ನೀವು ಬ್ಯಾಂಕ್ ಕಚೇರಿಗೆ ಹೋಗಿ ಯಾವುದೇ ವಹಿವಾಟು ನಡೆಸಬೇಕಾಗಿದೆಯೇ? ಅದಕ್ಕೂ ಮುಂಚೆ ಯಾವ ದಿನ ಬ್ಯಾಂಕ್ ಸೇವೆ ಇರಲಿದೆ, ಇರುವುದಿಲ್ಲ ಎಂದು ತಿಳಿಯುವುದು ಉತ್ತಮ. ಯಾಕೆಂದರೆ ಈ ತಿಂಗಳಲ್ಲಿ ಈಗಾಗಲೇ ತಿಳಿಸಲಾಗಿರುವ, ಆರ್ಬಿಐ ಪ್ರಕಟಿಸಿರುವ ರಜಾದಿನಗಳನ್ನು ಹೊರತುಪಡಿಸಿ ಹೆಚ್ಚಿಗೆ ಎರಡು ದಿನ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬ್ಯಾಂಕ್ ನೌಕರರ ಸಂಘವಾದ ಯುನೈಟೆಡ್ ಫಾರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ರಾಷ್ಟ್ರವ್ಯಾಪ್ತಿಯಾಗಿ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರವನ್ನು ಘೋಷಿಸಿದೆ. ಇದರಿಂದಾಗಿ ಜನವರಿ 30 ಮತ್ತು ಜನವರಿ 31ರಂದು ಬ್ಯಾಂಕ್ಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಪ್ರಮುಖವಾಗಿ 11ನೇ ವೇತನ ಒಪ್ಪಂದಕ್ಕೆ ಸಂಬಂಧಿಸಿ ಈ ಮುಷ್ಕರವನ್ನು ಮಾಡಲಾಗುತ್ತಿದೆ.
ಒಟ್ಟು ಒಂಬತ್ತು ಬ್ಯಾಂಕ್ಗಳ ಬ್ಯಾಂಕ್ಗಳ ಒಕ್ಕೂಟವಾದ ಯುಎಫ್ಬಿಯು ಈ ನಿರ್ಧಾರವನ್ನು ಕೈಗೊಂಡಿದೆ. ಈ ಹಿಂದಿನ ವಾರ ಮುಂಬೈನಲ್ಲಿ ಸಭೆಯನ್ನು ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆದರೆ ಯಾವೆಲ್ಲ ಕಾರಣಕ್ಕಾಗಿ ಈ ಮುಷ್ಕರವನ್ನು ಮಾಡಲಾಗುತ್ತಿದೆ, ಎಷ್ಟು ದಿನ ಬ್ಯಾಂಕ್ ಬಂದ್ ಆಗಿರುತ್ತದೆ, ತಿಳಿಯೋಣ ಮುಂದೆ ಓದಿ.....

ಯಾವೆಲ್ಲ ಕಾರಣಕ್ಕಾಗಿ ಬ್ಯಾಂಕ್ ಮುಷ್ಕರ ನಡೆಯುತ್ತಿದೆ?
ಪ್ರಮುಖವಾಗಿ ವಾರದಲ್ಲಿ 5 ದಿನಗಳ ಕಾಲ ಬ್ಯಾಂಕ್ ರಜೆ ಇರಬೇಕು ಎಂಬುವುದು ಬೇಡಿಕೆಯಾಗಿದೆ. ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಬೇಕು. ಹಳೆಯ ಪಿಂಚಣಿ ಯೋಜನೆ ಪರಿಷ್ಕರಣೆ ಸೇರಿದಂತೆ ಹಲವಾರು ಬೇಡಿಕೆಗಳನ್ನು ಬ್ಯಾಂಕ್ ಯೂನಿಯನ್ ಹೊಂದಿದೆ.
ಈ ಹಿಂದೆ ನವೆಂಬರ್ನಲ್ಲಿಯೂ ಬ್ಯಾಂಕ್ ನೌಕರರ ಮೇಲೆ ನಡೆಯುವ ದಾಳಿಯ ವಿರುದ್ಧ ನಡೆಸಲಾಗಿತ್ತು. ಅದಕ್ಕೂ ಮೊದಲು ಬ್ಯಾಂಕ್ ಕೆಲಸದ ದಿನ ಇಳಿಕೆಯ ಬೇಡಿಕೆಯನ್ನು ಮುಂದಿಡಲಾಗಿತ್ತು.
ಬ್ಯಾಂಕ್ಗಳಲ್ಲಿ ವಾರದಲ್ಲಿ 5 ದಿನಗಳ ಕೆಲಸದ ಅವಧಿಯನ್ನು ಜಾರಿಗೆ ತರಬೇಕು ಎಂದು ಈ ಹಿಂದೆಯೇ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಒತ್ತಾಯಿಸಿದೆ. ಬ್ಯಾಂಕ್ಗಳು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬೇಕು. ಉಳಿದ ದಿನಗಳು ರಜಾ ದಿನವಾಗಿರಬೇಕು ಎಂಬ ಬೇಡಿಕೆ ವ್ಯಕ್ತಪಡಿಸಿದ್ದಾರೆ. ಖಾಸಗಿ ವಲಯದ ಬಹುತೇಕ ದೊಡ್ಡ ಕಂಪನಿಗಳಲ್ಲಿ ಈ ನಿಯಮ ಅನ್ವಯವಾಗಲಿದೆ.
ಎಲ್ಲಾ ಪಿಂಚಣಿದಾರರಿಗೆ ಪಿಂಚಣಿ ನವೀಕರಣ ಮಾಡುವುದು, ಪರಿಷ್ಕರಣೆ ಮಾಡುವುದು, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ತೆಗೆದುಹಾಕುವುದು, ಎಲ್ಲಾ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು ನೌಕರರ ಬೇಡಿಕೆಯಾಗಿದೆ ಎಂದು ಕಳೆದ ಯುಎಫ್ಬಿಯು ಸಭೆಯ ನಂತರ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ ಎಚ್ ವೆಂಕಟಾಚಲಂ ಹೇಳಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications