ಮನೆಗಳನ್ನು ಹೊಂದುವುದು ಪ್ರತಿಯೊಬ್ಬ ಭಾರತೀಯನ ಕನಿಷ್ಟ ಮೂಲಭೂತ ಅಗತ್ಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕೆನ್ನುವುದು ಪ್ರಧಾನಿ ಮೋದಿಯವರ ಕನಸು.
ಮನೆಗಳನ್ನು ಹೊಂದುವುದು ಪ್ರತಿಯೊಬ್ಬ ಭಾರತೀಯನ ಕನಿಷ್ಟ ಮೂಲಭೂತ ಅಗತ್ಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕೆನ್ನುವುದು ಪ್ರಧಾನಿ ಮೋದಿಯವರ ಕನಸು. ಈ ಆಶಯದ ಸಾಕಾರಕ್ಕಾಗಿ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಅವಾಸ್ ಯೋಜನೆ ಆರಂಭಿಸಿದೆ.
12 ಲಕ್ಷ ಮನೆ ನಿರ್ಮಾಣ ಗುರಿ
ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ 12 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, 2017-18 ರ ಸಾಲಿನಲ್ಲಿ ಈ ಗುರಿ ಮುಟ್ಟಲು ಉದ್ದೇಶಿಸಲಾಗಿದೆ.
ಪಿಎಂಎವೈ(ನಗರ) ಅಡಿ ಎಷ್ಟು ಮನೆ?
ಪ್ರಧಾನಮಂತ್ರಿ ಅವಾಸ್ ಯೋಜನೆ(ನಗರ) ಅಡಿಯಲ್ಲಿ 2018-19ರಲ್ಲಿ 26 ಲಕ್ಷ ಮನೆ, 2019-20ರ ಸಾಲಿನಲ್ಲಿ 26 ಲಕ್ಷ, 2020-21ರ ಸಾಲಿನಲ್ಲಿ 30 ಲಕ್ಷ ಮನೆ, 2021-22ರಲ್ಲಿ 29.80 ಲಕ್ಷ ಮನೆಗಳ ನಿರ್ಮಾಣ ಮಾಡಲಾಗುವುದು ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರೂ ಹೇಳಿದ್ದಾರೆ.
2016-17ರಲ್ಲಿ ಎಷ್ಟು?
ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಕಳೆದ 2016-17ರ ಸಾಲಿನಲ್ಲಿ ಕೇವಲ 1.49 ಲಕ್ಷ ಮನೆಗಳ ನಿರ್ಮಾಣ ಮಾಡಲಾಗಿದೆ.
ನಿಧಾನಗತಿಗೆ ಕಾರಣ?
ಪಿಎಂಎವೈ(ನಗರ) ಯೋಜನೆ ಅಡಿ ಮನೆ ನಿರ್ಮಾಣ ಕಾರ್ಯ ಮಂದಗತಿಯಿಂದ ಸಾಗಿದೆ. ಮನೆ ನಿರ್ಮಾಣದ ದುರ್ಬಲವಾದ ಅನುಷ್ಠಾನಕ್ಕೆ ಮತ್ತು ನಿಧಾನಗತಿಗೆ ಭೂ ಸ್ವಾಧೀನ ವಿಳಂಬ ಪ್ರಮುಖ ಕಾರಣವಾಗಿದೆ ಎನ್ನಲಾಗಿದೆ.
18 ಲಕ್ಷ ಮನೆ ನಿರ್ಮಾಣಕ್ಕೆ ಅನುಮೋದನೆ
ಇಲ್ಲಿಯವರೆಗೆ 18.76 ಮನೆಗಳ ನಿರ್ಮಾಣದ ಪ್ರಸ್ತಾಪವನ್ನು ಅನುಮೋದಿಸಲಾಗಿದೆ. 13.06 ಲಕ್ಷ ಮನೆ ನಿರ್ಮಿಸಲು ಹಣ ನೀಡಲಾಗಿದೆ. ಆದರೆ 2016-17ರ ಸಾಲಿನಲ್ಲಿ ಭೂ ಸ್ವಾಧೀನ ವಿಳಂಬದಿಂದಾಗಿ 1.49 ಲಕ್ಷ ಮನೆ ನಿರ್ಮಾಣ ಮಾತ್ರ ಸಾಧ್ಯವಾಗಿದೆ.
2022ರಲ್ಲಿ ಎಲ್ಲರಿಗೂ ಮನೆ
ಪ್ರಧಾನಿ ಮೋದಿಯವರ ಆಶಯದಂತೆ ಅವಾಸ್ ಯೋಜನೆ ಅಡಿಯಲ್ಲಿ 2022ರಲ್ಲಿ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎಂದು 2015ರ ಜೂನ್ ನಲ್ಲಿ ಈ ಯೋಜನೆ ಲಾಂಚ್ ಮಾಡಲಾಗಿದೆ. ಈ ಯೋಜನೆ ಭಾರತ ಗುಡಿಸಲು ಮುಕ್ತ, ಟೆಂಟ್ ಮುಕ್ತ ದೇಶವಾಗಬೇಕು ಎಂಬ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಗೆ ತೀವ್ರವಾದ ವೇಗವನ್ನು ಕೊಟ್ಟು ಆದಾಯದ ಮಿತಿ ಮತ್ತು ಅವಧಿಯಲ್ಲಿ ಸಡಿಲಿಕೆ ಘೋಷಿಸಿದ್ದಾರೆ.
ಇಂಪ್ಲಿಮೆಂಟ್ ಮಾಡುವವರು ಯಾರು?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್(NHB), BLC(beneficiary led construction) ಘಟಕ ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ. ಮೊದಲ ಬಾರಿ ಮನೆ ಖರೀದಿಸುತ್ತಿದ್ದಿರಾ? ಹಾಗಿದ್ದರೆ 2.4 ಲಕ್ಷ ಸಬ್ಸಿಡಿ ಪಡೆಯಿರಿ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications