ಆಧಾರ್ ಕಾರ್ಡ್ ಅನ್ನು ಉಚಿತವಾಗಿ ಅಪ್ಡೇಟ್ ಮಾಡುವ ಗಡುವು ಡಿಸೆಂಬರ್ 14, 2023 ರಂದು ಕೊನೆಗೊಳ್ಳಲಿದೆ. ಇಲ್ಲಿಯವರೆಗೆ ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡದೇ ಇರುವವರು ಆದಷ್ಟು ಬೇಗ ಮಾಡಿಕೊಂಡರೆ ಉಚಿತವಾಗಿಯೇ ಮಾಡಿಕೊಳ್ಳಬಹುದಾಗಿದೆ.
ಸೆಪ್ಟೆಂಬರ್ 2023 ರಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಉಚಿತವಾಗಿ ಆಧಾರ್ ಅಪ್ಡೇಟ್ ಸೇವೆಯ ಅವಧಿಯನ್ನು ಈ ಹಿಂದೆ ವಿಸ್ತರಣೆ ಮಾಡಿದೆ. ಅಂದರೆ ಸೆಪ್ಟೆಂಬರ್ 14 ರಿಂದ ಡಿಸೆಂಬರ್ 14, 2023 ರವರೆಗೆ ಮೂರು ತಿಂಗಳುಗಳ ಹೆಚ್ಚುವರಿ ಅವಕಾಶವನ್ನು ಯುಐಡಿಎಐ ನೀಡಿದೆ.

ಈ ಉಚಿತ ಸೇವೆಯು ಮೈಆಧಾರ್ ಪೋರ್ಟಲ್ನಲ್ಲಿ ಪ್ರತ್ಯೇಕವಾಗಿ ಲಭ್ಯವಿದೆ. ಅಪ್ಡೇಟ್ಗಳನ್ನು ಮಾಡಲು ನೀವು ಆಧಾರ್ ಕೇಂದ್ರಕ್ಕೆ ಭೇಟಿ ನೀಡಿದರೆ, ನೀವು ಸೇವೆಗಾಗಿ 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಯುಐಡಿಎಐ ಏನು ಹೇಳುತ್ತದೆ?
"ಜನರ ಪಾಸಿಟಿವ್ ಪ್ರತಿಕ್ರಿಯೆಯ ಆಧಾರದ ಮೇಲೆ, ಸೌಲಭ್ಯವನ್ನು ಇನ್ನೂ ಮೂರು ತಿಂಗಳವರೆಗೆ ಅಂದರೆ 15.09.2023 ರಿಂದ 14.12.2023 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅದರಂತೆ, ಡಾಕ್ಯುಮೆಂಟ್ ನವೀಕರಣದ ಸೌಲಭ್ಯವು 14.12.2023 ರವರೆಗೆ ಮೈಆಧಾರ್ ಪೋರ್ಟಲ್ ಮೂಲಕ ಉಚಿತವಾಗಿ ಮಾಡಿಕೊಳ್ಳಬಹುದು," ಎಂದು ಈ ಹಿಂದೆ ಯುಐಡಿಎಐ ಹೇಳಿದೆ.
ಯುಐಡಿಎಐ ಈಗ ಎಲ್ಲಾ ಬಳಕೆದಾರರಿಗೆ ವಿಶೇಷವಾಗಿ ಆಧಾರ್ ಒಂದು ದಶಕ ಹಳೆಯದಾಗಿದ್ದರೆ ಮತ್ತು ಅಪ್ಡೇಟ್ ಮಾಡದೇ ಇರುವವರಿಗೆ ತಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಕೊಳ್ಳುವಂತೆ ತಿಳಿಸಿದೆ. ಹೆಸರು, ಹುಟ್ಟಿದ ದಿನಾಂಕ ಅಥವಾ ವಿಳಾಸದಂತಹ ಜನಸಂಖ್ಯಾ ವಿವರಗಳಲ್ಲಿ ಬದಲಾವಣೆಗಳನ್ನು ಮಾಡಲು ಬಳಕೆದಾರರು ಆನ್ಲೈನ್ ಸೇವೆ ಬಳಸಿಕೊಳ್ಳಬಹುದು ಅಥವಾ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡಬೇಕು.
ಆನ್ಲೈನ್ನಲ್ಲಿ ಆಧಾರ್ ಅನ್ನು ಉಚಿತವಾಗಿ ಅಪ್ಡೇಟ್ ಮಾಡುವುದು ಹೇಗೆ?
ಇದಕ್ಕಾಗಿ, ನೀವು ಮೊದಲು ಅಧಿಕೃತ ವೆಬ್ಸೈಟ್ https://myaadhaar.uidai.gov.in/ ಗೆ ಭೇಟಿ ನೀಡಬೇಕು. ಇದರ ನಂತರ, ನೀವು ವಿಳಾಸವನ್ನು ನವೀಕರಿಸಲು ಬಯಸಿದರೆ, ಇದಕ್ಕಾಗಿ ನೀವು ನವೀಕರಣ ವಿಳಾಸದ ಆಯ್ಕೆಯನ್ನು ಆರಿಸಬೇಕಾಗುತ್ತದೆ. ಇದರ ನಂತರ, ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಅನ್ನು ನಮೂದಿಸಿ ಮತ್ತು ನಂತರ ಮುಂದುವರಿಯಿರಿ.
ಇದರ ನಂತರ, ನೀವು update document ಅನ್ನು ಕಲ್ಇಕ್ ಮಾಡಬೇಕು. ಇದರ ನಂತರ, ನಿವಾಸಿಗಳ ಪ್ರಸ್ತುತ ಮಾಹಿತಿ ಬಹಿರಂಗಗೊಳ್ಳಲಿದೆ. ನೀವು ಈ ವಿವರಗಳನ್ನು ಪರಿಶೀಲಿಸಬೇಕು. ಇದರ ನಂತರ, ನೀವು ವಿಳಾಸ ಪುರಾವೆಯ ವಿಳಾಸ ಪ್ರಮಾಣಪತ್ರವನ್ನು ಅಪ್ಲೋಡ್ ಮಾಡಬೇಕು. ಇದರ ನಂತರ, ಅಂತಿಮವಾಗಿ, ನಿಮ್ಮ ಆಧಾರ್ ಕಾರ್ಡ್ನ ಅಪ್ಡೇಟ್ ಮಾಡಲಾಗುತ್ತದೆ.
ಆಧಾರ್ ಕಾರ್ಡ್ ಅಪ್ಡೇಟ್ ಏಕೆ ಕಡ್ಡಾಯ?
ಡೇಟಾ ನಿಖರವಾಗಿದೆ ಮತ್ತು ನವೀಕೃತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಪ್ರತಿ 10 ವರ್ಷಗಳಿಗೊಮ್ಮೆ ಆಧಾರ್ ಕಾರ್ಡ್ ವಿವರಗಳನ್ನು ನವೀಕರಿಸುವುದನ್ನು ಯುಐಡಿಎಐ ಕಡ್ಡಾಯಗೊಳಿಸಿದೆ. ಆಧಾರ್ ವಂಚನೆ ಮತ್ತು ಇತರ ಅಪರಾಧಗಳನ್ನು ಎದುರಿಸಲು ತಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸಲು ಕೇಂದ್ರವು ಯಾವಾಗಲೂ ಬಳಕೆದಾರರನ್ನು ಪ್ರೋತ್ಸಾಹಿಸುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications