ಪ್ರಧಾನ ಮಂತ್ರಿ ಕರ್ಮ ಯೋಗಿ ಮಾನ್ಧನ್ ಯೋಜನೆಯಡಿ ಮಾಸಿಕ 3,000 ಪಿಂಚಣಿ ಪಡೆಯಿರಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಕರ್ಮ ಯೋಗಿ ಮಾನ್ಧನ್ ಯೋಜನೆಯನ್ನು ಘೋಷಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಕರ್ಮ ಯೋಗಿ ಮಾನ್ಧನ್ ಯೋಜನೆಯನ್ನು ಘೋಷಿಸಿದ್ದಾರೆ.

ಇದರ ಅಡಿಯಲ್ಲಿ ಅಸಂಘಟಿತ ವಲಯ ಮತ್ತು ಸಂಘಟಿತ ವಲಯದ ಸುಮಾರು 60 ಕೋಟಿ ಕಾರ್ಮಿಕರು 60 ವರ್ಷ ಮೀರಿದ ನಂತರ ತಿಂಗಳಿಗೆ ರೂ. 3,000 ಪಿಂಚಣಿ ಪಡೆಯಲಿದ್ದಾರೆ.
ಪ್ರಧಾನ ಮಂತ್ರಿ ಕರ್ಮ ಯೋಗಿ ಮಾನ್ಧನ್ ಯೋಜನೆಯಲ್ಲಿ 3 ಕೋಟಿ ಚಿಲ್ಲರೆ (ರಿಟೇಲ್) ವ್ಯಾಪಾರಿಗಳೂ ಒಳಗೊಳ್ಳಲಿದ್ದಾರೆ. ವಾರ್ಷಿಕವಾಗಿ ರೂ. 1.5 ಕೋಟಿವರೆಗೆ ಆದಾಯ ಇರುವ ವರ್ತಕರೂ ಕರ್ಮ ಯೋಗಿ ಮಾನ್ಧನ್ ಪಿಂಚಣಿ ಸೌಲಭ್ಯ ಪಡೆಯಬಹುದು. ಫಲಾನುಭವಿಗಳು ಕೇವಲ ಆಧಾರ್ ನಂಬರ್ ಮತ್ತು ಬ್ಯಾಂಕ್ ಖಾತೆಯ ಮೂಲಕ ಈ ಯೋಜನೆಯ ಫಲಾನುಭವ ಪಡೆಯಬಹುದು.
ಲೋಕಸಭಾ ಚುನಾವಣಾ ಪೂರ್ವದ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಅವರು ಇದೇ ಮಾದರಿಯ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಘೋಷಿಸಿದ್ದರು. ಇದರಡಿಯಲ್ಲಿ ಈಗಾಗಲೇ 30 ಲಕ್ಷ ಕಾರ್ಮಿಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆ ಕಡೆಗೆ (ಎನ್ಪಿಎಸ್) ಗ್ರಾಹಕರನ್ನು ಸೆಳೆಯಲು ವಿತ್ ಡ್ರಾವಲ್ ಮಿತಿಯನ್ನು ಶೇ. 40 ರಿಂದ ಶೇ. 60ಕ್ಕೆ ಹೆಚ್ಚಿಸಲಾಗಿದೆ.
ನಿನ್ನೆ ಬಜೆಟ್ ಮಂಡನೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಗಾಗಿ ರೂ. 900 ಕೋಟಿ ಅನುದಾನ ಇಡಲಾಗಿದೆ. ಈ ಯೋಜನೆ ಮೂಲಕ 14 ಕೋಟಿ ರೈತರಿಗೆ ವಾರ್ಷಿಕ ರೂ. 6,000 ಸಹಾಯಧನ ನೀಡಲಾಗುವುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications