ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಕೇಂದ್ರ ಸರ್ಕಾರ ಪರಿಚಯಿಸಿರುವ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷ ರೂ. 5 ಲಕ್ಷ ವಿಮಾ ಸೌಲಭ್ಯ ಒದಗಿಸುತ್ತದೆ.
ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂಜೆಎವೈ) ಕೇಂದ್ರ ಸರ್ಕಾರ ಪರಿಚಯಿಸಿರುವ ಆರೋಗ್ಯ ವಿಮಾ ಯೋಜನೆಯಾಗಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷ ರೂ. 5 ಲಕ್ಷ ವಿಮಾ ಸೌಲಭ್ಯ ಒದಗಿಸುತ್ತದೆ.
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಸುಮಾರು 10.74 ಕೋಟಿಗೂ ಹೆಚ್ಚು ದುರ್ಬಲ ಬಡ ಕುಟುಂಬಗಳಿಗೆ ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕ್ಯಾಶ್ಲೆಸ್ ಮತ್ತು ಕಾಗದರಹಿತ ರೀತಿಯಲ್ಲಿ ಸೌಲಭ್ಯ ಒದಗಿಸುತ್ತದೆ ಎಂದು ನ್ಯಾಷನಲ್ ಹೆಲ್ತ್ ಏಜೆನ್ಸಿ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ) ತನ್ನ ವೆಬ್ಸೈಟ್, www.abnhpm.gov.in ನಲ್ಲಿ ತಿಳಿಸಿದೆ. ಆಯುಷ್ಮಾನ್ ಭಾರತ್ ಯೋಜನೆ: 5 ಲಕ್ಷ ವಿಮಾ ಸೌಲಭ್ಯ ಪಡೆಯೋದು ಹೇಗೆ?
ಯೋಜನಾ ಉದ್ದೇಶ
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಗುರಿ ಹೊಂದಿದೆ. ಬಡ ಮತ್ತು ದುರ್ಬಲ ಕುಟುಂಬಗಳ ಮೇಲಿನ ಹಣಕಾಸು ಹೊರೆಯನ್ನು ಕಡಿಮೆ ಮಾಡಿ ಉತ್ತಮ ಆಸ್ಪತ್ರೆ ಸೌಲಭ್ಯ ಒದಗಿಸುವುದು.
ಅಯುಷ್ಮಾನ್ ಭಾರತ್
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಸಂಗತಿಗಳು ಇಲ್ಲಿವೆ:
- PMJAY ಯೋಜನೆಯು ದೇಶದಾದ್ಯಂತ 10.74 ಕೋಟಿ ಇರುವ ಬಡ ಮತ್ತು ದುರ್ಬಲ ಕುಟುಂಬಗಳಿಗೆ(ಅಂದಾಜು ೫೦ ಕೋಟಿ ಫಲಾನುಭವಿಗಳು)ವರ್ಷಕ್ಕೆ ರೂ. ೫ ಲಕ್ಷದವರೆಗೆ ಆರೋಗ್ಯ ವಿಮಾ ಒದಗಿಸಲಾಗುವುದು ಎಂದು ರಾಷ್ಟ್ರೀಯ ಆರೋಗ್ಯ ಸಂಸ್ಥೆ ಹೇಳಿದೆ.
- PMJAY ಒಂದು ಅರ್ಹತೆ ಆಧಾರಿತ ಯೋಜನೆಯಾಗಿದ್ದು, ಔಪಚಾರಿಕ ನೋಂದಣಿ ಪ್ರಕ್ರಿಯೆ ಅಗತ್ಯವಿಲ್ಲ.
- ಎಲ್ಲಾ ಸಾರ್ವಜನಿಕ ಮತ್ತು ಎಂಪನೇಲ್ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಲಭ್ಯವಿದೆ.
- ಎಲ್ಲಾ ಫಲಾನುಭವಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆಗಳಿಗೆ ನಗದುರಹಿತ ಮತ್ತು ಕಾಗದರಹಿತ ಪ್ರವೇಶವನ್ನು ಒದಗಿಸಲಾಗಿದೆ.
ಯಾವ ಕಾಯಿಲೆಗಳು
ಅರ್ಹ ಫಲಾನುಭವಿಗಳು ಶಸ್ತ್ರಚಿಕಿತ್ಸೆ, ವೈದ್ಯಕೀಯ ಮತ್ತು ದಿನದ ಆರೈಕೆ ಚಿಕಿತ್ಸೆಗಳು, ಔಷಧಗಳು ಮತ್ತು 1,350 ವೈದ್ಯಕೀಯ ಪ್ಯಾಕೇಜ್ ಗಳಿಗಾಗಿ ಭಾರತದಾದ್ಯಂತ ಸೇವೆಗಳನ್ನು ಪಡೆಯಬಹುದು. ಧೀರ್ಘಕಾಲಿನ ರೋಗಗಳು, ಹೃದಯದ ಬೈಪಾಸ್, ಸರ್ಜರಿ ಮಂಡಿ ಚಿಪ್ಪು ಅಳವಡಿಕೆ ಕಾಯಿಲೆಗಳಿಗೂ ಚಿಕಿತ್ಸೆ ಸಿಗಲಿದೆ. ಪೂರ್ವಭಾವಿಯಾಗಿ ಇರುವ ಎಲ್ಲ ಕಾಯಿಲೆಗಳನ್ನು PMJAY ಯೋಜನೆ ಕೂಡ ಒಳಗೊಂಡಿದೆ.
ಅರ್ಹತೆ ಪರಿಶೀಲನೆ
ಈ ಯೋಜನೆಯ ಪ್ರಯೋಜನ ಪಡೆಯಲು ಇಚ್ಚಿಸುವವರು ಅರ್ಹತೆಯನ್ನು ಪರಿಶಿಲಿಸಲು, ಸಹಾಯವಾಣಿ ಸಂಖ್ಯೆ 14555/1800111565 ಸಂಪರ್ಕಿಸಬಹುದು. ಇಲ್ಲವೇ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್ಸಿ) ಭೇಟಿ ಮಾಡಿ ಅಥವಾ mera.pmjay.gov.in ವೆಬ್ಸೈಟ್ ಲಾಗ್ ಇನ್ ಆಗಬಹುದು. ಜೊತೆಗೆ ಎಂಪನೇಲ್ ಆಸ್ಪತ್ರೆಗಳಲ್ಲಿ ಸಹ ಪರಿಶೀಲಿಸಬಹುದು. ಆಯುಷ್ಮಾನ್ ಮಿತ್ರ ನೇಮಕಾತಿ: ಉದ್ಯೋಗ ಪಡೆಯಲು ಬೇಕಾದ ಅರ್ಹತೆ ಹಾಗು ಅರ್ಜಿ ಸಲ್ಲಿಸುವುದು ಹೇಗೆ?
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications