ಸುಕನ್ಯಾ ಸಮೃದ್ಧಿ ಖಾತೆಯನ್ನು ಯಾವುದೇ ಬ್ಯಾಂಕು ಅಥವಾ ಅಂಚೆ ಕಚೇರಿಗಳಲ್ಲಿ ತೆರೆಯಬಹುದಾಗಿದೆ. ಈ ಖಾತೆಯನ್ನು ಯಾರು ಈಗಾಗಲೇ ತೆರೆದಿದ್ದಾರೆ ಅಥವಾ ಯಾರು ಮುಂದೆ ತೆರೆಯುವವರಿದ್ದಾರೆ ಅವರೇಲ್ಲರೂ ಅನೇಕ ನಿಯಮಗಳನ್ನು ಪಾಲಿಸಬೇಕಾಗಿದೆ.
ಕೇಂದ್ರ ಸರ್ಕಾರ ಕಳೆದ ವರ್ಷ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Scheme) ಆರಂಭಿಸಿದೆ. ಇದು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಪ್ರತಿಷ್ಠಿತ ಯೋಜನೆ ಆಗಿದೆ. ಈ ಯೋಜನೆ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಖಾತೆ ಸೌಲಭ್ಯ ಹೊಂದಿರುತ್ತದೆ.
ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಂದರ್ಭದಲ್ಲಿ ಪಾಲಕರನ್ನು ಪ್ರೋತ್ಸಾಹಿಸುವುದು ಈ ಉಳಿತಾಯ ಖಾತೆಯ ಪ್ರಮುಖ ಉದ್ದೇಶವಾಗಿದೆ.
ಸುಕನ್ಯಾ ಸಮೃದ್ಧಿ ಖಾತೆಯನ್ನು ಯಾವುದೇ ಬ್ಯಾಂಕು ಅಥವಾ ಅಂಚೆ ಕಚೇರಿಗಳಲ್ಲಿ ತೆರೆಯಬಹುದಾಗಿದೆ. ಈ ಖಾತೆಯನ್ನು ಯಾರು ಈಗಾಗಲೇ ತೆರೆದಿದ್ದಾರೆ ಅಥವಾ ಯಾರು ಮುಂದೆ ತೆರೆಯುವವರಿದ್ದಾರೆ ಅವರೇಲ್ಲರೂ ಅನೇಕ ನಿಯಮಗಳನ್ನು ಪಾಲಿಸಬೇಕಾಗಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ಸುಕನ್ಯಾ ಸಮೃದ್ಧಿ ಖಾತೆ ಸಂದರ್ಭದಲ್ಲಿ ಪಾಲಿಸಬೇಕಾದ ಹೊಸ ನಿಯಮಗಳ ವಿವರ ಇಲ್ಲಿ ನೀಡಲಾಗಿದೆ.
ಪೌರತ್ವ
ಸುಕನ್ಯಾ ಸಮೃದ್ಧಿ ಖಾತೆದಾರರ ಪೌರತ್ವದಲ್ಲಿ ಬದಲಾವಣೆಗಳಾದಲ್ಲಿ ಖಾತೆಯನ್ನು ಮುಚ್ಚಲಾಗುವುದು. ಅಂದರೆ ವಿದೇಶದಲ್ಲಿ ಹೋಗಿ ವಾಸವಾದರೆ ಖಾತೆಯನ್ನು ಅಕಾಲಿಕವಾಗಿ ಮುಚ್ಚಲಾಗುವುದು.
ಖಾತೆ ವರ್ಗಾವಣೆ
ಮೂಲ ವಾಸ್ತವ್ಯ ವಿಳಾಸದೊಂದಿಗೆ ಖಾತೆಯನ್ನು ಅಂಚೆ ಕಚೇರಿಯಿಂದ ಬ್ಯಾಂಕಿಗೆ ಅಥವಾ ಬ್ಯಾಂಕಿನಿಂದ ಅಂಚೆ ಕಚೇರಿಗೆ ವರ್ಗಾಯಿಸಲಾಗುವುದು. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ.
ಗರಿಷ್ಠ ಮೊತ್ತ
ಒಂದು ಹಣಕಾಸು ವರ್ಷದ ಅವಧಿಯಲ್ಲಿ ಖಾತೆಯ ಒಟ್ಟು ಠೇವಣಿ ಮೊತ್ತ 1.5 ಲಕ್ಷ ದಾಟಬಾರದು. ಇದಕ್ಕಿಂತಲೂ ಹೆಚ್ಚಿನ ಮೊತ್ತಕ್ಕೆ ಯಾವುದೆ ಬಡ್ಡಿ ಇರುವುದಿಲ್ಲ.
1.5 ಲಕ್ಷಕ್ಕಿಂತ ಹೆಚ್ಚು ಇಟ್ಟಿರುವ ಮೊತ್ತವನ್ನು ಖಾತೆದಾರರು ಯಾವಾಗ ಬೇಕಾದರೂ ಹಿಂಪಡೆಯಬಹುದು.
ಬಡ್ಡಿದರ
ಸರ್ಕಾರ ಈ ಖಾತೆಯ ಬಡ್ಡಿದರವನ್ನು ಕಾಲ ಕಾಲಕ್ಕೆ ನಿರ್ಧರಿಸಲಿದೆ ಹಾಗೂ ವಾರ್ಷಿಕವಾಗಿ ಇದನ್ನು ಪರಿಷ್ಕರಿಸಲಿದೆ. ಜತೆಗೆ ಖಾತೆಗೆ ಪಾವತಿಸಲಿದೆ.
ಸರ್ಕಾರ ಪ್ರತಿ ತ್ರೈಮಾಸಿಕಕ್ಕೆ ಅನುಗುಣವಾಗಿ ಬಡ್ಡಿಯನ್ನು ಘೋಷಿಸಲಿದೆ. ವಾರ್ಷಿಕವಾಗಿ ಪ್ರಸ್ತುತ ತ್ರೈಮಾಸಿಕದ ಬಡ್ಡಿದರ ಶೇ. 8.3ರಷ್ಟು ಇದೆ.
ಠೇವಣಿ ವಯಸ್ಸು
ಈ ಹಿಂದೆ ಠೇವಣಿಯನ್ನು 14ನೇ ವಯಸ್ಸಿನವರೆಗೆ ಮಾಡಿಸಬಹುದಾಗಿತ್ತು. ಆದರೆ ಈಗ ಇದನ್ನು 15ನೇ ವರ್ಷಕ್ಕೆ ಹೆಚ್ಚಿಸಲಾಗಿದೆ.
ಕನಿಷ್ಟ ಠೇವಣಿ
ಮೊದಲಿಗೆ ವಾರ್ಷಿಕವಾಗಿ ಕನಿಷ್ಟ ಠೇವಣಿ 1000 ರೂಪಾಯಿಗಳಿದ್ದವು. ಜತೆಗೆ ಶೇ. 8.4ರಷ್ಟು ಬಡ್ಡಿದರ ಇದೆ. ಪ್ರಸ್ತುತ ಯಾವುದೇ ಕನಿಷ್ಟ ಠೇವಣಿ ಇಟ್ಟಿಲ್ಲ. ಆದರೆ ಸಾಮಾನ್ಯ ಉಳಿತಾಯ ಖಾತೆದಾರರು ಶೇ. 4ರಷ್ಟು ಬಡ್ಡಿ ಪಡೆಯಲು ಅರ್ಹರಾಗಿರುತ್ತಾರೆ.
ವಿದ್ಯುನ್ಮಾನ ವರ್ಗಾವಣೆ
ಈ ಮೊದಲು ಠೇವಣಿಗಳನ್ನು ನಗದು, ಚೆಕ್ ಅಥವಾ ಡಿಡಿ ಮೂಲಕ ಇಡಬಹುದಾಗಿತ್ತು. ಈಗ ಪೋಷಕರು ವಿದ್ಯುನ್ಮಾನದ ಮೂಲಕ(ಇ-ಟ್ರಾನ್ಸ್ಪರ್) ಅಂಚೆ ಕಚೇರಿ ಅಥವಾ ಬ್ಯಾಂಕಿಗೆ ಮೊತ್ತ ಪಾವತಿ ಮಾಡಬಹುದು.
ಮೆಚುರಿಟಿ
ಖಾತೆ ತೆರೆದ ದಿನದಿಂದ 21ನೇ ವಯಸ್ಸು ಪೂರೈಸಿದ ನಂತರ ಈ ಖಾತೆಯ ಮೆಚುರಿಟಿ ಅವಧಿ ಮುಗಿಯುತ್ತದೆ.
21 ವರ್ಷಗಳ ಅವಧಿ ಮುಗಿದ ನಂತರ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications