ಕಾಣೆಯಾದ ಕೇಂದ್ರ ಸರ್ಕಾರಿ ನೌಕರರಿಗೆ ಕುಟುಂಬ ಪಿಂಚಣಿ ನಿಯಮಗಳನ್ನು ಕೇಂದ್ರ ಸರ್ಕಾರವು ಸೋಮವಾರ ಸಡಿಲಗೊಳಿಸಿದೆ. ಈ ಕ್ರಮವು ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಂತಹ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಯೋಜನಕಾರಿಯಾಗಿದೆ.
ಈ ನಿಯಮವನ್ನು ಜಾರಿಗೆ ತಂದರೆ, ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರು ಸೇವೆಯ ಸಮಯದಲ್ಲಿ ನಾಪತ್ತೆಯಾದರೆ, ಕುಟುಂಬ ಪಿಂಚಣಿಯ ಪ್ರಯೋಜನಗಳನ್ನು ತಕ್ಷಣವೇ ಮುಂದಿನ ಬಂಧುಗಳಿಗೆ ಪಾವತಿ ಮಾಡಲಾಗುತ್ತದೆ.
ಸೇವೆಯ ಸಮಯದಲ್ಲಿ ನಾಪತ್ತೆಯಾದ ಸರ್ಕಾರಿ ನೌಕರರು ಬಳಿಕ ಮತ್ತೆ ಪತ್ತೆಯಾಗಿ ಸೇವೆಯನ್ನು ಪುನರಾರಂಭಿಸಿದರೆ, ನಾಪತ್ತೆಯಾಗಿದ್ದ ಸಂದರ್ಭದಲ್ಲಿ ಕುಟುಂಬಕ್ಕೆ ಪಾವತಿಸಲಾದ ಪಿಂಚಣಿಯನ್ನು ಬಳಿಕ ಸರ್ಕಾರಿ ನೌಕರರ ಸಂಬಳದಿಂದ ಕಡಿತ ಮಾಡಲಾಗುತ್ತದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊಸ ಪಿಂಚಣಿ ನಿಯಮಗಳನ್ನು ಸೂಚಿಸಿದೆ. ಇನ್ನು ಈ ಕ್ರಮವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನ ಮಂತ್ರಿ ಉದ್ಯೋಗದ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗದಲ್ಲಿರುವ ಕಾಶ್ಮೀರಿ ಪಂಡಿತ್ ಸಮುದಾಯಕ್ಕೆ ಸಹಾಯಕವಾಗಿದೆ ಎಂದು ಕೂಡಾ ಸರ್ಕಾರವು ಹೇಳಿಕೊಂಡಿದೆ.
ಯಾವೆಲ್ಲಾ ಸೌಲಭ್ಯ ಲಭ್ಯ?
ಕಾಣೆಯಾದ ಸರ್ಕಾರಿ ನೌಕರ ಕುಟುಂಬಕ್ಕೆ ಬಾಕಿ ವೇತನ, ನಿವೃತ್ತಿ ಗ್ರಾಚ್ಯುಟಿ ಮತ್ತು ರಜೆಯ ವೇತನ ಪ್ರಯೋಜನವನ್ನು ಸಹ ಪಾವತಿಸಲಾಗುತ್ತದೆ. ನೌಕರನು ಸಿಸಿಎಸ್ (ಪಿಂಚಣಿ) ನಿಯಮಗಳ ಅಡಿಯಲ್ಲಿ ಅಥವಾ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಅಡಿಯಲ್ಲಿ ನಿರ್ಗಮನ ಮತ್ತು ಹಿಂತೆಗೆದುಕೊಳ್ಳುವಿಕೆ) ನಿಯಮಗಳು, 2015 ರ ಅಡಿಯಲ್ಲಿ ಪ್ರಯೋಜನಗಳನ್ನು ಹೊಂದಿದ್ದರೂ ಕೂಡಾ ವೇತನವನ್ನು ಪಾವತಿ ಮಾಡಲಾಗುತ್ತದೆ.
ಈ ಹಿಂದಿನ ನಿಯಮ ಏನು ಹೇಳುತ್ತದೆ?
ಈ ಸಂಬಂಧ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯ ಅಧಿಕೃತ ಹೇಳಿಕೆಯನ್ನು ನೀಡಿದೆ. ನಾಪತ್ತೆಯಾಗಿರುವ ಸರ್ಕಾರಿ ನೌಕರನನ್ನು ಕಾನೂನಿನ ಪ್ರಕಾರ ನಿಧನ ಎಂದು ಘೋಷಿಸುವವರೆಗೆ ಅಥವಾ ಅವನು ನಾಪತ್ತೆಯಾಗಿ ಏಳು ವರ್ಷಗಳು ಕಳೆಯುವವರೆಗೆ ಕುಟುಂಬಕ್ಕೆ ಕುಟುಂಬ ಪಿಂಚಣಿ ಪಾವತಿಸುವಂತಿಲ್ಲ ಎಂದು ಈ ಹಿಂದಿನ ನಿಯಮವಾಗಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications