ಪಿಂಚಣಿ ಮತ್ತು ವಾರಕ್ಕೆ ಐದು ದಿನಗಳ ಕೆಲಸದ ಬೇಡಿಕೆಯನ್ನು ಮುಂದಿಟ್ಟುಕೊಂಡು ಸಾರ್ವಜನಿಕ ವಲಯದ ಬ್ಯಾಂಕ್ಗಳ ನೌಕರರು ಜೂನ್ 27 ರಂದು ಮುಷ್ಕರ ನಡೆಸುವುದಾಗಿ ಎಚ್ಚರಿಕೆಯನ್ನು ನೀಡಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ (ಯುಎಫ್ಬಿಯು) ಈ ಮುಷ್ಕರವನ್ನು ಮುನ್ನಡೆಸುತ್ತಿದೆ. ಯುಎಫ್ಬಿಯು ಒಟ್ಟು ಒಂಬತ್ತು ಬ್ಯಾಂಕ್ ಒಕ್ಕೂಟಗಳನ್ನು ಒಳಗೊಂಡಿದೆ.
ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ) ಮತ್ತು ಬ್ಯಾಂಕ್ ಕಾರ್ಮಿಕರ ರಾಷ್ಟ್ರೀಯ ಸಂಸ್ಥೆ (ಎನ್ಒಬಿಡಬ್ಲ್ಯೂ) ಈ ಮಷ್ಕರವನ್ನು ನಡೆಸುತ್ತಿದೆ.
ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿದ ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮನ್ಯ ದತ್ತಾ, "ಸರ್ಕಾರವು ನಮ್ಮ ಬೇಡಿಕೆಯನ್ನು ಒಪ್ಪದಿದ್ದರೆ, ಈ ಮುಷ್ಕರದಲ್ಲಿ ಸುಮಾರು ಏಳು ಲಕ್ಷ ಉದ್ಯೋಗಿಗಳು ಭಾಗಿಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ," ಎಂದು ತಿಳಿಸಿದ್ದಾರೆ.

ಈ ತಿಂಗಳಿನಲ್ಲಿ ಒಟ್ಟು 8 ದಿನಗಳವರೆಗೆ ಬ್ಯಾಂಕುಗಳು ಬಂದ್ ಆಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕ್ಯಾಲೆಂಡರ್ ಪ್ರಕಾರ, ಜೂನ್ನಲ್ಲಿ ಬ್ಯಾಂಕ್ ರಜೆಯು ಎರಡು ಇದೆ. ಉಳಿದವುಗಳು ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರವಾಗಿದೆ. ಇದನ್ನು ಹೊರತುಪಡಿಸಿ ಜೂನ್ 27ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಈ ಮುಷ್ಕರವನ್ನು ಮಾಡುತ್ತಿರುವ ನೌಕರರ ಬೇಡಿಕೆಯೇನು?
ಎಲ್ಲಾ ಪಿಂಚಣಿದಾರರಿಗೆ ಪಿಂಚಣಿ ನವೀಕರಣ ಮಾಡುವುದು, ಪರಿಷ್ಕರಣೆ ಮಾಡುವುದು, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ತೆಗೆದುಹಾಕುವುದು, ಎಲ್ಲಾ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು ನೌಕರರ ಬೇಡಿಕೆಯಾಗಿದೆ ಎಂದು ಯುಎಫ್ಬಿಯು ಸಭೆಯ ನಂತರ ಎಐಬಿಇಎ ಪ್ರಧಾನ ಕಾರ್ಯದರ್ಶಿ ಸಿ ಎಚ್ ವೆಂಕಟಾಚಲಂ ಹೇಳಿದರು.
ಬ್ಯಾಂಕ್ಗಳಲ್ಲಿ 5 ದಿನಗಳ ವಾರದ ಅವಧಿಯನ್ನು ಜಾರಿಗೆ ತರಬೇಕು ಎಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಒತ್ತಾಯಿಸಿದೆ. ಬ್ಯಾಂಕ್ಗಳು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬೇಕು. ಉಳಿದ ದಿನಗಳು ರಜಾ ದಿನವಾಗಿರಬೇಕು ಎಂಬ ಬೇಡಿಕೆ ವ್ಯಕ್ತಪಡಿಸಿದ್ದಾರೆ. ಖಾಸಗಿ ವಲಯದ ಬಹುತೇಕ ದೊಡ್ಡ ಕಂಪನಿಗಳಲ್ಲಿ ಈ ನಿಯಮ ಅನ್ವಯವಾಗಲಿದೆ.
ಸೋಮವಾರ (ಜೂನ್ 27) ಮುಷ್ಕರ ನಡೆಯುವ ಕಾರಣದಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕ್ ಬಂದ್ ಆಗುವ ಸಾಧ್ಯತೆ ಇದೆ. ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಜೂನ್ 25 ಮತ್ತು ಜೂನ್ 26 ರಂದು ಶನಿವಾರ ಮತ್ತು ಭಾನುವಾರ ಬ್ಯಾಂಕ್ ರಜೆ ಇರುತ್ತದೆ. ಬ್ಯಾಂಕ್ಗಳು ಸತತ ಮೂರು ದಿನಗಳವರೆಗೆ ಮುಚ್ಚಲಿದೆ. ಇದರಿಂದಾಗಿ ಗ್ರಾಹಕರ ಮೇಲೆ ಪರಿಣಾಮ ಬೀರಬಹುದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications