ಪರ್ಮನೆಂಟ್ ಅಕೌಂಟ್ ನಂಬರ್ (ಪ್ಯಾನ್ ಕಾರ್ಡ್) ಪ್ರಸ್ತುತ ದೇಶದಲ್ಲಿ ಅತೀ ಅಗತ್ಯವಾದ ದಾಖಲೆಗಳಲ್ಲಿ ಒಂದಾಗಿದೆ. ಎಲ್ಲ ಹಣಕಾಸು ವಹಿವಾಟಿಗೂ ಪ್ಯಾನ್ ಕಾರ್ಡ್ ಮುಖ್ಯವಾಗಿದೆ. ಮುಂದಿನ ಬಜೆಟ್ನಲ್ಲಿ ಪ್ಯಾನ್ ಕಾರ್ಡ್ ಸಂಬಂಧಿಸಿದ ಕೆಲವೊಂದು ನಿರ್ಧಾರಗಳು ಹೊರಬರುವ ಸಾಧ್ಯತೆಯಿದೆ. ಪ್ಯಾನ್ ಕಾರ್ಡ್ ವ್ಯಾಪಾರದ ಏಕೈಕ ಐಡಿಯಾಗುವ ಸಾಧ್ಯತೆಯು ಇದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳನ್ನು ಬೇರೆ ಬೇರೆ ವಲಯಗಳು ಹೊಂದಿದೆ. ಈ ನಡುವೆ ಈ ಬಜೆಟ್ನಲ್ಲೇ ಪ್ಯಾನ್ ಕಾರ್ಡ್ ಸಂಬಂಧಿಸಿದಂತೆ ಪ್ರಮುಖ ನಿರ್ಧಾರವನ್ನು ಕೈಗೊಳ್ಳುವ ನಿರೀಕ್ಷೆಯಿದೆ.
ಎಲ್ಲ ಜನರು ಮತ್ತು ಸಂಸ್ಥೆಗಳು ಪ್ಯಾನ್ ಕಾರ್ಡ್ ಅನ್ನು ಪ್ರಮುಖ ಗುರುತಿನ ಚೀಟಿಯಾಗಿ ಬೇರೆ ದಾಖಲೆಯೊಂದಿಗೆ ಲಿಂಕ್ ಮಾಡುವ ಸಾಧ್ಯತೆಯಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಪ್ರಸ್ತುತ 20 ಗುರುತಿನ ಚೀಟಿಗಳನ್ನು ಹೊಂದಿದೆ. ಈ ಪೈಕಿ ಪ್ಯಾನ್ ಕಾರ್ಡ್ ಏಕೈಕ ಗುರುತಿನ ಚೀಟಿಯಾಗುವ ನಿರೀಕ್ಷೆಯಿದೆ.

ಸರಕು ಮತ್ತು ಸೇವೆ ತೆರಿಗೆ ಗುರುತಿನ ಸಂಖ್ಯೆ (ಜಿಎಸ್ಟಿಐಎನ್), ತೆರಿಗೆದಾರರ ಗುರುತಿನ ಸಂಖ್ಯೆ (ಟಿಐಎನ್), ತೆರಿಗೆ ಕಡಿತ ಖಾತೆ ಸಂಖ್ಯೆ (ಟಿಡಿಎ), ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ), ಕಾರ್ಪೋರೇಟ್ ಐಡೆಂಟಿಫಿಕೇಷನ್ ಸಂಖ್ಯೆ (ಸಿಐಎನ್) ಹಾಗೂ ಇತರೆ ದಾಖಲೆಗಳು ಪ್ರಸ್ತುತ ಪ್ರಮುಖ ವ್ಯಾಪಾರ ಸಂಬಂಧಿತ ದಾಖಲೆಯಾಗಿದೆ.
ಹಣಕಾಸು ಸಚಿವಾಲಯದ ಹಿರಿಯ ಸಿಬ್ಬಂದಿಗಳ ಪ್ರಕಾರ ಹಣಕಾಸು ಕಾಯ್ದೆ 2023 ಜಾರಿಯಾಗಲಿದೆ. ಇದರಲ್ಲಿ ಪ್ಯಾನ್ ಕಾರ್ಡ್ ಅನ್ನು ಪ್ರಮುಖ ಮತ್ತು ಕಾನೂನಾತ್ಮಕ ಗುರುತಿನ ಚೀಟಿ ಎಂದು ಪರಿಗಣಿಸುವ ನಿರೀಕ್ಷೆಯಿದೆ. ವ್ಯಾಪಾರವನ್ನು ಸರಳಗೊಳಿಸಲು, ಸುಲಭಗೊಳಿಸಲು ಇದು ಸಹಾಯ ಮಾಡಲಿ.
ಹಣಕಾಸು ಕಾಯ್ದೆ 2023ರ ಪ್ರಕಾರ ಏಜೆನ್ಸಿಗಳು ಪ್ಯಾನ್ ಕಾರ್ಡ್ ಲಿಂಕ್ ಮಾಡಿಕೊಂಡಿರಬೇಕು. ತಮ್ಮ ಉದ್ಯಮದ ರಿಜಿಸ್ಟ್ರೇಷನ್ಗೆ, ಪರವಾನಗಿ, ಮೊದಲಾದವುಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications