ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ ಜುಲೈ ತಿಂಗಳಿನಲ್ಲಿ ತುಟ್ಟಿಭತ್ಯೆ ಅಥವಾ ಡಿಎ ಮತ್ತು ತುಟ್ಟಿಭತ್ಯೆ (ಡಿಆರ್) ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಜುಲೈನಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.
ವರ್ಷಕ್ಕೆ ಎರಡು ಬಾರಿ ಡಿಎ ಘೋಷಣೆ ಮಾಡಲಾಗುತ್ತದೆ. ಈ ವರ್ಷದಲ್ಲಿ ಜನವರಿಯಲ್ಲಿ ಕೇಂದ್ರ ಸರ್ಕಾರವು ಡಿಎ ಹೆಚ್ಚಳವನ್ನು ಘೋಷಣೆ ಮಾಡಿದೆ. ವರದಿಗಳ ಪ್ರಕಾರವ ಮೇ ತಿಂಗಳಿನಲ್ಲಿ ಶೇಕಡ 7.4ರಷ್ಟಿರುವ ಹಣದುಬ್ಬರವನ್ನು ಕೇಂದ್ರ ಸರ್ಕಾರವು ಪರಿಗಣನೆಗೆ ತೆಗೆದುಕೊಳ್ಳಬಹುದು.
ವರದಿಗಳ ಪ್ರಕಾರ, ಈ ಬಾರಿ ಡಿಎಯಲ್ಲಿ ಇನ್ನೂ ಶೇಕಡ ಐದರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಏಪ್ರಿಲ್ನಲ್ಲಿ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಎಐಸಿಪಿಐ) 127.7 ಪಾಯಿಂಟ್ಗಳಿಗೆ ಏರಿದೆ. ಇನ್ನು ಮೇ, ಜೂನ್ ಡೇಟಾವನ್ನು ಕೂಡಾ ಪರಿಶೀಲನೆ ಮಾಡಲಾಗುವುದು. ಏಕೆಂದರೆ ಇದು ಡಿಎ ಹೆಚ್ಚಳದ ಮೇಲೆ ಪ್ರಮುಖ ಪಾತ್ರ ವಹಿಸಲಿದೆ. ಗ್ರಾಹಕ ಬೆಲೆ ಸೂಚ್ಯಂಕವು 127 ಕ್ಕಿಂತ ಹೆಚ್ಚಾಗು ಮುಂದುವರಿದರೆ, ಡಿಎ ಮತ್ತೆ ಶೇಕಡ ಐದರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಜ್ಞರುಗಳು ಹೇಳುತ್ತಾರೆ.

ಈ ಹಿಂದೆ ಎಷ್ಟು ಬಾರಿ ಏರಿಕೆ ಮಾಡಲಾಗಿದೆ?
ನಿಯಮಗಳ ಪ್ರಕಾರ, ಡಿಎ ಘೋಷಣೆಯನ್ನು ಮೊದಲು ಮಾರ್ಚ್ ಮತ್ತು ಸೆಪ್ಟೆಂಬರ್ನಲ್ಲಿ ಮಾಡಲಾಗುತ್ತಿತ್ತು. ಕೋವಿಡ್ ಕಾರಣದಿಂದಾಗಿ ಸುಮಾರು 1.5 ವರ್ಷಗಳ ಕಾಲ ಡಿಎ ಹೆಚ್ಚಳವನ್ನು ಮಾಡಿಲ್ಲ. ನಂತರ ಜುಲೈ 2021 ರಲ್ಲಿ ಡಿಎ ಹೆಚ್ಚಳ ಮತ್ತೆ ಆರಂಭ ಮಾಡಲಾಗಿದೆ.
7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ, ಎಲ್ಲಾ ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ಡಿಆರ್ ಅನ್ನು ಜುಲೈ 2021 ರಲ್ಲಿ ಹೆಚ್ಚಿಸಲಾಯಿತು. ಶೇಕಡ 17 ರಿಂದ 28 ರಷ್ಟು ಡಿಎ ಅಧಿಕವಾಗಿದೆ.
ನಂತರ, ಜುಲೈ 1, 2021 ರಿಂದ ಜಾರಿಗೆ ಬರುವಂತೆ ಅಕ್ಟೋಬರ್ 2021 ರಲ್ಲಿ ಶೇಕಡ 3ರಷ್ಟು ಹೆಚ್ಚಳವನ್ನು ಜಾರಿಗೆ ತರಲಾಯಿತು. ಹೀಗಾಗಿ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಜುಲೈ 1 ರಿಂದ ಶೇಕಡ 31ರಷ್ಟು ಹೆಚ್ಚಳವನ್ನು ಡಿಎ ಪಡೆಯಲು ಪ್ರಾರಂಭವಾಗಿದೆ. ಮತ್ತೆ ಜನವರಿ ಜನವರಿ 1, 2022 ರಂದು ಮತ್ತೊಂದು ಬಾರಿ ಶೇಕಡ 3ರಷ್ಟು ಡಿಎ ಹೆಚ್ಚಳ ಮಾಡಲಾಗಿದೆ. ಅಂದಿನಿಂದ ಕೇಂದ್ರ ಸರ್ಕಾರಿ ನೌಕರರು ಶೇಕಡ 34ರಷ್ಟು ಡಿಎ ಅನ್ನು ಪಡೆಯುತ್ತಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications