ಬ್ಯಾಂಕ್ ಯೂನಿಯನ್ಸ್ ಆಂಡ್ ಅಸೋಸಿಯೇಷನ್ಸ್ ಮತ್ತು ಇಂಡಿಯನ್ ಬ್ಯಾಂಕ್ಗಳ ನಡುವಿನ 12 ನೇ ದ್ವಿಪಕ್ಷೀಯ ಮಾತುಕತೆಯಂತೆ ಸಾರ್ವಜನಿಕ ವಲಯದ ಬ್ಯಾಂಕ್ಗಳ ಬ್ಯಾಂಕ್ ಉದ್ಯೋಗಿಗಳು ಶೇಕಡ 15 ರಿಂದ ಶೇಕಡ 20 ರಷ್ಟು ವೇತನ ಹೆಚ್ಚಳ ಪಡೆಯುವ ನಿರೀಕ್ಷೆಯಿದೆ. ಡಿಸೆಂಬರ್ ಮಧ್ಯದ ವೇಳೆಗೆ ವಾರದಲ್ಲಿ ಐದು ದಿನಗಳು ಮಾತ್ರ ಕೆಲಸವು ಜಾರಿಗೆ ಬರುವ ನಿರೀಕ್ಷೆಯಿದೆ.
ಈ ಬಗ್ಗೆಗಿನ ಮಾತುಕತೆ ಕೊನೆಯ ಹಂತವನ್ನು ತಲುಪಿದೆ ಎಂದು ಫೈನಾನ್ಶಿಯಲ್ ಎಕ್ಸ್ಪ್ರೆಸ್ ವರದಿಯು ನಾಲ್ಕು ಜನರನ್ನು ಉಲ್ಲೇಖಿಸಿ ಹೇಳಿದೆ. "ವೇತನ ಹೆಚ್ಚಳಕ್ಕಾಗಿ ನಡೆದ ಮಾತುಕತೆಗಳ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ಶೇಕಡ 15 ರಷ್ಟು ವೇತನ ಪಡೆಯದ ಬೇಡಿಕೆಯಿದೆ. ವೇತನ ಹೆಚ್ಚಳವು ಶೇಕಡ 15 ರಿಂದ ಶೇಕಡ 20 ರ ನಡುವೆ ಆಗಲಿದೆ," ಎಂದು ವರದಿ ಹೇಳಿದೆ.

ಐದು ದಿನಗಳ ಕೆಲಸದ ವಾರದ ಘೋಷಣೆಯು ವೇತನ ಹೆಚ್ಚಳದ ಅಧಿಸೂಚನೆಯೊಂದಿಗೆ ಅಥವಾ ಶೀಘ್ರದಲ್ಲೇ ಸರ್ಕಾರ ಅಥವಾ ಐಬಿಎ ಮೂಲಕ ಮಾಡಲಾಗುತ್ತದೆ ಎಂದು ಕೂಡಾ ವರದಿ ಉಲ್ಲೇಖಿಸಿದೆ. ಸಾರ್ವಜನಿಕ ವಲಯದ ಬ್ಯಾಂಕ್ ಉದ್ಯೋಗಿಗಳಿಗೆ ಪ್ರಸ್ತುತ ವೇತನ ಒಪ್ಪಂದವು ನವೆಂಬರ್ 1, 2022 ರಂದು ಕೊನೆಗೊಂಡಿದೆ.
ಅಂದಿನಿಂದ ಐಬಿಎ ಮತ್ತು ಬ್ಯಾಂಕ್ ಉದ್ಯೋಗಿಗಳನ್ನು ಪ್ರತಿನಿಧಿಸುವ ಒಕ್ಕೂಟಗಳು ಹೊಸ ವೇತನ ಒಪ್ಪಂದದ ಮಾತುಕತೆ ನಡೆಸುತ್ತಿವೆ. ಈ ನಡುವೆ ಹಣಕಾಸು ಸಚಿವಾಲಯದ ಮೂಲವನ್ನು ಉಲ್ಲೇಖಿಸಿ ಆದ ವರದಿ ಪ್ರಕಾರ ವೇತನದಲ್ಲಿನ ಪರಿಷ್ಕರಣೆ ಮತ್ತು ಕೆಲಸದ ದಿನಗಳಲ್ಲಿ ಬದಲಾವಣೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ಗಳಿಗೂ ಅನ್ವಯಿಸುತ್ತದೆ.
ಇದಕ್ಕೂ ಮೊದಲು, ಜುಲೈ 2020 ರಲ್ಲಿ, 800,000 ಕ್ಕೂ ಹೆಚ್ಚು ಬ್ಯಾಂಕ್ ಉದ್ಯೋಗಿಗಳು ತಮ್ಮ ಸಂಬಳದಲ್ಲಿ ಶೇಕಡ 15 ರಷ್ಟು ಹೆಚ್ಚಳವನ್ನು ಪಡೆದಿದ್ದಾರೆ. ಐಬಿಎ ಮತ್ತು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಮೂರು ವರ್ಷಗಳ ವಿವಾದಾತ್ಮಕ ವೇತನ ಪರಿಷ್ಕರಣೆ ಸಮಸ್ಯೆಯನ್ನು ಪರಿಹರಿಸಲು ಒಪ್ಪಂದಕ್ಕೆ ಸಹಿ ಹಾಕಿದೆ.
ಐಬಿಎ ಮತ್ತು ಬ್ಯಾಂಕ್ ಯೂನಿಯನ್ಗಳು ಶೀಘ್ರದಲ್ಲೇ ಅಂತಿಮ ಸಭೆಯನ್ನು ನಡೆಸಲಿದೆ. ಅಲ್ಲಿ ಎರಡು ಕಡೆಯವರು ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ ಎಂದು ಸಂಧಾನ ಪ್ರಕ್ರಿಯೆಯ ಭಾಗವಾಗಿರುವವರ ಹೇಳಿಕೆಯನ್ನು ವರದಿ ಉಲ್ಲೇಖಿಸಿದೆ. ನಂತರ ಅದನ್ನು ಕೊನೆಯ ಅನುಮೋದನೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ.
"ಸುಮಾರು ಶೇಕಡ 15 ರಷ್ಟು ವೇತನವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಪಿಎಸ್ಯು ಬ್ಯಾಂಕ್ಗಳ ಬ್ಯಾಲೆನ್ಸ್ ಶೀಟ್ಗಳನಮೇಲೆ ಪ್ರಭಾವ ಬೀರುವ ಕಾರಣದಿಂದಾಗಿ ನಾವು ಈ ನಿರ್ಧಾರದ ಬಗ್ಗೆ ಗಂಭೀರವಾಗಿ ಮಾತುಕತೆ ನಡೆಸುತ್ತಾ ಬರುತ್ತಿದ್ದೇವೆ," ಎಂದು ವರದಿ ಹೇಳಿದೆ. ಹಣಕಾಸು ಸಚಿವಾಲಯವು ಆರಂಭದಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳು ಡಿಸೆಂಬರ್ 1 ರೊಳಗೆ ಮಾತುಕತೆಗಳನ್ನು ಮುಕ್ತಾಯಗೊಳಿಸುವಂತೆ ಕೇಳಿಕೊಂಡಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications