ನಾವು ಹೂಡಿಕೆ ವಿಚಾರಕ್ಕೆ ಬಂದಾಗ ಎಂದಿಗೂ ಕೂಡಾ ಎಲ್ಲಿ ಹೂಡಿಕೆ ಮಾಡುವುದು ಸುರಕ್ಷಿತ ಎಂದು ನೋಡುತ್ತೇವೆ. ಹಾಗೆಯೇ ನಾವು ಎಲ್ಲಿ ಹೂಡಿಕೆ ಮಾಡಿದರೆ ಅಧಿಕ ರಿಟರ್ನ್ ಅನ್ನು ಪಡೆಯಲು ಸಾಧ್ಯ ಎಂದು ನೋಡುತ್ತೇವೆ. ಹಾಗಿರುವಾಗ ನಮ್ಮ ಮುಂದೆ ಬರುವ ಆಯ್ಕೆ ಅಂಚೆ ಕಚೇರಿ ಉಳಿತಾಯ ಯೋಜನೆಯಾಗಿದೆ.
ಭಾರತೀಯ ಅಂಚೆ ಇಲಾಖೆಯು ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳ ಡೆಪಾಸಿಟ್ದಾರರಿಗೆ ಅನುಕೂಲವಾಗುವಂತೆ ಸುರಕ್ಷಿತ ಮತ್ತು ಲಾಭದಾಯಕ ಉಳಿತಾಯ ಯೋಜನೆಗಳನ್ನು ನೀಡುತ್ತದೆ. ಅಂಚೆ ಕಚೇರಿ ಉಳಿತಾಯ ಖಾತೆ ಸೇರಿದಂತೆ ಈ ಯೋಜನೆಗಳು ಸ್ಥಿರವಾದ ಬಡ್ಡಿದರವನ್ನು ನೀಡುತ್ತದೆ. ಹಾಗೆಯೇ ವಿಶ್ವಾಸಾರ್ಹ ಹೂಡಿಕೆ ಆಯ್ಕೆಯನ್ನು ಒದಗಿಸುತ್ತವೆ. ಇದರ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

ಅತೀ ಕಡಿಮೆ ಹೂಡಿಕೆ ಆಯ್ಕೆಗಳು
• ವಿವಿಧ ಆದಾಯಗಳು: ಬಡ್ಡಿದರಗಳನ್ನು ಸರಿಯಾದ ಸಮಯಕ್ಕೆ ಪಡೆಯುವ ಜೊತೆಗೆ, ಡೆಪಾಸಿಟ್ದಾರರು ತಮ್ಮ ಹೂಡಿಕೆಯ ಮೇಲೆ ಆಕರ್ಷಕವಾದ ಆದಾಯವನ್ನು ಪಡೆಯಲು ಸಾಧ್ಯವಾಗುತ್ತದೆ.
• ವಿವಿಧ ಆಯ್ಕೆಗಳು: ಅಂಚೆ ಕಚೇರಿ ಉಳಿತಾಯ ಖಾತೆಯು ನಿಮ್ಮ ಹೂಡಿಕೆಯ ಅವಧಿಯ ಆಧಾರದ ಮೇಲೆ ಬಡ್ಡಿದರವನ್ನು ನೀಡುತ್ತದೆ. ಒಂದು ವರ್ಷದ ಹೂಡಿಕೆಗೆ ನೀವು ಶೇಕಡ 6.9 ರಷ್ಟು ಬಡ್ಡಿದರವನ್ನು ಪಡೆಯಬಹುದು. ಆದರೆ ಎರಡು ಮತ್ತು ಮೂರು ವರ್ಷಗಳ ಹೂಡಿಕೆಗೆ ನೀವು ಶೇಕಡ 7 ರಷ್ಟು ಬಡ್ಡಿದರವನ್ನು ಪಡೆಯಬಹುದು. ಐದು ವರ್ಷಗಳ ಹೂಡಿಕೆಯಲ್ಲಿ ನೀವು ಸುಮಾರು ಶೇಕಡ 7.5 ರಷ್ಟು ಬಡ್ಡಿದರವನ್ನು ಪಡೆಯಬಹುದು.
• ಕೈಗೆಟುಕುವ ಆರಂಭ ಹೂಡಿಕೆ: ಕನಿಷ್ಠ 500 ರೂಪಾಯಿಗಳ ಡೆಪಾಸಿಟ್ನೊಂದಿಗೆ ನಿಮ್ಮ ಉಳಿತಾಯದ ಪ್ರಯಾಣವನ್ನು ನೀವು ಆರಂಭ ಮಾಡಬಹುದು. ನೀವು 50 ರೂಪಾಯಿಗಳಷ್ಟು ಕಡಿಮೆ ಹಣವನ್ನು ವಿತ್ಡ್ರಾ ಮಾಡಬಹುದು.
• ಏನೆಲ್ಲ ಸೇರುತ್ತದೆ: ಈ ಯೋಜನೆಯು ವಯಸ್ಕರು ಮತ್ತು ಕಿರಿಯರಿಬ್ಬರಿಗೂ ಮುಕ್ತವಾಗಿದೆ. ಯಾವುದೇ ಗರಿಷ್ಠ ಹೂಡಿಕೆ ಮಿತಿ ಇಲ್ಲ. 10,000 ರೂಪಾಯಿವರೆಗಿನ ತೆರಿಗೆ ವಿನಾಯಿತಿ ನಿಮಗೆ ಲಭ್ಯವಾಗುತ್ತದೆ.
• ಹೆಚ್ಚುವರಿ ಆಯ್ಕೆಗಳು: ಶೇಕಡ 8.2 ರಷ್ಟು ಬಡ್ಡಿ ದರದೊಂದಿಗೆ ಹಿರಿಯ ನಾಗರಿಕ ಉಳಿತಾಯ ಯೋಜನೆ ಮತ್ತು ಮಾಸಿಕ ಆದಾಯ ಖಾತೆ ಯೋಜನೆಗೆ ಶೇಕಡ 7.4 ರಷ್ಟು ಬಡ್ಡಿದರವನ್ನು ನೀವು ಪಡೆಯಬಹುದಾಗಿದೆ.
• ಸುಲಭ ದಾಖಲಾತಿ: ನೀವು ಈ ಅಂಚೆ ಕಚೇರಿ ಯೋಜನೆಯಲ್ಲಿ ಹೂಡಿಕೆ ಮಾಡಲು ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೂರು ಪಾಸ್ಪೋರ್ಟ್ ಗಾತ್ರದ ಫೋಟೋ ಮತ್ತು ಸಂಪರ್ಕ ವಿವರಗಳ ಅಗತ್ಯವಿದೆ. ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ, ಅಗತ್ಯವಿರುವ ಫಾರ್ಮ್ಗಳನ್ನು ಭರ್ತಿ ಮಾಡಿ ಮತ್ತು ಖಾತೆ ತೆರೆಯುವ ಪ್ರಕ್ರಿಯೆ ಪೂರ್ಣಗೊಳಿಸಿ.
• ಅನುಕೂಲ ಭರವಸೆ: ಅಂಚೆ ಕಚೇರಿ ಉಳಿತಾಯ ಖಾತೆಯು ಎಟಿಎಂ ಕಾರ್ಡ್ ಕಾರ್ಡ್ ಮತ್ತು ಚೆಕ್ಬುಕ್ ಅನ್ನು ಒದಗಿಸುತ್ತದೆ. ನಿಮ್ಮ ಹಣವನ್ನು ಸುಲಭವಾಗಿ ಪಡೆಯಲು ಇದು ಸಹಾಯಕವಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications