ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ವಯ ವಂದನ ಯೋಜನೆಯ(ಪಿಎಂವಿವಿವೈ)ಹೂಡಿಕೆ ಮಿತಿಯನ್ನು ದುಪ್ಪಟ್ಟುಗೊಳಿಸಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ವಯ ವಂದನ ಯೋಜನೆಯ(ಪಿಎಂವಿವಿವೈ)ಹೂಡಿಕೆ ಮಿತಿಯನ್ನು ದುಪ್ಪಟ್ಟುಗೊಳಿಸಿದೆ.
ವಯಸ್ಸಾದ ಸಮಯದಲ್ಲಿ ಸಾಮಾಜಿಕ ಭದ್ರತೆಯನ್ನು ಒದಗಿಸಲು ಮತ್ತು ಅನಿಶ್ಚಿತ ಮಾರುಕಟ್ಟೆ ಪರಿಸ್ಥಿತಿಗಳಿಂದಾಗಿ ರಕ್ಷಿಸಲು 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಾದ ವ್ಯಕ್ತಿಗಳಿಗಾಗಿ ಪಿಎಂವಿವಿವೈ ಯೋಜನೆಯನ್ನು ಲೈಫ್ ಇನ್ಶುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೊಳಿಸಲಾಗಿದೆ.
ತಿಂಗಳಿಗೆ ರೂ. 10,000 ಪಿಂಚಣಿ
ಪ್ರಸ್ತುತ ಇದ್ದ ಹೂಡಿಕೆ ಮಿತಿಯನ್ನು ರೂ. 7.5 ಲಕ್ಷದಿಂದ ರೂ. 15 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದು ಹಿರಿಯ ನಾಗರಿಕರು ತಿಂಗಳಿಗೆ ರೂ. 10,000 ಪಿಂಚಣಿ ಪಡೆಯಲು ನೆರವಾಗಲಿದೆ. ಪ್ರಧಾನಮಂತ್ರಿ ವಯ ವಂದನ ಯೋಜನೆ ಬಗ್ಗೆ ನಿಮಗೆಷ್ಟು ಗೊತ್ತು?
ಚಂದಾದಾರಿಕೆ ಅವಧಿ ವಿಸ್ತಾರ
ಈ ಯೋಜನೆಯ ಚಂದಾದಾರಿಕೆಯ ಅವಧಿಯನ್ನು ಎರಡು ವರ್ಷಗಳವರೆಗೆ (ಮೇ 4, 2018 ರಿಂದ ಮಾರ್ಚ್ 31, 2020)ವಿಸ್ತರಿಸಲಾಗಿದೆ. ಈ ಹಿಂದೆ ಪ್ರಧಾನಮಂತ್ರಿ ವಯ ವಂದನ ಯೋಜನೆ(PMVVY)ಯನ್ನು ಮೇ 14 2017ರಿಂದ, ಮೇ 3 2018ರವರೆಗಿನ ಒಂದು ವರ್ಷದ ಅವಧಿ ಒಳಗಾಗಿ ಖರೀದಿಸಬೇಕಾಗಿತ್ತು.
ನಿಯಮಿತ ಆದಾಯ
2018ರ ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯ ಬಂಡವಾಳ ಮಿತಿಯನ್ನು ರೂ. 15 ಲಕ್ಷಕ್ಕೆ ಹೆಚ್ಚಿಸುವುದಾಗಿ ಹೇಳಿದ್ದರು. ಸ್ಥಿರ ಠೇವಣಿ (ಎಫ್ ಡಿ) ಮೇಲಿನ ಬಡ್ಡಿದರಗಳು ಆಕರ್ಷಕವಾಗಿರದ ಸಮಯದಲ್ಲಿ ನಿಯಮಿತ ಆದಾಯ ಗಳಿಸಲು ಈ ಯೋಜನೆ ಸಹಕಾರಿಯಾಗಲಿದೆ.
ಶೇ. 8 ಬಡ್ಡಿದರ
ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯಡಿ ಶೇ. 8 ರಷ್ಟು ಬಡ್ಡಿದರವನ್ನು ನೀಡಲಾಗುವುದು. ಹಿರಿಯ ನಾಗರಿಕರು ಮಾಸಿಕ 10,000 ರೂ.ವರೆಗೂ ಪಿಂಚಣಿ ಪಡೆಯಬಹುದಾಗಿದೆ. ವಾರ್ಷಿಕ, ಅರ್ಧ-ವಾರ್ಷಿಕ, ತ್ರೈಮಾಸಿಕ, ಅಥವಾ ಮಾಸಿಕ ಆಧಾರದ ಮೇಲೆ ಪಿಂಚಣಿ ಆಯ್ಕೆ ಮಾಡುವ ಮೂಲಕ ವಾರ್ಷಿಕವಾಗಿ ಶೇ. 8ರಷ್ಟು ಬಡ್ಡಿದರ ನೀಡಲಿದೆ.
2.23 ಲಕ್ಷ ಹಿರಿಯ ನಾಗರಿಕರು ಲಾಭ
ಮಾರ್ಚ್ 2018ರ ವೇಳೆಗೆ, ಒಟ್ಟು 2.23 ಲಕ್ಷ ಹಿರಿಯ ನಾಗರಿಕರು ಪ್ರಧಾನ ಮಂತ್ರಿ ವಯ ವಂದನ ಯೋಜನೆ(ಪಿಎಂವಿವಿವೈ) ಅಡಿಯಲ್ಲಿ ನಿಯಮಿತ ಪಿಂಚಣಿ ಪಡೆಯುತ್ತಿದ್ದಾರೆ. ಪಿಎಂವಿವಿವೈ ಅನ್ನು ಆಫ್ಲೈನ್ ನಲ್ಲಿ ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (ಎಲ್ಐಸಿ) ಮೂಲಕ ಆನ್ಲೈನ್ ನಲ್ಲಿ ಖರೀದಿಸಬಹುದು.
10 ವರ್ಷಗಳ ಪಾಲಿಸಿ ಅವಧಿ ನಂತರ?
10 ವರ್ಷಗಳ ಪಾಲಿಸಿ ಅವಧಿಯ ಕೊನೆಯಲ್ಲಿ, ಪಿಂಚಣಿದಾರರು ಅಂತಿಮ ಪಿಂಚಣಿ ಕಂತುಗಳೊಂದಿಗೆ ಖರೀದಿ ದರವನ್ನು (ಪಿಂಚಣಿಗಾಗಿ ಹೂಡಿಕೆ ಮಾಡಲಾದ ಹಣ) ಹಿಂಪಡೆಯುತ್ತಾರೆ. 10 ವರ್ಷಗಳ ಪಾಲಿಸಿಯ ಅವಧಿಯಲ್ಲಿ ಪಿಂಚಣಿದಾರನ ಮರಣದ ನಂತರ ಅವರ ಫಲಾನುಭವಿಗೆ ಮೊತ್ತವನ್ನು ಪಾವತಿಸಲಾಗುವುದು.
ಆದಾಯ ಮತ್ತು ಉಳಿತಾಯ
ಆದಾಯ ಮತ್ತು ಉಳಿತಾಯಕ್ಕಾಗಿ ಹೆಚ್ಚಿನ ಲೇಖನಗಳನ್ನು ಇಲ್ಲಿ ನೀಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications