ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಬುಧವಾರ ಸಾಲದ ದರವನ್ನು ಏರಿಕೆ ಮಾಡುವ ನಿರೀಕ್ಷೆ ಇದೆ. ಈ ನಡುವೆ ಕೆನರಾ ಬ್ಯಾಂಕ್ ತನ್ನ ಸಾಲದ ಬಡ್ಡಿದರವನ್ನು ಹೆಚ್ಚಳ ಮಾಡಿದೆ. ಈ ನೂತನ ಬಡ್ಡಿದರವು ನಾಳೆಯಿಂದಲೇ (ಜೂನ್ 7) ಜಾರಿಗೆ ಬರಲಿದೆ.
ಬ್ಯಾಂಕ್ ಸಾಲದ ಬಡ್ಡಿದರವನ್ನು ಹೆಚ್ಚಖ ಮಾಡುವುದರಿಂದಾಗಿ ಇಎಂಐ ಕೂಡಾ ಹೆಚ್ಚಳವಾಗಲಿದೆ. ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಒಂದು ವರ್ಷದ ಅವಧಿಗೆ ಕನಿಷ್ಠ ವೆಚ್ಚದ ನಿಧಿ ಆಧಾರಿತ ಸಾಲ ದರವನ್ನು (ಎಂಸಿಎಲ್ಆರ್) ಅನ್ನು ಶೇಕಡ 0.05 ರಷ್ಟು ಅಥವಾ 5 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದೆ. ಇದರಿಂದಾಗಿ ಬಡ್ಡಿದರವು 7.40 ಕ್ಕೆ ಏರಿದೆ.
ಬ್ಯಾಂಕ್ 6 ತಿಂಗಳ ಅವಧಿಯ ಎಂಸಿಎಲ್ಆರ್ ದರವನ್ನು ಶೇಕಡಾ 7.30 ರಿಂದ ಶೇಕಡಾ 7.35 ಕ್ಕೆ ಏರಿಸಿದೆ. ಹೊಸ ದರಗಳು ಜೂನ್ 7 ರಿಂದ ಜಾರಿಗೆ ಬರಲಿವೆ ಎಂದು ಕೆನರಾ ಬ್ಯಾಂಕ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಇನ್ನು ಆರ್ಎಲ್ಎಲ್ಆರ್ನಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 7.30 ಶೇಕಡವೇ ಇದೆ.

ಕೆನರಾ ಬ್ಯಾಂಕ್ನಲ್ಲಿ ಬಡ್ಡಿದರ ಎಷ್ಟು ಏರಿಕೆ?
ಒಂದು ತಿಂಗಳ ಎಂಸಿಎಲ್ಆರ್: ಈ ಹಿಂದಿನ ದರ 6.65 %, ನೂತನ 6.65 %
ಮೂರು ತಿಂಗಳ ಎಂಸಿಎಲ್ಆರ್: ಈ ಹಿಂದಿನ ದರ 6.95 %, ನೂತನ 6.95 %
ಆರು ತಿಂಗಳ ಎಂಸಿಎಲ್ಆರ್: ಈ ಹಿಂದಿನ ದರ 7.30 %, ನೂತನ 7.35 %
ಒಂದು ವರ್ಷದ ಎಂಸಿಎಲ್ಆರ್: ಈ ಹಿಂದಿನ ದರ 7.35 %, ನೂತನ 7.40 %
ಕರೂರ್ ವೈಶ್ಯ ಬ್ಯಾಂಕ್ ಸಾಲದ ಬಡ್ಡಿದರ ಏರಿಕೆ
ಇನ್ನು ಕರೂರ್ ವೈಶ್ಯ ಬ್ಯಾಂಕ್ ಕೂಡಾ ಸೋಮವಾರ ತಮ್ಮ ಸಾಲದ ದರಗಳನ್ನು ಪರಿಷ್ಕರಿಸಿರುವುದಾಗಿ ಘೋಷಿಸಿವೆ. ಬೆಂಚ್ಮಾರ್ಕ್ ಪ್ರೈಮ್ ಲೆಂಡಿಂಗ್ ದರವನ್ನು (ಬಿಪಿಎಲ್ಆರ್) 40 ಬೇಸಿಸ್ ಪಾಯಿಂಟ್ಗಳಿಂದ 13.75 ಶೇಕಡಾಕ್ಕೆ ಮತ್ತು ಮೂಲ ದರವನ್ನು ಶೇಕಡಾ 8.75 ಕ್ಕೆ ಪರಿಷ್ಕರಿಸಲಾಗಿದೆ ಎಂದು ಬ್ಯಾಂಕ್ ಹೇಳಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications