ಹಲವಾರು ರಾಜ್ಯಗಳಲ್ಲಿ ಮಕ್ಕಳಿಗೆ ಆಧಾರ್ ಕಾರ್ಡ್ ರಿಜಿಸ್ಟ್ರೇಷನ್ ಅನ್ನು ಮಾಡಲಾಗುತ್ತಿದೆ. ಹಾಗೆಯೇ ಮಕ್ಕಳಿಗೆ ಬ್ಲ್ಯೂ ಆಧಾರ್ ಅನ್ನು ಕೂಡಾ ನೀಡಲಾಗುತ್ತದೆ. ಇದನ್ನು ಕಿಡ್ ಆಧಾರ್ ಎಂದು ಕೂಡಾ ಕರೆಯಲಾಗುತ್ತದೆ. ಆದರೆ ಈ ಒಂದು ರಾಜ್ಯದಲ್ಲಿ ಮಕ್ಕಳಿಗೆ ಆಧಾರ್ ಸೇವೆಯನ್ನು ಮನೆ ಬಾಗಿಲಿಗೆ ಬಂದು ನೀಡಲಾಗುತ್ತದೆ.
ಹೌದು, ಛತ್ತೀಸ್ಗಢ ಸರ್ಕಾರ ಈ ಸೇವೆಯನ್ನು ಇತ್ತೀಚೆಗೆ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಮಿತನ್ ಯೋಜನೆಯಡಿಯಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಈ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಈ ಹೊಸ ವ್ಯವಸ್ಥೆಯಲ್ಲಿ 5 ವರ್ಷದವರೆಗಿನ ಮಕ್ಕಳು ಮನೆಯಲ್ಲಿಯೇ ಆಧಾರ್ ಸೇವೆಯನ್ನು ಪಡೆಯಲು ಸಾಧ್ಯವಾಗಲಿದೆ. ಮನೆಯಲ್ಲಿಯೇ ಆಧಾರ್ ಕಾರ್ಡ್ಗಾಗಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಇದರಿಂದ ಹಲವಾರು ಕುಟುಂಬಗಳಿಗೆ ಸಹಾಯವಾಗಲಿದೆ. ಈ ಬಗ್ಗೆ ಇಲ್ಲಿದೆ ಅಧಿಕ ಮಾಹಿತಿ ಮುಂದೆ ಓದಿ...

ಮನೆ ಬಾಗಿಲಿಗೆ ಆಧಾರ್ ಸೇವೆಪಡೆಯುವುದು ಹೇಗೆ?
ಛತ್ತೀಸ್ಗಢದಲ್ಲಿ ಮನೆ ಬಾಗಿಲಿಗೆ ಆಧಾರ್ ಸೇವೆಯನ್ನು ಪಡೆಯಬೇಕಾದರೆ ಅಪಾಯಿಂಟ್ಮೆಂಟ್ ಮಾಡಿಕೊಳ್ಳುವುದು ಮುಖ್ಯವಾಗಿದೆ. ಈ ಬಗ್ಗೆ ಈ ಕೆಳಗೆ ಹಂತ ಹಂತವಾದ ವಿವರಣೆ ನೀಡಲಾಗಿದೆ.
* ಅಪಾಯಿಂಟ್ಮೆಂಟ್ಗಾಗಿ 14545 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಬೇಕಾಗುತ್ತದೆ.
* ನಿಮ್ಮ ಮನೆಗೆ ಮಿತನ್ ಯೋಜನೆಯ ಕಾರ್ಯಕರ್ತರು ಭೇಟಿ ನೀಡುತ್ತಾರೆ.
* 5 ವರ್ಷಕ್ಕಿಂತ ಕೆಳಗಿನ ಮಗುವಿಗೆ ಮನೆ ಬಾಗಿಲಿಗೆ ಬಂದು ಆಧಾರ್ ರಿಜಿಸ್ಟ್ರೇಷನ್ ಮಾಡುವ ಸಂದರ್ಭದಲ್ಲಿ ಪೋಷಕರ ಮಾಹಿತಿ ಅಗತ್ಯವಾಗಿದೆ. ಆಧಾರ್ ಕೇಂದ್ರದಲ್ಲಿಯಾದರೂ ಪೋಷಕರ ಮಾಹಿತಿ ಅಗತ್ಯ.
* ಪೋಷಕರ ಬಯೋಮೆಟ್ರಿಕ್ ಡೇಟಾ ಹಾಗೂ ಆಧಾರ್ ಸಂಖ್ಯೆಯನ್ನು ಮಕ್ಕಳ ಆಧಾರ್ಗೆ ನೀಡಲಾಗುತ್ತದೆ.
* ರೇಷನ್ ಕಾರ್ಡ್, ಸಿಜಿಎಸ್ಎಸ್/ರಾಜ್ಯ ಸರ್ಕಾರ ಕಾರ್ಡ್/ಇಸಿಎಚ್ಎಸ್/ ಇಎಸ್ಐಸಿ/ ಆರೋಗ್ಯ ಕಾರ್ಡ್, ಪೋಷಕರು ಯೋಧರಾದರೆ ಅದರ ಕಾರ್ಡ್, ಪಾಸ್ಪೋರ್ಟ್, ಜನನ ಪ್ರಮಾಣಪತ್ರ ಕಡ್ಡಾಯ
* ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಎಲ್ಲ ಪ್ರಕ್ರಿಯೆ ನಡೆದ ಬಳಿಕ ಕೆಲವೇ ದಿನಗಳಲ್ಲಿ ಆಧಾರ್ ಕಾರ್ಡ್ ಪೋಸ್ಟ್ ಮೂಲಕ ಮನೆ ಬಾಗಿಲಿಗೆ ತಲುಪಲಿದೆ.
ಪ್ರಸ್ತುತ ಛತ್ತೀಸ್ಗಢದ ಪ್ರಮುಖ 14 ಮುನ್ಸಿಪಾಲ್ ಕಾರ್ಪೋರೇಷನ್ಗಳಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗಿದೆ. ಪ್ರಸ್ತುತ ಯಾವುದೇ ಸರ್ಕಾರದ ಯೋಜನೆಯ ಪ್ರಯೋಜನ ಪಡೆಯಬೇಕಾದರೆ ಆಧಾರ್ ಕಾರ್ಡ್ ಮುಖ್ಯವಾಗಿದೆ. ಮಕ್ಕಳಿಗೂ ಕೂಡಾ ಆಧಾರ್ ಕಾರ್ಡ್ ಅಗತ್ಯವಾಗಿದೆ. ಆದ್ದರಿಂದಾಗಿ ಸರ್ಕಾರವು ಆಧಾರ್ ಸೇವೆಯನ್ನು ವಿಸ್ತಾರ ಮಾಡುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications