ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಸರಕಾರಿ ನೌಕರರಿಗೆ ಸರಕಾರ ಶೇಕಡ 4 ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಈಗಿರುವ ಶೇಕಡ 42ರಿಂದ ಶೇಕಡ 46ಕ್ಕೆ ಏರಿಕೆಯಾಗಿದೆ.
ಈ ತುಟ್ಟಿಭತ್ಯೆ ಏರಿಕೆಯು ಜುಲೈ 1, 2023 ರಿಂದ ಜಾರಿಗೆ ಬರಲಿದೆ. ಹಣದುಬ್ಬರವನ್ನು ಎದುರಿಸಲು ಕೇಂದ್ರ ಸರ್ಕಾರವು ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಏರಿಕೆ ಮಾಡುತ್ತದೆ. ಇದನ್ನು ಸಾಮಾನ್ಯವಾಗಿ ಜನವರಿ ಮತ್ತು ಜುಲೈನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದರೆ, ಈ ಬಾರಿ ಡಿಎ ಹೆಚ್ಚಳವನ್ನು ತಡವಾಗಿ ಪ್ರಕಟಿಸಲಾಗಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಅನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ?
ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು (ಸಿಪಿಐ- ಐಡಬ್ಲ್ಯೂ) ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ನಿರ್ಧರಿಸಲು ಬಳಸಲಾಗುತ್ತದೆ. ಉದ್ಯೋಗಿಯ ಮೂಲ ವೇತನದ ಒಂದು ಭಾಗವಾಗಿ ಡಿಎ ಅನ್ನು ನಿರ್ಧರಿಸಲಾಗುತ್ತದೆ. ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಅನ್ನು ಲೆಕ್ಕಾಚಾರ ಮಾಡಲು ಹಿಂದಿನ 12 ತಿಂಗಳ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಎಐಸಿಪಿಐ) ಸರಾಸರಿಯನ್ನು ಲೆಕ್ಕಹಾಕುತ್ತದೆ. 115.76 ಅನ್ನು ಕಳೆಯಲಾಗುತ್ತದೆ ಮತ್ತು ನಂತರ ಶೇಕಡಾವಾರು ಪ್ರಮಾಣವನ್ನು ಸೇರಿಸಲಾಗುತ್ತದೆ.
ಶೇಕಡ 4 ಡಿಎ ಏರಿಕೆ ಬಳಿಕ ಸರ್ಕಾರಿ ನೌಕರರ ಸಂಬಳ ಎಷ್ಟಾಗುತ್ತದೆ?
ಉದಾಹರಣೆಗೆ, ಕೇಂದ್ರ ಸರ್ಕಾರದ ಮೂಲ ವೇತನ 36,500 ರೂಪಾಯಿ ಎಂದು ಭಾವಿಸೋಣ. ಶೇಕಡ 42 ರಷ್ಟು ಡಿಎಯೊಂದಿಗೆ ಉದ್ಯೋಗಿಗಳು 15,330 ರೂಪಾಯಿಯನ್ನು ಪಡೆಯುತ್ತಾರೆ. ಆದರೆ ಡಿಎ ಶೇಕಡ 46 ಆಗಿದ್ದರೆ, ತಿಂಗಳಿಗೆ 16,790 ರೂಪಾಯಿಗಳನ್ನು ಪಡೆಯಬಹುದಾಗಿದೆ.
ಈ ಹಿಂದೆ, ಅರೆಸೇನಾ ಪಡೆಗಳು ಸೇರಿದಂತೆ ಗ್ರೂಪ್ ಸಿ ಮತ್ತು ಗೆಜೆಟೆಡ್ ಅಲ್ಲದ ಗ್ರೂಪ್ ಬಿ ಮಟ್ಟದ ಅಧಿಕಾರಿಗಳಿಗೆ ದೀಪಾವಳಿ ಬೋನಸ್ಗಳನ್ನು ಸರ್ಕಾರ ಅನುಮೋದಿಸಿತ್ತು. 2022-2023 ಕ್ಕೆ, ಕೇಂದ್ರ ಸರ್ಕಾರಿ ನೌಕರರಿಗೆ ನಾನ್ ಪ್ರೊಡಕ್ಟಿವಿಟಿ ಬೋನಸ್ಗಳ (ಆಡ್ ಹಾಕ್ ಬೋನಸ್ಗಳು) ಲೆಕ್ಕಾಚಾರಕ್ಕಾಗಿ ಹಣಕಾಸು ಸಚಿವಾಲಯವು 7000 ರೂಪಾಯಿ ಮಿತಿಯನ್ನು ನಿಗದಿಪಡಿಸಿದೆ.
ನವರಾತ್ರಿಯ ಹಬ್ಬಕ್ಕೂ ಮುನ್ನ ನಡೆಯುವ ಕೊನೆಯ ಕ್ಯಾಬಿನೆಟ್ ಸಭೆಯು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 11, 2023 ರ ಬುಧವಾರದಂದು ನಿಗದಿಯಾಗಿದೆ. ಈ ಸಭೆಯ ಬಳಿಕ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಘೋಷಣೆಯನ್ನು ಮಾಡು ಭರವಸೆಯಿತ್ತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications