ಆತ್ಮನಿರ್ಭರ್ ಭಾರತ್ ರೋಜ್ಗಾರ್ ಯೋಜನೆ (ABRY) ಅಡಿಯಲ್ಲಿ ನೋಂದಣಿ ಮಾಡಿಕೊಳ್ಳುವ ಅಂತಿಮ ದಿನಾಂಕವನ್ನು ಮಾರ್ಚ್ 31, 2022ರ ವರೆಗೆ ವಿಸ್ತರಣೆ ಮಾಡಲಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ತನ್ನ ಅಧಿಕೃತ ಟ್ವಿಟ್ಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ.
ಆತ್ಮನಿರ್ಭರ್ ಭಾರತ್ ರೋಜ್ಗಾರ್ ಯೋಜನೆ (ಎಬಿಆರ್ವೈ) ಅಡಿಯಲ್ಲಿ ನೋಂದಣಿ ದಿನಾಂಕವನ್ನು ಮಾರ್ಚ್ 31, 2022 ರವರೆಗೆ ವಿಸ್ತರಿಸುವುದಾಗಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಘೋಷಣೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಇಪಿಎಫ್ಒ "#ABRY ಅಡಿಯಲ್ಲಿ ನೋಂದಣಿ ಸೌಲಭ್ಯವನ್ನು 31.03.2022 ರವರೆಗೆ ವಿಸ್ತರಿಸಲಾಗಿದೆ," ಎಂದು ಹೇಳಿದೆ.
ಈ ಯೋಜನೆಯನ್ನು ಉದ್ಯೋಗದಾತರನ್ನು ಪ್ರೋತ್ಸಾಹಿಸುವ, ಬೆಂಬಲಿಸುವ ನಿಟ್ಟಿನಲ್ಲಿ, ಅಧಿಕ ಜನರನ್ನು ನೇಮಕ ಮಾಡಿಕೊಳ್ಳಲು ಪ್ರೋತ್ಸಾಹ ಮಾಡುವ ನಿಟ್ಟಿನಲ್ಲಿ ಪ್ರಾರಂಭ ಮಾಡಲಾಗಿದೆ. ವಿಶೇಷವಾಗಿ ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕದ ಸಂದರ್ಭದಲ್ಲಿ ಉದ್ಯೋಗದಾತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನೆಯು ಹೆಚ್ಚು ಜನಪ್ರಿಯವಾಗಿದೆ.

ಆತ್ಮನಿರ್ಭರ್ ಭಾರತ್ ರೋಜ್ಗಾರ್ ಯೋಜನೆ ಬಗ್ಗೆ ಮಾಹಿತಿ
ಉದ್ಯೋಗದಾತರಿಗೆ ಹಣಕಾಸಿನ ನೆರವು ನೀಡಲು 2020 ರಲ್ಲಿ ಯೋಜನೆಯನ್ನು ಪ್ರಾರಂಭಿಸಲಾಯಿತು. ಈ ಯೋಜನೆಯು ಉದ್ಯೋಗದಾತರನ್ನು ಬೆಂಬಲಿಸುತ್ತದೆ ಮತ್ತು ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಳ್ಳಲು ಉದ್ಯೋಗದಾತರಿಗೆ ಪ್ರೋತ್ಸಾಹ ನೀಡುತ್ತದೆ. 15,000 ರೂ.ಗಿಂತ ಕಡಿಮೆ ಅಥವಾ ಮಾಸಿಕ ವೇತನದೊಂದಿಗೆ ಸಂಘಟಿತ ವಲಯದಲ್ಲಿ ಹೆಚ್ಚಿನ ಜನರನ್ನು ನೇಮಿಸಿಕೊಳ್ಳಲು ಈ ಯೋಜನೆಯು ಉದ್ಯೋಗದಾತರನ್ನು ಉತ್ತೇಜಿಸುತ್ತದೆ. ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಹಲವಾರು ಮಂದಿ ಉದ್ಯೋಗ ಕಳೆದುಕೊಂಡಿದ್ದು ಈ ಜನರನ್ನು ನೇಮಿಸಿಕೊಳ್ಳಲು ಈ ಯೋಜನೆ ಪ್ರೋತ್ಸಾಹ ನೀಡುತ್ತದೆ. ಕೇಂದ್ರ ಸಚಿವ ಸಂಪುಟವು ಇದರ ನೋಂದಣಿಯ ಕೊನೆಯ ದಿನಾಂಕವನ್ನು ಜೂನ್ 30, 2021 ರಿಂದ ಮಾರ್ಚ್ 31, 2022 ರವರೆಗೆ ಒಂಬತ್ತು ತಿಂಗಳ ಅವಧಿಗೆ ವಿಸ್ತರಿಸಿದೆ.
EPFO ನೊಂದಿಗೆ ನೋಂದಾಯಿಸಲಾದ ಅರ್ಹ ಸಂಸ್ಥೆಗಳ ಉದ್ಯೋಗದಾತರು ಮತ್ತು ಹೊಸ ಉದ್ಯೋಗಿಗಳು ಈ ಪ್ರೋತ್ಸಾಹವನ್ನು ಪಡೆಯುತ್ತಾರೆ. ಹೊಸ ಉದ್ಯೋಗಿಗಳು ನೋಂದಣಿ ದಿನಾಂಕದಿಂದ ಎರಡು ವರ್ಷಗಳವರೆಗೆ ಪ್ರೋತ್ಸಾಹವನ್ನು ಪಡೆಯುತ್ತಾರೆ. ಪಾವತಿಯ ರೂಪದಲ್ಲಿ ಪ್ರೋತ್ಸಾಹವನ್ನು ನೀಡಲಾಗುತ್ತದೆ. ನಿಗದಿತ ಕನಿಷ್ಠ ಸಂಖ್ಯೆಯ ಹೊಸ ಉದ್ಯೋಗಿಗಳನ್ನು ಸೇರಿಸಿದರೆ ಪ್ರೋತ್ಸಾಹ ಪಡೆಯಲು ಸಂಸ್ಥೆಯು ಅರ್ಹರಾಗಿರುತ್ತದೆ. ರೂ. 15000 ಕ್ಕಿಂತ ಕಡಿಮೆ ಮಾಸಿಕ ವೇತನದೊಂದಿಗೆ ಸೇರುವ ಹೊಸ ಉದ್ಯೋಗಿಗಳು ನೋಂದಣಿ ದಿನಾಂಕದಿಂದ 24 ತಿಂಗಳ ವೇತನವರೆಗೆ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ABRY ಯೋಜನೆ ABRY ಅಡಿಯಲ್ಲಿ, 1,000 ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಉದ್ಯೋಗಿಗಳು ಮತ್ತು ಉದ್ಯೋಗದಾತರ ಪಾಲು, ಅಂದರೆ ವೇತನದ ಶೇ 24ರಷ್ಟು (ತಲಾ ಶೇ 12ರಷ್ಟು ವೇತನ) ಸರ್ಕಾರ ಪಾವತಿಸುತ್ತದೆ. ಒಂದು ವೇಳೆ ಸಾವಿರಕ್ಕೂ ಅಧಿಕ ಉದ್ಯೋಗಿಗಳು ಇದ್ದರೆ ಶೇಕಡ 12ರಷ್ಟು ನೌಕರರ ಕೊಡುಗೆಯನ್ನು ಸರ್ಕಾರವು ಪಾವತಿಸುತ್ತಿದೆ ಎಂದು ಸದನಕ್ಕೆ ತಿಳಿಸಲಾಗಿತ್ತು. 4, ಡಿಸೆಂಬರ್ 2021ರಂತೆ 39.73 ಲಕ್ಷ ಹೊಸ ಉದ್ಯೋಗಿಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಲಾಗಿದೆ. ಇನ್ನು 2612.10 ಕೋಟಿ ರೂಪಾಯಿ ಪ್ರಯೋಜನಗಳನ್ನು ಅವರ ಖಾತೆಗಳಿಗೆ ಮುಂಗಡವಾಗಿ ಜಮೆ ಮಾಡಲಾಗಿದೆ.
ವಿಸ್ತರಣೆ ಬಗ್ಗೆ ಹಣಕಾಸು ಸಚಿವೆ ಮಾಹಿತಿ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ 'ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆ' ನಿರ್ಮಾಣಕ್ಕಾಗಿ ಈ ಹಿಂದಿನ ಯೋಜನೆಯನ್ನು 2022ರ ಮಾರ್ಚ್ 31ರವರೆಗೂ ವಿಸ್ತರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications