ಪ್ರಸ್ತುತ ದೇಶದಲ್ಲಿ ಬಹುತೇಕ ಕಾರ್ಯಗಳಿಗೆ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ ಕೇಂದ್ರ ಸರ್ಕಾರವು ಸಣ್ಣ ಉಳಿತಾಯ ಯೋಜನೆಗಳಲ್ಲಿ ನಾವು ಹೂಡಿಕೆ ಮಾಡಬೇಕಾದರೂ ಪ್ಯಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿದೆ. ಸುಕನ್ಯ ಸಮೃದ್ಧಿ ಯೋಜನೆ, ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್), ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ (ಎಸ್ಸಿಎಸ್ಎಸ್) ಈ ಎರಡು ದಾಖಲೆಗಳನ್ನು ಏಪ್ರಿಲ್ 1, 2023ರಿಂದ ಕೇಂದ್ರ ಸರ್ಕಾರವು ಕಡ್ಡಾಯಗೊಳಿಸಿದೆ. ಈ ಬಗ್ಗೆ ಮಾರ್ಚ್ 31ರಂದು ಅಧಿಕೃತ ಹೇಳಿಕೆಯನ್ನು ಕೇಂದ್ರ ಹಣಕಾಸು ಸಚಿವಾಲಯ ನೀಡಿದೆ.
ಸರ್ಕಾರದ ನೋಟಿಫಿಕೇಷನ್ ಪ್ರಕಾರ, ಯಾವುದೆ ಸರ್ಕಾರ ಬೆಂಬಲಿತ ಸಣ್ಣ ಉಳಿತಾಯ ಯೋಜನೆಗಳ ಚಂದಾದಾರಿಕೆ ಮಾಡುವಾಗ ಪ್ಯಾನ್ ಕಾರ್ಡ್ ಹಾಗಾ ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ. ಸೆಪ್ಟೆಂಬರ್ 30ಕ್ಕೂ ಮುನ್ನ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಬೇಕಾಗಿದೆ. ಈ ದಿನಾಂಕಕ್ಕೂ ಮುನ್ನ ಆಧಾರ್ ಕಾರ್ಡ್ ಸಲ್ಲಿಕೆ ಮಾಡಿಲ್ಲದಿದ್ದರೆ, ಆಧಾರ್ ಕಾರ್ಡ್ ಸಲ್ಲಿಕೆ ಮಾಡುವವರೆಗೂ ಅವರ ಸಣ್ಣ ಉಳಿತಾಯ ಖಾತೆಯನ್ನು ನಿರ್ಬಂಧಿಸಲಾಗುವುದು. ಈ ಬಗ್ಗೆ ಅಧಿಕ ಮಾಹಿತಿಯನ್ನು ನಾವು ಈ ಕೆಳಗೆ ನೀಡಿದ್ದೇವೆ ಮುಂದೆ ಓದಿ...

ಇದಲ್ಲದೆ, ನೀವು ಪಿಪಿಎಫ್, ಎಸ್ಎಸ್ವೈ, ಎನ್ಎಸ್ಸಿ (ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ), ಎಸ್ಸಿಎಸ್ಎಸ್ ಅಥವಾ ಆಧಾರ್ ಇಲ್ಲದೆ ಯಾವುದೇ ಇತರ ಸಣ್ಣ ಉಳಿತಾಯ ಖಾತೆಯನ್ನು ತೆರೆಯಲು ಬಯಸಿದರೆ ತೆರೆಯಬಹುದು. ಆದರೆ ಸಣ್ಣ ಉಳಿತಾಯ ಯೋಜನೆ ಹೂಡಿಕೆಯೊಂದಿಗೆ ಲಿಂಕ್ ಮಾಡಲು ನೀವು ಖಾತೆ ತೆರೆದ ಆರು ತಿಂಗಳೊಳಗೆ ಆಧಾರ್ ಸಂಖ್ಯೆಯನ್ನು ಒದಗಿಸಬೇಕು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ನೀವು ಈವರೆಗೂ ಆಧಾರ್ ಕಾರ್ಡ್ ಮಾಡಿಲ್ಲದಿದ್ದರೆ ಅಥವಾ ಯುಐಡಿಎಐನಿಂದ ಇನ್ನಷ್ಟೇ ಆಧಾರ್ ಕಾರ್ಡ ಲಭ್ಯವಾಗಬೇಕಾಗಿದ್ದರೆ, ನೀವು ಆಧಾರ್ ಎನ್ಲೋಟ್ಮೆಂಟ್ ಸಂಖ್ಯೆಯನ್ನು ನೀಡಿ ಖಾತೆ ತೆರೆಯಬಹುದು.
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯವು ಈ ಅಧಿಸೂಚನೆಯನ್ನು ನೀಡುವುದಕ್ಕೂ ಮುನ್ನ ಸರ್ಕಾರ ಬೆಂಬಲಿತ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿರಲಿಲ್ಲ. ಆಧಾರ್ ಕಾರ್ಡ್ ಸಲ್ಲಿಸದೆಯೇ ನೀವು ಸಣ್ಣ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾಗಿತ್ತು. ಆದರೆ ಈಗ ಅದು ಸಾಧ್ಯವಿಲ್ಲ. ಈಗಾಗಲೇ ಹೂಡಿಕೆ ಮಾಡಿರುವವರು ಆಧಾರ್ ಕಾರ್ಡ್ ಪ್ರತಿಯನ್ನು ಸೆಪ್ಟೆಂಬರ್ ಒಳಗಾಗಿ ಸಲ್ಲಿಸಬೇಕಾಗಿದೆ. ಆಧಾರ್ ಕಾರ್ಡ್ ಇಲ್ಲದಿದ್ದರೂ ಆಧಾರ್ ಎನ್ರೋಲ್ಮೆಂಟ್ ಸಂಖ್ಯೆಯನ್ನು ನೀಡಬೇಕಾಗುತ್ತದೆ.
ಈ ಬದಲಾವಣೆಯೂ ಕೆವೈಸಿ (know-your-customer) ಭಾಗವಾಗಿದೆ. ಈಗಾಗಲೇ ಸಣ್ಣ ಉಳಿತಾಯ ಖಾತೆಯನ್ನು ತೆರೆಯುವ ಸಂದರ್ಭದಲ್ಲಿ ಪ್ಯಾನ್ ಕಾರ್ಡ್ ಅನ್ನು ಸಲ್ಲಿಸಲಾಗಿರುತ್ತದೆ. ನೀವು ಖಾತೆ ತೆರಯುವಾಗ ಪ್ಯಾನ್ ಕಾರ್ಡ್ ಅನ್ನು ಸಲ್ಲಿಸದಿದ್ದರೆ ಪ್ಯಾನ್ ಕಾರ್ಡ್ ಅನ್ನು ಈ ಕೆಳಗೆ ನೀಡಿರುವ ಅಂಶವು ನಿಮ್ಮ ಖಾತೆಗೆ ಅನ್ವಯವಾದರೆ ಎರಡು ತಿಂಗಳ ಒಳಗಾಗಿ ಸಲ್ಲಿಸಬೇಕು ಎಂದು ಸರ್ಕಾರವು ಅಧಿಸೂಚನೆಯಲ್ಲಿ ಮಾಹಿತಿ ನೀಡಿದೆ. ಪ್ಯಾನ್ ಸಮಯಕ್ಕೆ ಸರಿಯಾಗಿ ಸಲ್ಲಿಸದಿದ್ದರೂ ಕೂಡಾ ಖಾತೆಯನ್ನು ಸೀಸ್ ಮಾಡಲಾಗುತ್ತದೆ. ಈ ಸಣ್ಣ ಉಳಿತಾಯ ಖಾತೆಗಳಿಗೆ ತೆರಿಗೆ ಪ್ರಯೋಜನ ಲಭ್ಯವಿದೆ.
1. ಖಾತೆಯಲ್ಲಿ ಯಾವುದೇ ಸಮಯದಲ್ಲಿ ಬ್ಯಾಲೆನ್ಸ್ ರೂ 50,000 ಮೀರಿದ್ದಲ್ಲಿ 2 ತಿಂಗಳಲ್ಲಿ ಪ್ಯಾನ್ ಕಾರ್ಡ್ ಸಲ್ಲಿಸಿ
2. ಯಾವುದೇ ಹಣಕಾಸು ವರ್ಷದಲ್ಲಿ ಖಾತೆಯಲ್ಲಿನ ಎಲ್ಲಾ ಕ್ರೆಡಿಟ್ಗಳ ಒಟ್ಟು ಮೊತ್ತವು ರೂ 1,00,000 ಮೀರಿದ್ದರೆ ಪ್ಯಾನ್ ಕಾರ್ಡ್ ಅನ್ನು ಸಲ್ಲಿಸಿ
3. ಖಾತೆಯಿಂದ ಒಂದು ತಿಂಗಳಲ್ಲಿ ಎಲ್ಲಾ ವಿತ್ಡ್ರಾ ಮತ್ತು ವರ್ಗಾವಣೆಗಳ ಒಟ್ಟು ಮೊತ್ತವು 10,000 ರೂಪಾಯಿ ಆಗಿದ್ದರೆ ಪ್ಯಾನ್ ಕಾರ್ಡ್ ಅನ್ನು ಸಲ್ಲಿಸಿ
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications