ಕೊಡಬಾರದು.
ನಾವು ವ್ಯಕ್ತಿಗಳ ದುರುದ್ದೇಶಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯ ಇರುವುದಿಲ್ಲ. ಕುಟುಂಬದ ವ್ಯಕ್ತಿಗಳು ಮತ್ತು ಕೆಲ ವಿಶ್ವಾಸಾರ್ಹ ಸ್ನೇಹಿತರನ್ನು ಹೊರತು ಪಡಿಸಿ ಹಣಕಾಸು ಸಂಗತಿಗಳನ್ನು ಇನ್ಯಾರೊಂದಿಗೂ ಹಂಚಿಕೊಳ್ಳಬಾರದು.
ನಮಗೆ ಗೊತ್ತಿರುವಂತೆ ಹೆಚ್ಚಿನ ಹಣಕಾಸು ವಂಚನೆ/ಕಳ್ಳತನ ಪರಿಚಯದವರಿಂದಲೇ ಆಗುತ್ತದೆ.
ಇ-ಮೇಲ್ ಭದ್ರತೆ
ಬ್ಯಾಂಕಿನವರು ನೀಡುವ ಇ-ಮೇಲ್ ಐಡಿಗಳನ್ನು ಸಹ ಹೆಚ್ಚು ಬಳಸಬಾರದು. ಅದರಿಂದಾಗಿ ಹೆಚ್ಚೆಚ್ಚು ಮೋಸ ಹೋಗಬೇಕಾಗುತ್ತದೆ. ಇ-ಮೇಲೆ ಮುಖಾಂತರ ಯಾವುದೇ ಸ್ಟೇಟ್ಮೆಂಟ್ ಗಳನ್ನು ತೆರೆಯಬಾರದು ಇದರಿಂದ ಅಪಾಯವೇ ಹೆಚ್ಚು. ಇ-ಮೇಲ್ ಗಳ ಮೇಲೆ ಕ್ಲಿಕ್ ಮಾಡುವುದರಿಂದ ಅವು ಬೇರೆ ವೆಬ್ಸೈಟ್ ಗೆ ಲಿಂಕ್ ಆಗುತ್ತವೆ. ಇದರಿಂದಾಗಿ ನಮ್ಮ ಅಂಕಿಅಂಶ ಹಾಗೂ ಮಾಹಿತಿಯ ಸೋರಿಕೆ ಆಗುತ್ತದೆ. ಇದರ ಜತೆ ಪ್ರಚಾರದ ಇ-ಮೇಲ್ ಗಳು ಸಹ ಬರುತ್ತವೆ. ಆದರಿಂದಾಗಿ ತುಂಬಾ ಜಾಗೂರತೆಯಿಂದ ಇರಬೇಕಾಗುತ್ತದೆ.
ಆಗಾಗ್ಗೆ ಪಾಸ್ವರ್ಡ್ ಗಳನ್ನು ಬದಲಾಯಿಸುತ್ತಿರಬೇಕು
ನಾವು ಹಣಕಾಸು ವ್ಯವಹಾರದ ಸಂದರ್ಭಗಳಲ್ಲಿ ಬಳಸುವ ಪಾಸ್ವರ್ಡ್ ಗಳನ್ನು ಆಗಾಗ್ಗೆ ಬದಲಾಯಿಸುತ್ತಿರಬೇಕು. ಅದರಲ್ಲೂ ಹಿರಿಯ ನಾಗರಿಕರು ಇದನ್ನು ಖಚಿತಪಡಿಸಿಕೊಳ್ಳುತ್ತಿರಬೇಕು. ಇದರಿಂದಾಗಿ ಇನ್ನೊಬ್ಬರೂ ನಿಮ್ಮ ಪಾಸ್ವರ್ಡ್ ಊಹಿಸಲು ಸಾಧ್ಯ ಇರುವುದಿಲ್ಲ. ಇದು ಬ್ಯಾಂಕ್ ಸಂಬಂಧಿ ವ್ಯವಹಾರಗಳಲ್ಲೂ ಪಾಲಿಸಬೇಕು.
ಬ್ಯಾಂಕ್ ಸ್ಟೇಟ್ಮೆಂಟ್(ಹೇಳಿಕೆ)
ಕ್ರೆಡಿಟ್ ಕಾರ್ಡ್ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ ಗಳಿಗೆ ಸಂಬಂಧಿಸಿದ ಲಿಖಿತ ಪ್ರತಿಗಳನ್ನು ಸುರಕ್ಷಿತವಾಗಿ ಇಡುವುದು ಅಥವಾ ಅದನ್ನು ನಾಶ ಪಡಿಸುವುದು ಉತ್ತಮ. ಇದರಿಂದಾಗಿ ಗುರುತು ಮತ್ತು ಬ್ಯಾಂಕಿನ ವಂಚನೆ ತಪ್ಪಿಸಿಕೊಳ್ಳಬಹುದು. ಇಲ್ಲದಿದ್ದರೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ.
ಕ್ರೆಡಿಟ್ ಕಾರ್ಡ್ ವೆಚ್ಚಗಳನ್ನು ನಿಯಂತ್ರಿಸಿ
ಕೆಲವೊಮ್ಮೆ ಕ್ರೆಡಿಟ್ ಕಾರ್ಡ್ ಗಳನ್ನು ಹ್ಯಾಕ್ ಮಾಡುವವರು ನಿಮ್ಮ ಗಮನಕ್ಕೆ ಬರದಂತೆ ಕ್ರೆಡಿಟ್ ಕಾರ್ಡ್ ಬಳಸಿ ಹಣವನ್ನು ತೆಗೆದುಕೊಳ್ಳಬಹುದು.
ಕ್ರೆಡಿಟ್ ಕಾರ್ಡಿನ ಖರ್ಚುವೆಚ್ಚಗಳ ಬಗ್ಗೆ ನಿಮಗೆ ಸರಿಯಾದ ಜ್ಞಾನ ಮತ್ತು ಮಾಹಿತಿ ಇರಬೇಕಾಗುತ್ತದೆ. ಆಗಾಗ್ಗೆ ಕ್ರೆಡಿಟ್ ಕಾರ್ಡ್ ಪರಿಶೀಲನೆ ಮಾಡುತ್ತಿರುವುದರಿಂದ ದುರುಪಯೋಗ ಆಗಿದ್ದಲ್ಲಿ ತಿಳಿಯಬಹುದು. ದುರುಪಯೋಗದ ಸಂದರ್ಭದಲ್ಲಿ ಕಂಪನಿಯ ಗಮನಕ್ಕೆ ತಂದು ಕ್ರೆಡಿಟ್ ಕಾರ್ಡ್ ವಂಚನೆಯನ್ನು ಬಗೆಹರಿಸಿಕೊಳ್ಳಬೆಕಾಗುತ್ತದೆ.
ಶಾಪಿಂಗ್ ಮಾಡುವ ವೆಬ್ಸೈಟ್ ಗಳನ್ನು ಪರಿಶೀಲಿಸುತ್ತಿರಿ
ಶಾಪಿಂಗ್ ವೆಬ್ಸೈಟ್ ಗಳನ್ನು ಬಳಸುವಾಗ ತುಂಬಾ ಜಾಗರೂಕತೆಯಿಂದ ವ್ಯವಹರಿಸಬೇಕಾಗುತ್ತದೆ. ಏಕೆಂದರೆ ವಂಚಕರು ವೆಬ್ಸೈಟ್ ಗಳನ್ನು ಹ್ಯಾಕ್ ಮಾಡುವುದರಲ್ಲಿ ನಿಸ್ಸೀಮರಾಗಿರುತ್ತಾರೆ.
ಕೆಲ ನಕಲಿ ವೆಬ್ಸೈಟ್ ಗಳಿದ್ದು ಅವುಗಳಲ್ಲಿ ಶಾಪಿಂಗ್ ಮಾಡುವುದರಿಂದ ನಿಮ್ಮ ಕ್ರೆಡಿಟ್ ಕಾರ್ಡ್ ಮಾಹಿತಿ ಎಲ್ಲವು ಅವರಿಗೆ ಲಭ್ಯವಾಗುತ್ತದೆ. ಇವೆಲ್ಲವೂ ವಂಚನೆಯ ಅನೆಕ ಮುಖಗಳಾಗಿದ್ದು ಇವುಗಳಿಂದ ತಪ್ಪಿಸಿಕೊಳ್ಳುವುದು ನಿಮ್ಮ ಕರ್ತವ್ಯ.
ವೈರಸ್(Anti Virus Software ) ಸಾಪ್ಟವೇರ್ ಬಳಸಿ
ಉತ್ತಮವಾದ ವೈರಸ್(Anti Virus Software ) ಸಾಪ್ಟವೇರ್ ಖರೀದಿಸಿ. ಇದೊಂದು ಸಮಗ್ರವಾದ ಉತ್ತಮ ತಂತ್ರಾಂಶವಾಗಿದ್ದು ಕೇವಲ ಅಂತರ್ಜಾಲ ವಿರೋಧಿ ತಂತ್ರಾಂಶ ಮಾತ್ರ ಅಲ್ಲ. ಬದಲಾಗಿ ಸಂಪೂರ್ಣವಾದ ಫೈರ್ ವಾಲ್ ರಕ್ಷಣೆಯನ್ನು ಹೊಂದಿರಬೆಕು.
ಇದು ಎಲ್ಲ ಅಂಕಿಅಂಶಗಳನ್ನು ಸುರಕ್ಷಿತವಾಗಿಡಬೇಕು. ಜತೆಗೆ ವಂಚಕರು/ಕಳ್ಳರು ದುರುಪಯೋಗ ಮಾಡದಂತೆ ರಕ್ಷಿಸುವಂತಿರಬೇಕು.
ಫೋನಿನಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ
ಯಾರಿಗೂ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಕೊಡಬೆಡಿ. ಸೇವೆ ಒದಗಿಸುವವರಿಗೆ ಅನವಶ್ಯಕ ವಿಷಯಗಳಿಗಾಗಿ ತೊಂದರೆ ಕೊಡಬೇಡಿ("Do not disturb") ಎಂದು ನೋಂದಣಿ ಮಾಡಿಸಿಕೊಳ್ಳಿ. ಇದರಿಂದಾಗಿ ಅನವಶ್ಯಕ ಮತ್ತು ಫೇಕ್ ಕರೆಗಳಿಂದ ತಪ್ಪಿಸಿಕೊಳ್ಳಬಹುದು. ಅಲ್ಲದೇ ವಂಚಕರಿಂದಲೂ ಮುಕ್ತಿ ಪಡೆಯಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications