ದೇಶದಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ (ಐಸಿಎಐ) ಅನ್ನು ಸ್ಥಾಪನೆ ಮಾಡಿದ ದಿನವಾದ ಜುಲೈ 1ರಂದು ಪ್ರತಿ ವರ್ಷ ಸಿಎ ದಿನ ಅಥವಾ ಚಾರ್ಟೆಡ್ ಅಕೌಂಟೆಂಟ್ ದಿನ ಎಂದು ಆಚರಣೆ ಮಾಡಲಾಗುತ್ತದೆ. ಹಾಗೆಯೇ ಸಿಎಂ ಸಂಸ್ಥಾಪನಾ ದಿನ ಎಂದು ಕೂಡಾ ಕರೆಯಲಾಗುತ್ತದೆ.
ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ (ಐಸಿಎಐ) ಈ ವಾರ್ಷಿಕ ಸಂಭ್ರಮವನ್ನು ಆಯೋಜನೆ ಮಾಡುತ್ತದೆ. ತಮ್ಮ ಕಾರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ, ಸ್ಪೂರ್ತಿದಾಯಕ ಚಾರ್ಟೆಡ್ ಅಕೌಂಟೆಂಟ್ಗಳ ಸ್ಮರಣೆಗಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ.
ನಾವು ಸಿಎ ದಿನ ಅಥವಾ ಚಾರ್ಟೆಡ್ ಅಕೌಂಟೆಂಟ್ ದಿನವನ್ನು ಆಚರಣೆ ಮಾಡುವುದಕ್ಕೂ ಮೊದಲು ಈ ದಿನದ ಮಹತ್ವ, ಇತಿಹಾಸ, ಪ್ರಾಮುಖ್ಯತೆ ಮೊದಲಾದ ಮಾಹಿತಿಯನ್ನು ತಿಳಿಯುವುದು ಮುಖ್ಯ. ಈ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ....
ಸಿಎ ಸಂಸ್ಥಾಪನ ದಿನ ಯಾವಾಗ ಆಚರಣೆ?
2022ರಲ್ಲಿ ಜುಲೈ 1ರಂದು ಸಿಎ ಸಂಸ್ಥಾಪನ ದಿನವನ್ನು ಆಚರಣೆ ಮಾಡಲಾಗುತ್ತದೆ. ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ (ಐಸಿಎಐ) ಅನ್ನು ಸ್ಥಾಪನೆ ಮಾಡಿ 74 ವರ್ಷಗಳು ಆಗಿದ್ದು, ಅದರ ಪ್ರತೀಕವಾಗಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಐಸಿಎಐ 1949, ಜುಲೈ 1ರಂದು ಆರಂಭ ಮಾಡಲಾಗಿದೆ. ಸಂಸತ್ತು ಸಿಎ ಅನ್ನು ಒಂದು ವೃತ್ತಿಯಾಗಿ ಪರಿಗಣನೆ ಮಾಡಿದ್ದನ್ನು ಈ ದಿನವು ಸಾರುತ್ತದೆ.
ಸಿಎ ದಿನದ ಮಹತ್ವ
ದೇಶದಲ್ಲಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ (ಐಸಿಎಐ) ಸ್ಥಾಪನೆಯಾಗಿ ಇಷ್ಟು ಸಮಯ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರತೀಕವಾಗಿ ಈ ಸಿಎ ದಿನವನ್ನು ಆಚರಣೆ ಮಾಡಲಾಗುತ್ತದೆ. ಐಸಿಎಐ ವಿಶ್ವದ ಎರಡನೇ ಅತೀ ದೊಡ್ಡ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯಾಗಿದೆ. ಭಾರತದಲ್ಲಿ ಅತೀ ದೊಡ್ಡ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯಾದ ಐಸಿಎಐ ಭಾರತ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಬರುತ್ತದೆ. ವಿಶ್ವದಲ್ಲೇ ಅತೀ ದೊಡ್ಡ ವೃತ್ತಿಪರ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆ ಅಮೆರಿಕನ್ ಇನ್ಸ್ಟಿಟ್ಯೂಟ್ ಆಫ್ ಸರ್ಟಿಫೈಡ್ ಪಬ್ಲಿಕ್ ಅಕೌಂಟೆಂಟ್ಸ್ (ಎಐಸಿಪಿಎ) ಆಗಿದೆ.
ಅತೀ ಕಠಿಣ ವೃತ್ತಿ ಸಿಎ
ಭಾರತದಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗುವುದು ಅತೀ ಕಠಿಣ ವೃತ್ತಿಯಾಗಿದೆ. ಓರ್ವ ವ್ಯಕ್ತಿಯು ವೃತ್ತಿಪರ ಸಿಎ ಆಗಿ ಹೊರಹೊಮ್ಮಬೇಕಾದರೆ ಹಲವಾರು ಮಗ್ಗಲುಗಳನ್ನು ದಾಟಿ ಬರಬೇಕಾಗುತ್ತದೆ. ಹಲವಾರು ಸಂಸ್ಥೆಗಳು ವೃತ್ತಿಪರ ಸಿಎಗೆ ಆದ್ಯತೆ ನೀಡುತ್ತಾರೆ. ಪ್ರಸ್ತುತ ಸಿಎ ಆಗಬೇಕಾದರೆ ಹಲವಾರು ಪರೀಕ್ಷೆಗಳನ್ನು ಬರೆಯುವುದು ಮುಖ್ಯವಾಗಿದೆ. ಈ ಎಲ್ಲಾ ಕಷ್ಟಗಳನ್ನು ದಾಟಿ ಬಂದವರ ಸಾಧನೆಯನ್ನು ಕೂಡಾ ಈ ದಿನ ಸ್ಮರಣೆ ಮಾಡಲಾಗುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications