ಕೊಳಗೇರಿ ವಾಸಿಗಳು, ನಗರ, ಅರೆನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ವಸತಿ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಮನೆ ನಿರ್ಮಾಣಕ್ಕೆ ಹಣಕಾಸಿನ ಸಹಾಯ ಮಾಡಲಾಗುತ್ತದೆ.
ದೇಶದ ಪ್ರತಿಯೊಂದು ಕುಟುಂಬಕ್ಕೂ 2022ರ ವೇಳೆಗೆ ಮನೆ ಸಿಗಬೇಕು ಎನ್ನುವುದು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಉದ್ದೇಶ. ವಸತಿ ಎನ್ನುವುದು ಮಾನವನ ಮೂಲಭೂತ ಅಗತ್ಯವಾಗಿದೆ. ಮಖಾನ್, ಘರ್, ರೋಟಿ ಇವು ಮಾನವನ ಜೀವನದಲ್ಲಿ ಅತಿಮುಖ್ಯವಾದವುಗಳು.
ಕೇಂದ್ರ ಸರ್ಕಾರ "ಪ್ರಧಾನ ಮಂತ್ರಿ ಅವಾಸ ಯೋಜನೆ" (Pradhan ,Mantri Awas Yojana) ಪ್ರಾರಂಭಿಸಿದ್ದು, ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ. ಗ್ರಾಮೀಣ, ನಗರ, ಅರೆನಗರ ಹೀಗೆ ಎಲ್ಲಾ ಕ್ಷೇತ್ರಗಳು ಒಳಪಟ್ಟಿವೆ.
ಕೊಳಗೇರಿ ವಾಸಿಗಳು, ನಗರ, ಅರೆನಗರ ಸೇರಿದಂತೆ ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ವಸತಿ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ (ಪಿಎಂಎವೈ) ಮನೆ ನಿರ್ಮಾಣಕ್ಕೆ ಹಣಕಾಸಿನ ಸಹಾಯ ಮಾಡಲಾಗುತ್ತದೆ. 'ಉದ್ಯೋಗಿನಿ ಯೋಜನೆ' ಅಡಿಯಲ್ಲಿ 3 ಲಕ್ಷ ಸಾಲ, 90 ಸಾವಿರ ಸಬ್ಸಿಡಿ ಪಡೆಯಿರಿ
ನಿಮಗೂ ಸ್ವಂತ ಮನೆ ಕಟ್ಟಿಸಿಕೊಳ್ಳುವ ಕನಸು ಇದ್ದರೆ ಅರ್ಜಿ ಸಲ್ಲಿಸುವ ವಿವಿಧ ಹಂತಗಳನ್ನು ಇಲ್ಲಿ ನೀಡಲಾಗಿದೆ. ಮುಂದೆ ಓದಿ..
ಪ್ರಮುಖ ಅಂಶ ಗಮನಿಸಿ
ಅರ್ಜಿ ಸಲ್ಲಿಸುವ ಮುನ್ನ ನೀವು ಹಲವು ಸಂಗತಿಗಳನ್ನು ಗಮನಿಸಬೇಕಾಗುತ್ತದೆ. ಗ್ರಾಮೀಣ, ನಗರ, ಅರೆನಗರಕ್ಕೆ ಅನುಗುಣವಾಗಿ ನಿಮ್ಮ ಅರ್ಹತೆ ಖಾತರಿಪಡಿಸಿ. ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ನಿಮ್ಮ ವಾರ್ಷಿಕ ವರಮಾನದ ಪತ್ರ ಹೊಂದಿರಬೇಕು. ಪಿಎಂ ಅವಾಸ ಯೋಜನೆಯ ಮಾನದಂಡದ ಪರಿಧಿಯೋಳಗೆ ಬಂದರೆ ಫಲಾನುಭವಿಗಳಾಗುತ್ತಿರಿ.
ಬೇಕಾಗುವ ದಾಖಲಾತಿಗಳು
1. ಆಧಾರ್ ಕಾರ್ಡ್ ಪ್ರತಿ
2. ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ
3. ಪಡಿತರ ಚೀಟಿ (ರೇಷನ್ ಕಾರ್ಡ್ ಜೆರಾಕ್ಸ್)
4. ಚುನಾವಣಾ ಚೀಟಿ
5. ಪಾಸ್ ಪೋರ್ಟ್ ಸೈಜ್ ಪೋಟೊ
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ
ಪ್ರಧಾನ ಮಂತ್ರಿ ಅವಾಸ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25-06-2018 ಆಗಿದ್ದು, ಇನ್ನು ಕೆಲವೆ ಕೆಲ ದಿನಗಳು ಬಾಕಿ ಇವೆ. ನಿಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಫಲಾನುಭವಿಗಳಿಗೆ ಈ ವಿಷಯ ತಲುಪಿಸಿ. ಅರ್ಹ ಫಲಾನುಭವಿಗಳು ಇದರಿಂದ ವಂಚಿತರಾಗಬಾರದು. ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಪಿಎಂಎವೈ ವೆಬ್ಸೈಟ್ ಗೆ ಭೇಟಿ ನೀಡಿ
ಪ್ರಧಾನಮಂತ್ರಿ ಅವಾಸ ಯೋಜನೆಯ ಅಧಿಕೃತ ವೆಬ್ಸೈಟ್ pmaymis.gov.in ಗೆ ಭೇಟಿ ನೀಡಿ. 'ಸಿಟಿಜನ್ ಅಸೆಸ್ಮೆಂಟ್' ಮೆನು ಮೂಲಕ ಪ್ರಧಾನ ಮಂತ್ರಿ ಅವಾಸ ಯೋಜನೆ ಅರ್ಜಿ ಆಪ್ಸನ್ ಆಯ್ಕೆ ಮಾಡಿ. ನಿಮಗೆ ಎರಡು ಆಯ್ಕೆಗಳನ್ನು ನೋಡಬಹುದು: 1. ಸ್ಲಂ ನಿವಾಸಿಗಳು (Slum Dwellers) 2. ಇತರ ಮೂರು ಘಟಕಗಳ ಪ್ರಯೋಜನಗಳು ( rural, urban or semi-urban)
ನೀವು ಕೊಳಗೇರಿ ನಿವಾಸಿಗಳಾಗಿದ್ದರೆ Slum Dwellers ಆಯ್ಕೆ ಮಾಡಿ. ಗ್ರಾಮೀಣ ಭಾಗದವರಾದರೆ Rural ಆಪ್ಷನ್ ಆಯ್ಕೆ ಮಾಡಿ. ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ.
ಅರ್ಜಿ ಭರ್ತಿ ಮಾಡಿ
ಹೊಸ ಪುಟದಲ್ಲಿ ನಿಮ್ಮ ವಿವರಗಳನ್ನು ಸರಿಯಾಗಿ ತುಂಬಬೇಕು. ಇದು ವೈಯಕ್ತಿಕ ವಿವರ, ಸಂಪರ್ಕ ವಿವರ, ಪ್ರಸ್ತುತ ವಸತಿ ವಿಳಾಸ, ಆಧಾರ್ ನಂಬರ್, ಬ್ಯಾಂಕ್ ಖಾತೆ ವಿವರ, ಮನೆ ವಿವರ, ಮೊಬೈಲ್ ನಂಬರ್ ಮತ್ತು ಆದಾಯ ವಿವರಗಳನ್ನು ಒಳಗೊಂಡಿದ್ದು, ಯಾವುದೇ ತಪ್ಪುಗಳಾಗದಂತೆ ಅರ್ಜಿಯಲ್ಲಿ ತುಂಬಬೇಕು.
ಅರ್ಜಿ ತುಂಬಿದ ನಂತರ ಚೆಕ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿ. ಕೊನೆಯಲ್ಲಿ ನೀಡಲಾಗಿರುವ ಕ್ಯಾಪ್ಚಾ ಕೋಡ್ ಭರ್ತಿ ಮಾಡಿ.
ಪ್ರಿಂಟ್ ಔಟ್ ಪಡೆಯಿರಿ
ಅರ್ಜಿಯನ್ನು ತುಂಬಿದ ನಂತರ ಚೆಕ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿದರೆ, ಇದು "I am aware that any claims regarding my inclusions/exclusions shall remain with State govt/urban local body and MoHUPA is just facilitating the process" ಎಂಬುದನ್ನು ತೋರಿಸುತ್ತದೆ. ಅರ್ಜಿಯ ಕೊನೆಯಲ್ಲಿ ಕ್ಯಾಪ್ಚಾ ಕೋಡ್ ತುಂಬಿದ ನಂತರ ಸೇವ್ (Save) ಬಟನ್ ಕ್ಲಿಕ್ ಮೇಲೆ ಮಾಡಿ. ಅಂತಿಮವಾಗಿ ನೀವು ಪ್ರಿಂಟ್ ಬಟನ್ ಮೇಲೆ ಕ್ಲಿಕ್ ಮಾಡಿ ಪ್ರಿಂಟ್ ಔಟ್ ಪಡೆಯಬಹುದು.
ನೋಂದಣಿ (ಅರ್ಜಿ) ಸಂಖ್ಯೆ
ಅರ್ಜಿಯ ಕೊನೆಯಲ್ಲಿ ಕ್ಯಾಪ್ಚಾ ಕೋಡ್ ತುಂಬಿದ ನಂತರ ಸೇವ್ (Save) ಬಟನ್ ಕ್ಲಿಕ್ ಮೇಲೆ ಮಾಡಿದ ನಂತರ ಸ್ಕ್ರೀನ್ ಮೇಲೆ ಒಂದು ನೋದಣೆ ಸಂಖ್ಯೆ ಕಾಣಿಸುತ್ತದೆ. ಇದು ಅಪ್ಲಿಕೇಶನ್ ಸಂಖ್ಯೆಯಾಗಿರುತ್ತದೆ. ಇದನ್ನು ಎಚ್ಚರಿಕೆಯಿಂದ ಬರೆದಿಟ್ಟುಕೊಳ್ಳಬೇಕು. ಮುಂದಿನ ಪ್ರಕ್ರಿಯೆಗಳಿಗೆ ಅಥವಾ ಅರ್ಜಿ ಎಡಿಟ್ ಮಾಡಲು, ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ ನಂಬರ್ ಬೇಕಾಗುತ್ತದೆ.
ಅಪ್ಲಿಕೇಶನ್ ಸ್ಟೇಟಸ್ ಪರಿಶೀಲನೆ
ಪಿಎಂಎವೈ ಅರ್ಜಿಯ ಪ್ರಸ್ತುತ ಸ್ಟೇಟಸ್ ನ್ನು pmaymis.gov.in ವೆಬ್ಸೈಟ್ ಮೂಲಕ ತಿಳಿದುಕೊಳ್ಳಬಹುದು. ನಿಮ್ಮಿಂದ ತುಂಬಲ್ಪಟ್ಟಿರುವ ನಿಮ್ಮ ಬಗೆಗಿನ ಸಂಪೂರ್ಣ ಮಾಹಿತಿ ಒಳಗೊಂಡಿರುವ ಆನ್ಲೈನ್ ಅರ್ಜಿಯ ಒಂದು ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ. ನಿಮ್ಮ ಅರ್ಜಿಯ ಸ್ಟೇಟಸ್ ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. (http://pmaymis.gov.in/Track_Application_Status.aspx)
ಕೊನೆ ಮಾತು
2022ರಲ್ಲಿ ಎಲ್ಲರಿಗೂ ಮನೆ ಪ್ರಧಾನಿ ಮೋದಿಯವರ ಆಶಯದಂತೆ ಅವಾಸ್ ಯೋಜನೆ ಅಡಿಯಲ್ಲಿ 2022ರಲ್ಲಿ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು. ಭಾರತ ಗುಡಿಸಲು ಮುಕ್ತ, ಟೆಂಟ್ ಮುಕ್ತ ದೇಶವಾಗಬೇಕು ಎಂಬ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಗೆ ತೀವ್ರವಾದ ವೇಗವನ್ನು ಕೊಟ್ಟು ಆದಾಯದ ಮಿತಿ ಮತ್ತು ಅವಧಿಯಲ್ಲಿ ಸಡಿಲಿಕೆ ಘೋಷಿಸಿದ್ದಾರೆ. ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ನಿಮ್ಮ ವಾರ್ಷಿಕ ಆದಾಯ ರೂ. 18 ಲಕ್ಷ ಇದ್ದು, ಮೊದಲ ಬಾರಿ ಮನೆ ಖರೀದಿಸುತ್ತಿದ್ದರೆ ಮನೆ ಸಾಲದ ಬಡ್ಡಿಯ ಭಾಗವಾಗಿ ಸರ್ಕಾರದಿಂದ ರೂ. 2.4 ಲಕ್ಷ ಸಬ್ಸಿಡಿ ಪಡೆಯಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications