ಈ ವರ್ಷದ ಎರಡನೇ ತುಟ್ಟಿಭತ್ಯೆ ಪರಿಷ್ಕರಣೆಗಾಗಿ ಕಾಯಲಾಗುತ್ತಿದೆ. ಈ ನಡುವೆ ಕೇಂದ್ರ ಸರ್ಕಾರವು ತುಟ್ಟಿಭತ್ಯೆಯನ್ನು ಲೆಕ್ಕಾಚಾರ ಹಾಕಲಾಗುವ ಸೂತ್ರದಲ್ಲಿ ಬದಲಾವಣೆ ಮಾಡಿದೆ. ಈ ಬದಲಾವಣೆ ಏನು, ಇದು ಕೇಂದ್ರ ಸರ್ಕಾರಿ ನೌಕರರ ಸಂಬಳದ ಮೇಲೆ ಏನು ಪ್ರಭಾವ ಉಂಟು ಮಾಡುತ್ತದೆ ಎಂಬುವುದನ್ನು ನಾವು ಇಲ್ಲಿ ವಿವರಿಸಿದ್ದೇವೆ.
ಕೇಂದ್ರ ಸರ್ಕಾರಿ ನೌಕರರಿಗೆ ಇರುವ ಡಿಎ ಹಾಗೂ ಪಿಂಚಣಿದಾರರಿಗೆ ಇರುವ ಡಿಆರ್ ಅನ್ನು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪರಿಷ್ಕರಿಸಿದ ನಂತರ ಹೊಸ ಮೂಲ ವರ್ಷದೊಂದಿಗೆ ಲೆಕ್ಕ ಹಾಕಲಾಗುವುದಿಲ್ಲ ಎಂದು ವರದಿ ಉಲ್ಲೇಖ ಮಾಡಿದೆ. ಹಣದುಬ್ಬರವನ್ನು ಗಮನದಲ್ಲಿರಿಸಿಕೊಂಡು ಮೂಲ ವರ್ಷವನ್ನು ಸಮಯಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗುತ್ತದೆ.
ತುಟ್ಟಿಭತ್ಯೆಯನ್ನು ಲೆಕ್ಕಾಚಾರ ಹಾಕಲಾಗುವ ಸೂತ್ರದಲ್ಲಿ ವರ್ಷವನ್ನು ಬದಲಾವಣೆ ಮಾಡಿದಾಗ ಇದು ಕೇಂದ್ರ ಸರ್ಕಾರದ ಉದ್ಯೋಗಿಗಳ ವೇತನದ ಮೇಲೆ ಪರಿಣಾಮ ಉಂಟು ಮಾಡಲಿದೆ. ಅವರ ವೇತನ ಮಾದರಿಯ ಮೇಲೆಯೂ ಪರಿಣಾಮ ಉಂಟಾಗಲಿದೆ. ವೇತನದ ಮೇಲೆ ಏನು ಪರಿಣಾಮ ಉಂಟಾಗಲಿದೆ, ಡಿಎ ಲೆಕ್ಕಾಚಾರ ಸೂತ್ರದಲ್ಲಿ ಯಾವ ಬದಲಾವಣೆಯನ್ನು ಮಾಡಲಾಗಿದೆ ಎಂಬುವುದನ್ನು ತಿಳಿಯೋಣ ಮುಂದೆ ಓದಿ....

ಯಾಕಾಗಿ ಡಿಎ ಲೆಕ್ಕಾಚಾರ ಸೂತ್ರದಲ್ಲಿ ಬದಲಾವಣೆ?
ಡಿಎ ಲೆಕ್ಕಾಚಾರಕ್ಕೆ ಮೂಲ ವರ್ಷವನ್ನು ಕೇಂದ್ರ ಸಚಿವಾಲಯವು 2016ಕ್ಕೆ ಬದಲಾವಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರವು ಹೊಸ ವೇತನ ದರ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಳೆಯ ಸೂತ್ರದಲ್ಲಿ ಮೂಲ ವರ್ಷವು 1963-65 ಆಗಿತ್ತು. ಆದರೆ ಹೊಸ ಸೂತ್ರದಲ್ಲಿ ಮೂಲ ವರ್ಷವು 2016=100 ಆಗಿರಲಿದೆ.
ನ್ಯಾಷನಲ್ ಸ್ಟಾಟಿಸ್ಟಿಕಲ್ ಕಮಿಷನ್ (ಎನ್ಎಸ್ಇ) ಈ ಮೂಲ ವರ್ಷದಲ್ಲಿ ಬದಲಾವಣೆಯನ್ನು ಮಾಡಿದೆ. 1963-65ರಿಂದ 2016ಕ್ಕೆ ಬದಲಾವಣೆ ಮಾಡಲಾಗಿದೆ. ವೇತನ ದರ ಸೂಚ್ಯಂಕದ ದಕ್ಷತೆಯನ್ನು ಹೆಚ್ಚಿಸಲು ಈ ನಿರ್ಧಾರವನ್ನು ಮಾಡಲಾಗಿದೆ. ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್ಒ) ಶಿಫಾರಸಿನ ಮೇರೆಗೆ ಈ ಬದಲಾವಣೆಯನ್ನು ತರಲಾಗಿದೆ.
ಡಿಎ ಲೆಕ್ಕಾಚಾರದ ಹೊಸ ಸೂತ್ರ ಯಾವುದು?
7 ನೇ ವೇತನ ಆಯೋಗದ ನಿಯಮಗಳ ಪ್ರಕಾರ ಉದ್ಯೋಗಿಯ ಮೂಲ ವೇತನದ ಆಧಾರದಲ್ಲಿ ಡಿಎ ಮೊತ್ತವನ್ನು ಪ್ರಸ್ತುತ ದರದ ಅಂಶವಾಗಿ ಲೆಕ್ಕಹಾಕಲಾಗುತ್ತದೆ. ಪ್ರಸ್ತುತ ಶೇಕಡಾ 12 ರ ದರದ ಪ್ರಕಾರ, ಈ ಲೆಕ್ಕಾಚಾರವು ಈ ಕೆಳಗಿನಂತಿದೆ.
(ಮೂಲ ವೇತನ x 12)/ 100
(Basic Pay x 12)/ 100
ಡಿಎ ಶೇಕಡ=12 ತಿಂಗಳ ಸಿಪಿಐ ಸರಾಸರಿ (Consumer Price Index) - 115.76
ಇದರ ಉತ್ತರವನ್ನು 115.76ರಿಂದ ಭಾಗಾಕಾರ ಹಾಗೂ 100ರಿಂದ ಗುಣಾಕಾರ ಮಾಡಲಾಗುತ್ತದೆ.
ಈ ನಡುವೆ ಕೇಂದ್ರ ಸರ್ಕಾರಿ ನೌಕರರು ಶೇಕಡ 4ರಷ್ಟು ಡಿಎ ಹೆಚ್ಚಳ ನಿರೀಕ್ಷೆಯಲ್ಲಿ ಇದ್ದಾರೆ. ಇದರಿಂದಾಗಿ ಡಿಎ ಶೇಕಡ 38ಕ್ಕೆ ಏರಿಕೆಯಾಗಲಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications