ಕೇಂದ್ರ ಸರ್ಕಾರವು ಖಾದ್ಯ ತೈಲ ತಯಾರಕರು ಆಮದು ಮಾಡಿಕೊಳ್ಳುವ ಖಾದ್ಯ ತೈಲಗಳ ಬೆಲೆಯನ್ನು ಡಿತ ಮಾಡುವಂತೆ ಇತ್ತೀಚೆಗೆ ಹೇಳಿದೆ. ಇದಕ್ಕಾಗಿ ಗಡುವು ಕೂಡಾ ಕೇಂದ್ರ ಸರ್ಕಾರ ನೀಡಿದೆ. ಈಗ ಖಾದ್ಯ ತೈಲ ಬೆಲೆಯು ಲೀಟರ್ಗೆ 15 ರೂಪಾಯಿ ಇಳಿಕೆಯಾಗಲಿದೆ ಎಂದು ವರದಿಯಾಗಿದೆ.
"ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಜುಲೈ 6, 2022 ರಂದು ನಡೆದ ಸಭೆಯಲ್ಲಿ ಖಾದ್ಯ ತೈಲಗಳ ಎಂಆರ್ಪಿಯಲ್ಲಿ 15 ರೂಪಾಯಿ ಕಡಿತ ಮಾಡಬೇಕೆಂದು ಪ್ರಮುಖ ಖಾದ್ಯ ತೈಲ ಸಂಸ್ತೆಗಳುಗೆ ಸೂಚನೆ ನೀಡಿದೆ," ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯವು ಅಧಿಸೂಚನೆಯಲ್ಲಿ ತಿಳಿಸಿದೆ.
ಖಾದ್ಯ ತೈಲಗಳ ಬೆಲೆಯನ್ನು ಕೂಡಲೇ ಇಳಿಕೆ ಮಾಡಿ ಅದರ ಲಾಭವನ್ನು ಗ್ರಾಹಕರಿಗೆ ನೀಡಬೇಕು ಎಂದು ಕೇಂದ್ರ ಸರ್ಕಾರವು ತೈಲ ಸಂಸ್ಕರಣಾ ಸಂಸ್ಥೆಗಳಿಗೆ ಸೂಚಿಸಿದೆ. "ಜಾಗತಿಕವಾಗಿ ತೈಲ ಬೆಲೆಯು ಕಡಿಮೆಯಾಗಿದೆ. ಹಾಗಿರುವಾಗ ಸಂಸ್ಥೆಗಲು ಲಾಭವನ್ನು ಜನರಿಗೆ ಕೂಡಾ ವರ್ಗಾವಣೆ ಮಾಡಬೇಕು," ಎಂದು ಸಚಿವಾಲಯವು ಸುತ್ತೋಲೆಯಲ್ಲಿ ಸೇರಿಸಿದೆ.

ಅತೀ ಹೆಚ್ಚು ಖಾದ್ಯ ತೈಲ ಆಮದು ಮಾಡುವ ಭಾರತ
ಕಳೆದ ಒಂದು ತಿಂಗಳಲ್ಲಿ ಖಾದ್ಯ ತೈಲಗಳ ಜಾಗತಿಕ ಬೆಲೆಗಳು ಪ್ರತಿ ಟನ್ಗೆ ಸುಮಾರು 300-450 ಯುಎಸ್ ಡಾಲರ್ ಇಳಿಕೆಯಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ. ದೇಶದಲ್ಲಿ ಖಾದ್ಯ ತೈಲದ ಶೇಕಡಾ 60 ಕ್ಕಿಂತ ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತದೆ. ಆದ್ದರಿಂದ ಜಾಗತಿಕ ಬೆಳವಣಿಗೆಯು ಖಾದ್ಯ ತೈಲಗಳ ಮೇಲೆ ನೇರ ಪರಿಣಾಮವನ್ನು ಉಂಟು ಮಾಡುತ್ತದೆ.
ನಿಮ್ಮ ಬಜೆಟ್ ಕಡಿಮೆ ಮಾಡಲಿದೆ ಖಾದ್ಯ ತೈಲ
ಖಾದ್ಯ ತೈಲದ ಬೆಲೆಯು ಏರಿಕೆಯಾದ ಕಾರಣದಿಂದಾಗಿ ಹಲವಾರು ಮಂದಿಯ ಮೇಲೆ ಪರಿಣಾಮ ಉಂಟಾಗಿತ್ತು. ಬಜೆಟ್ ಮೇಲೆ ಪರಿಣಾಮ ಉಂಟು ಮಾಡಿದ್ದವು. ಆದರೆ ಈಗ ಸರ್ಕಾರದ ಈ ಕ್ರಮವು ಬಜೆಟ್ ಅನ್ನು ಕಡಿತ ಮಾಡಲಿದೆ. "ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆಗಳು ಕುಸಿತವಾಗುತ್ತಿದೆ. ಆದರೆ ದೇಶದಲ್ಲಿ ಅಷ್ಟು ಪ್ರಮಾಣದಲ್ಲಿ ಬೆಲೆ ಇಳಿಕೆ ಕಂಡು ಬಂದಿಲ್ಲ. ಆದ್ದರಿಂದ ಸರ್ಕಾರ ಮಧ್ಯ ಪ್ರವೇಶ ಮಾಡಬೇಕಾಗಿದೆ. ಸರ್ಕಾರ ಉದ್ಯಮಿಗಳ ಜೊತೆ ಸಭೆ ಕರೆದು ಬೆಲೆ ಇಳಿಕೆ ಮಾಡಲು ಸೂಚನೆ ನೀಡಿದೆ," ಎಂದು ಸುತ್ತೋಲೆಯಲ್ಲಿ ಸಚಿವಾಲಯ ಸೇರಿಸಿದೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications