ಟೊಮೆಟೊ ದರವು ಈಗಾಗಲೇ ಗಗನಕ್ಕೆ ಏರಿದೆ. ದೇಶದ ಕೆಲವು ಪ್ರಮುಖ ಪ್ರದೇಶಗಳಲ್ಲಿ ಟೊಮೆಟೊ ದರವು 160 ರೂಪಾಯಿಗೂ ಅಧಿಕವಾಗಿದೆ. ಇನ್ನು ಕೆಲವೆಡೆ ಪ್ರತಿ ಕೆಜಿ ಟೊಮೆಟೊ ದರವು 100 ರೂಪಾಯಿಯಿಂದ 130 ರೂಪಾಯಿವರೆಗೆ ಇದೆ. ಈ ನಡುವೆ ಟೊಮೆಟೊ ಮಾತ್ರವಲ್ಲದೆ ಹಲವಾರು ತರಕಾರಿಗಳ ದರವು ಭಾರೀ ಪ್ರಮಾಣದಲ್ಲಿ ಜಿಗಿತ ಕಂಡಿದೆ. ಮುಖ್ಯವಾಗಿ ಶುಂಠಿ ಹಾಗೂ ಮೆಣಸಿನಕಾಯಿ ದರವು ಹೆಚ್ಚಳವಾಗಿದೆ.
ಬಿಸಿ ಅಲೆ, ಭಾರೀ ಮಳೆ ಹಾಗೂ ಪೂರೈಕೆ ತೊಂದರೆಯಿಂದಾಗಿ ದೇಶದಲ್ಲಿ ಹಲವಾರು ತರಕಾರಿಗಳ ಬೆಲೆಯು ಹೆಚ್ಚಳವಾಗುತ್ತಿದೆ. ಟೊಮೆಟೊ ಈಗ ಟ್ರೋಲ್ ಆಗುತ್ತಿರುವಾಗ ದೇಶದಲ್ಲಿ ಹೂಕೋಸು, ಶುಂಠಿ ಮತ್ತು ಹಸಿರು ಮೆಣಸಿನಕಾಯಿ ದರವು ಗ್ರಾಹಕರ ಬಜೆಟ್ ಮೇಲೆ ಪ್ರಭಾವ ಉಂಟು ಮಾಡಿದೆ. ನಿನ್ನೆ ದೆಹಲಿಯಲ್ಲಿ ಟೊಮೆಟೊ ಪ್ರತಿ ಕೆಜಿಗೆ ಸುಮಾರು 145 ರೂಪಾಯಿಗೆ ತಲುಪಿದೆ. ಒಂದು ಹೂಕೋಸು ಬೆಲೆ 80 ರೂಪಾಯಿ, ಶುಂಠಿ 380 ರೂಪಾಯಿ (100 ಗ್ರಾಂಗೆ 38 ರೂ.) ಹಸಿರು ಮೆಣಸಿನಕಾಯಿ ಕೆಜಿಗೆ 170 ರೂಪಾಯಿ 100 ಗ್ರಾಂಗೆ 17 ರೂ. ಆಗಿದೆ.

ಮೆಣಸಿನಕಾಯಿ ದರ ಏರಿಕೆಗೆ ಪ್ರಮುಖ ಕಾರಣ?
ಕಳೆದ ತಿಂಗಳಿನಲ್ಲಿ ಮೆಣಸಿನಕಾಯಿ ಬೆಲೆಯು ಪ್ರತಿ ಕೆಜಿಗೆ 60 ರೂಪಾಯಿ ಆಸುಪಾಸಿನಲ್ಲಿತ್ತು. ಈಗ ಶೇಕಡ 116ರಷ್ಟು ಬೆಲೆ ಏರಿಕೆಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಪೂರೈಕೆಗೆ ತೊಂದರೆ ಉಂಟಾಗಿದೆ ಆದ್ದರಿಂದಾಗಿ ಬೆಲೆಯು ಏರಿಕೆಯಾಗಿದೆ ಎಂದು ಮೆಣಸಿನಕಾಯಿ ಬೆಳೆಗಾರರು ಮತ್ತು ವ್ಯಾಪಾರಿಗಳು ಹೇಳಿದ್ದಾರೆ. ಎಲೆಸುರುಳಿ ರೋಗ ಕೂಡಾ ಒಂದು ಕಾರಣ ಎಂದು ವರದಿಗಳು ಹೇಳುತ್ತದೆ.
ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ಟೊಮೆಟೊ, ಬೆಳ್ಳುಳ್ಳಿ, ಶುಂಠಿ ಮತ್ತು ಹಸಿರು ಮೆಣಸಿನಕಾಯಿಗಳ ಬುಟ್ಟಿಯೊಂದಿಗೆ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ಈ ನಾಲ್ಕು ವಸ್ತುಗಳ ದರವೇ 1,070 ರೂಪಾಯಿ ಆಗಿದೆ. ಯಾರಿಗಾದರೂ ಬೆಲೆ ಬಾಳುವ ಉಡುಗೊರೆಯನ್ನು ನಾವು ನೀಡಲು ಬಯಸಿದರೆ ಇದು ಉತ್ತಮ ಉಡುಗೊರೆ ಎಂದು ಹೇಳಿಕೊಂಡಿದ್ದಾರೆ. ಇನ್ನು ಈ ನಡುವೆ ಹಣ, ಚಿನ್ನ ಹೀಗೆ ದುಬಾರಿ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರು ಈಗ ತರಕಾರಿ ಬೆಲೆ ದುಬಾರಿಯಾಗಿರುವ ನಿಟ್ಟಿನಲ್ಲಿ ಟೊಮೆಟೋ ಕದ್ದೊಯ್ದಿರುವ ಘಟನೆ ನಡೆದಿದೆ.
ಟೊಮೆಟೊ ದರವು ತೀರಾ ದುಬಾರಿಯಾಗಲು ಪ್ರಮುಖ ಕಾರಣ ನಮಗೆ ಎರಡು ತಿಂಗಳ ಅವಧಿಯಲ್ಲಿ ನಡೆದ ವಿದ್ಯಮಾನವಾಗಿದೆ. ಏಪ್ರಿಲ್ ಮೇ ತಿಂಗಳಿನಲ್ಲಿ ಮಾರುಕಟ್ಟೆಯಲ್ಲಿ ಟೊಮೆಟೊ ದರವು ಭಾರೀ ಇಳಿಕೆಯಾಗಿದೆ. ಇದರಿಂದಾಗಿ ರೈತರುಗಳು ಸಿಟ್ಟಿನಲ್ಲಿ ಬೆಳೆಯನ್ನೇ ನಾಶ ಮಾಡಿದ್ದಾರೆ. ಇನ್ನು ಮಾರ್ಚ್ ಮತ್ತು ಏಪ್ರಿಲ್ನಲ್ಲಿ ಕಾಣಿಸಿಕೊಂಡ ಅಸಾಮಾನ್ಯ ಶಾಖದಿಂದಾಗಿ ಕೀಟದ ದಾಳಿಗಳು ಹೆಚ್ಚಳವಾಗಿ ಬೆಳೆ ನಾಶವಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications