ಬ್ಯಾಂಕುಗಳ ಖಾಸಗೀಕರಣವನ್ನು ವಿರೋಧ ಮಾಡಿ ಡಿಸೆಂಬರ್ 16-17 ಬ್ಯಾಂಕ್ಗಳ ಸಂಘವು ಮುಷ್ಕರವನ್ನು ನಡೆಸಲಿದೆ. ಯುನೈಟೆಡ್ ಫಾರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಉ) ಈ ಮುಷ್ಕರಕ್ಕೆ ಕರೆಯನ್ನು ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ), ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಆರ್ಬಿಎಲ್ ಬ್ಯಾಂಕ್ ಈಗಾಗಲೇ ಈ ಮುಷ್ಕರದ ದಿನದಂದು ತಮ್ಮ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್, "ನಮ್ಮ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಸಾಮಾನ್ಯವಾಗಿ ಸೇವೆ ನಡೆಸುವ ನಿಟ್ಟಿನಲ್ಲಿ ನಾವು ಎಲ್ಲಾ ಕ್ರಮವನ್ನು ಕೈಗೊಂಡಿದ್ದೇವೆ. ಆದರೆ ಮುಷ್ಕರದಿಂದಾಗಿ ನಮ್ಮ ಬ್ಯಾಂಕಿನ ಸೇವೆಯಲ್ಲಿ ಕೊಂಚ ವ್ಯತ್ಯಾಸ ಉಂಟಾಗಲಿದೆ," ಎಂದು ಹೇಳಿದೆ.
ಇನ್ನು ಈ ಮುಷ್ಕರದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, "ಮುಷ್ಕರದ ಹಿನ್ನೆಲೆಯಿಂದಾಗಿ ಎಲ್ಲಾ ಕ್ರಮವನ್ನು ಕೈಗೊಳ್ಳಲಾಗಿದೆ. ಎಲ್ಲಾ ಶಾಖೆ, ಕಚೇರಿಯಲ್ಲಿ ಸಾಮಾನ್ಯವಾಗಿ ಕಾರ್ಯ ನಿರ್ವಹಣೆ ನಡೆಯುವಂತೆ ನಾವು ಕ್ರಮವನ್ನು ಕೈಗೊಂಡಿದ್ದೇವೆ. ಆದರೆ ಮುಷ್ಕರದ ಸಂದರ್ಭದಲ್ಲಿ ಬ್ರಾಂಚ್ ಹಾಗೂ ಕಚೇರಿಗಳ ಸೇವೆಯಲ್ಲಿ ಕೊಂಚ ವ್ಯತ್ಯಯ ಉಂಟಾಗಬಹುದು," ಎಂದು ಉಲ್ಲೇಖಿಸಿದೆ.
ಆರ್ಬಿಎಲ್ ಬ್ಯಾಂಕ್ ಕೂಡಾ ಈ ಬಗ್ಗೆ ಹೇಳಿಕೆ ನೀಡಿದೆ. ಇದು ಬ್ಯಾಂಕಿಗೆ ಸಂಬಂಧಿಸಿದ ವಿಷಯವಾದ ಕಾರಣದಿಂದಾಗಿ ನಮ್ಮ ಉದ್ಯೋಗಿಗಳು ಮುಷ್ಕರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ, ಇದರಿಂದಾಗಿ ಸೇವೆಯಲ್ಲಿ ವ್ಯತ್ಯಯ ಆಗಬಹುದು ಎಂದು ಆರ್ಬಿಎಲ್ ಬ್ಯಾಂಕ್ ಹೇಳಿದೆ. "ಮುಷ್ಕರದ ಸಂದರ್ಭದಲ್ಲಿ ನಮ್ಮ ಕಚೇರಿ ಹಾಗೂ ಶಾಖೆಯಲ್ಲಿ ಸಾಮಾನ್ಯವಾಗಿ ಸೇವೆ ನೀಡುವ ನಿಟ್ಟಿನಲ್ಲಿ ನಾವು ಅಗತ್ಯ ಕ್ರಮವನ್ನು ಕೈಗೊಂಡಿದ್ದೇವೆ. ಆದರೆ ನಮ್ಮ ಕೆಲವು ಶಾಖೆಗಳ ಮೇಲೆ ಬ್ಯಾಂಕ್ ಮುಷ್ಕರದ ಪ್ರಭಾವ ಬೀರಬಹುದು," ಎಂದು ಆರ್ಬಿಎಲ್ ಬ್ಯಾಂಕ್ ತಿಳಿಸಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಏನು ಹೇಳುತ್ತದೆ?
ಎರಡು ದಿನಗಳ ಬ್ಯಾಂಕ್ ಸಂಘಟನೆಗಳ ಮುಷ್ಕರದಿಂದಾಗಿ ನಮ್ಮ ಸೇವೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ ಎಂದು ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹೇಳಿತ್ತು. ಹಾಗೆಯೇ ಸಾಮಾನ್ಯವಾಗಿ ಸೇವೆಯು ಮುಂದುವರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ನಾವು ಕೈಗೊಳ್ಳುತ್ತೇವೆ ಎಂದು ಕೂಡಾ ಎಸ್ಬಿಐ ಹೇಳಿಕೆ ನೀಡಿತ್ತು.
ಬ್ಯಾಂಕುಗಳ ಖಾಸಗೀಕರಣವನ್ನು ವಿರೋಧ ಮಾಡಿ ಬ್ಯಾಂಕುಗಳು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಸರ್ಕಾರವು ಬ್ಯಾಂಕ್ಗಳ ಖಾಸಗೀಕರಣ ಮಾಡಲಾಗುವುದು ಎಂದು ತಿಳಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ, "ಬ್ಯಾಂಕುಗಳ ಖಾಸಗೀಕರಣವು ಸಾರ್ವಜನಿಕ ವಲಯಕ್ಕೆ ದೊಡ್ಡ ಪರಿಣಾಮವನ್ನು ಬೀರಲಿದೆ. ಮುಖ್ಯವಾಗಿ ಗ್ರಾಮೀಣ ವಲಯದ ಆರ್ಥಿಕತೆಗೆ ಪೆಟ್ಟು ಬೀಳಲಿದೆ," ಎಂದು ಹೇಳಿದ್ದಾರೆ.
ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ
ಈ ಎರಡು ದಿನ ಮಾತ್ರವಲ್ಲದೇ ಈ ವಾರದಲ್ಲಿ ಮತ್ತೆ ಎರಡು ದಿನಗಳ ಕಾಲ ಬ್ಯಾಂಕ್ಗಳು ಬಂದ್ ಆಗುವ ಸಾಧ್ಯತೆ ಇದೆ. ಹಾಗಾಗಿ ಯಾವುದೇ ಅಗತ್ಯ ಬ್ಯಾಂಕ್ ವಹಿವಾಟು ಇದ್ದರೆ ಮುಂದಿನ ವಾರಕ್ಕೂ ಮುನ್ನವೇ ಅಥವಾ ಮುಂದಿನ ವಾರದ ಆರಂಭದಲ್ಲೇ ಮುಗಿಸಿಬಿಡಿ. ಈ ಸಮಯದಲ್ಲಿ ಎಲ್ಲಾ ಬ್ಯಾಂಕುಗಳ ಆನ್ಲೈನ್ ವಹಿವಾಟು ಅಥವಾ ಮೊಬೈಲ್ ವಹಿವಾಟು ಎಂದಿನಂತೆಯೇ ನಡೆಯಲಿದೆ. ಆದರೆ ಬ್ಯಾಂಕುಗಳಿಗೆ ಹೋಗಿಯೇ ಮಾಡಬೇಕಾದ ಕಾರ್ಯಗಳು ಇದ್ದಲ್ಲಿ ಜನರು ಇಂದು ಅಥವಾ ಮುಂದಿನ ವಾರದ ಆರಂಭದಲ್ಲೇ ಮುಗಿಸಿಬಿಡಿ.
ಡಿಸೆಂಬರ್ 16-17 ಬ್ಯಾಂಕ್ ಖಾಸಗೀಕರಣದ ವಿರುದ್ಧ ಬ್ಯಾಂಕ್ ಯೂನಿಯನ್ ಮುಷ್ಕರ, ಡಿಸೆಂಬರ್ 18 ರಂದು ಯು ಸೊಸೊ ಥಾಮ್ ಪುಣ್ಯ ಸ್ಮರಣೆ/ಗುರುಘಿಸಿದಾಸ್ ಜಯಂತಿ ಹಿನ್ನೆಲೆ ಕೆಲವೆಡೆ ಬ್ಯಾಂಕ್ ಸೇವೆ ಇರಲ್ಲ. ಡಿಸೆಂಬರ್ 19 ರಂದು ಭಾನುವಾರವಾದ ಹಿನ್ನೆಲೆ ದೇಶಾದಾದ್ಯಂತ ಬ್ಯಾಂಕ್ ಸೇವೆ ಇರುವುದಿಲ್ಲ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications