ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರೆಪೋ ದರವನ್ನು ಏರಿಕೆ ಮಾಡಿದ ಬೆನ್ನಲ್ಲೇ ಹಲವಾರು ಬ್ಯಾಂಕುಗಳು ಸಾಲದ ಬಡ್ಡಿದರವನ್ನು ಏರಿಕೆ ಮಾಡಿದೆ. ಹಾಗೆಯೇ ಸಾಮಾನ್ಯವಾಗಿಯೇ ಎಫ್ಡಿ (ಫಿಕ್ಸಿಡ್ ಡೆಪಾಸಿಟ್) ಮೇಲಿನ ಬಡ್ಡಿದರವನ್ನು ಕೂಡಾ ಏರಿಕೆ ಮಾಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ಐಸಿಐಸಿಐ, ಎಚ್ಡಿಎಫ್ಸಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ), ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಇತ್ತೀಚೆಗೆ ಎಫ್ಡಿ ಮೇಲೆ ಬಡ್ಡಿದರವನ್ನು ಏರಿಕೆ ಮಾಡಿದೆ. ಆದರೆ ಈ ಸಂದರ್ಭದಲ್ಲೂ ನಮಗೆ ಈ ಬಡ್ಡಿದರಕ್ಕಿಂತ ಅಧಿಕ ಬಡ್ಡಿದರವನ್ನು ನೀಡುವ ಯೋಜನೆ ಒಂದಿದೆ. ಅದು ಅಂಚೆ ಕಚೇರಿಯ ನ್ಯಾಷನಲ್ ಸೇವಿಂಗ್ಸ್ ಟೈಮ್ ಡೆಪಾಸಿಟ್ ಅಕೌಂಟ್.
ನೀವು ಮೇಲೆ ತಿಳಿಸಿದ ಯಾವುದೇ ಬ್ಯಾಂಕಿನಲ್ಲಿ ಎಫ್ಡಿ ಮಾಡಿಕೊಳ್ಳಬೇಕು ಎಂದು ಚಿಂತನೆ ನಡೆಸುತ್ತಿದ್ದರೆ, ನೀವು ಖಂಡಿತವಾಗಿ ಅಂಚೆ ಕಚೇರಿಯ ಈ ಯೋಜನೆಯ ಬಗ್ಗೆ ತಿಳಿಯಬೇಕು. ಅಂಚೆ ಕಚೇರಿಯ ಈ ಯೋಜನೆಯಲ್ಲಿ ಬ್ಯಾಂಕ್ನ ಎಫ್ಡಿಗಿಂತ ಅಧಿಕ ಬಡ್ಡಿದರವಿದೆ. ಈ ಬಗ್ಗೆ ನಾವು ಇಲ್ಲಿ ವಿವರವಾದ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಬಡ್ಡಿದರ ಎಷ್ಟಿದೆ ತಿಳಿಯಿರಿ
ಅಂಚೆ ಕಚೇರಿಯ ನ್ಯಾಷನಲ್ ಸೇವಿಂಗ್ಸ್ ಟೈಮ್ ಡೆಪಾಸಿಟ್ ಅಕೌಂಟ್ ಒಂದು ರೀತಿಯಲ್ಲಿ ಎಫ್ಡಿ ಕೂಡಾ ಹೌದು. ಇದರಲ್ಲಿ ಒಂದು ನಿರ್ದಿಷ್ಟ ಸಮಯದವರೆಗೆ ಹೂಡಿಕೆ ಮಾಡುವುದರಿಂದಾಗಿ ನೀವು ನಿಗದಿತ ರಿಟರ್ನ್ ಅನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಅಂಚೆ ಕಚೇರಿಯ ನ್ಯಾಷನಲ್ ಸೇವಿಂಗ್ಸ್ ಟೈಮ್ ಡೆಪಾಸಿಟ್ ಅಕೌಂಟ್ ಮೂಲಕ ನಾವು ಒಂದರಿಂದ ಐದು ವರ್ಷದ ಅವಧಿಗೆ ಶೇಕಡ 5.5ರಿಂದ ಶೇಕಡ 6.7ರಷ್ಟು ಬಡ್ಡಿದರ ಪಡೆಯಬಹುದು.
ಎಫ್ಡಿಯಲ್ಲಿ ಬಡ್ಡಿಯ ಮೇಲೂ ತೆರಿಗೆ
ಬ್ಯಾಂಕ್ನಲ್ಲಿ ಒಂದು ಹಣಕಾಸು ವರ್ಷದಲ್ಲಿ ಎಫ್ಡಿಯಲ್ಲಿ ಪಡೆದ ಬಡ್ಡಿಯು 40 ಸಾವಿರ ರೂಪಾಯಿಗಳಿಗಿಂತ ಕಡಿಮೆಯಿದ್ದರೆ, ಅದರ ಮೇಲೆ ಯಾವುದೇ ತೆರಿಗೆಯನ್ನು ಪಾವತಿ ಮಾಡಬೇಕಾಗಿಲ್ಲ. ಈ ಮಿತಿ 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಆಗಿದೆ. ಅದೇ ಸಮಯದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಎಫ್ಡಿಯಿಂದ ಪಡೆದ 50 ಸಾವಿರ ರೂಪಾಯಿಗಳವರೆಗಿನ ಆದಾಯಕ್ಕೆ ತೆರಿಗೆ ಪಾವತಿ ಮಾಡಬೇಕಾಗಿಲ್ಲ. ಆದರೆ ಅದಕ್ಕಿಂತ ಅಧಿಕ ಆದಾಯದ ಮೇಲೆ ಟಿಡಿಎಸ್ ವಿಧಿಸಲಾಗುತ್ತದೆ.
5 ವರ್ಷಗಳ ಹೂಡಿಕೆಗೆ ತೆರಿಗೆ ವಿನಾಯಿತಿ
ಈ ಅವಧಿ ಠೇವಣಿ ಯೋಜನೆ ಮತ್ತು 5 ವರ್ಷಗಳ ಎಫ್ಡಿಯಲ್ಲಿ ಹೂಡಿಕೆ ಮಾಡುವ ಮೂಲಕ ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 80C ಅಡಿಯಲ್ಲಿ ನಾವು ತೆರಿಗೆ ವಿನಾಯಿತಿಯನ್ನು ಪಡೆಯಬಹುದು. ಇದರ ಅಡಿಯಲ್ಲಿ, ನೀವು ರೂ 1.50 ಲಕ್ಷದವರೆಗಿನ ಹೂಡಿಕೆಯ ಮೇಲೆ ಆದಾಯ ತೆರಿಗೆ ವಿನಾಯಿತಿಯ ಲಾಭವನ್ನು ಪಡೆಯಬಹುದು. ಅದೇ ಸಮಯದಲ್ಲಿ, 5 ವರ್ಷಗಳವರೆಗೆ ಬ್ಯಾಂಕ್ಗಳ ಎಫ್ಡಿಗಳಲ್ಲಿ ತೆರಿಗೆ ವಿನಾಯಿತಿಯ ಪ್ರಯೋಜನವು ಲಭ್ಯವಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications