ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿಯಿಂದ ಮಹಾರಾಷ್ಟ್ರದಲ್ಲಿ ರಚನೆ ಆಗಿರುವ ಸರ್ಕಾರವು ಇಡೀ ದೇಶದಲ್ಲೇ ಮೊದಲು ಎಂಬಂಥ ಯೋಜನೆಯೊಂದನ್ನು ಘೋಷಣೆ ಮಾಡಿದೆ. ಮಹಾರಾಷ್ಟ್ರದ ಎಲ್ಲ ನಾಗರಿಕರಿಗೂ ಉಚಿತ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್ ಘೋಷಣೆ ಮಾಡಿದ್ದಾರೆ ಅಲ್ಲಿನ ಆರೋಗ್ಯ ಸಚಿವ ರಾಜೇಶ್ ಟೋಪೆ.
ಅಂದಹಾಗೆ, ಭಾರತದ ರಾಜ್ಯವೊಂದು ಈ ರೀತಿ ಯೋಜನೆ ಘೋಷಣೆ ಮಾಡುತ್ತಿರುವುದು ಇದೇ ಮೊದಲು ಎಂದ ಸ್ವತಃ ಟೋಪೆ ಹೇಳಿಕೊಂಡಿದ್ದಾರೆ. ನೆನಪಿರಲಿ, ಮಹಾರಾಷ್ಟ್ರದ ಪ್ರತಿಯೊಬ್ಬರಿಗೂ ಕ್ಯಾಶ್ ಲೆಸ್ (ನಗದುರಹಿತ) ಇನ್ಷೂರೆನ್ಸ್ ಸ್ಕೀಮ್ ಈ ಮೂಲಕ ದೊರೆಯಲಿದೆ. ಮಹಾರಾಷ್ಟ್ರ ದಿನದ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.
ಮಹಾತ್ಮ ಜ್ಯೋತಿಬಾ ಫುಲೆ ಜನ್ ಆರೋಗ್ಯ ಯೋಜನಾ
ಕಳೆದ ಶುಕ್ರವಾರದಂದು ಟೋಪೆ ಮಾತನಾಡಿ, ಮಹಾತ್ಮ ಜ್ಯೋತಿಬಾ ಫುಲೆ ಜನ್ ಆರೋಗ್ಯ ಯೋಜನಾ (MJPJAY) ಅಡಿಯಲ್ಲಿ ಈಗಾಗಲೇ ಮಹಾರಾಷ್ಟ್ರದ ಶೇಕಡಾ 85ರಷ್ಟು ಜನಸಂಖ್ಯೆಗೆ ಆರೋಗ್ಯ ವಿಮೆಯು ದೊರೆಯುತ್ತಿದೆ. ಅದನ್ನು ಈಗ ಬಾಕಿ ಹದಿನೈದು ಪರ್ಸೆಂಟ್ ಜನಸಂಖ್ಯೆಗೂ ವಿಸ್ತರಿಸಲಾಗುತ್ತಿದೆ ಎಂದಿದ್ದಾರೆ.
ಖಾಸಗಿ ಆಸ್ಪತ್ರೆಯಿಂದ ರಕ್ಷಣೆಗಾಗಿ ಕ್ರಮ
ಖಾಸಗಿ ಆಸ್ಪತ್ರೆಗಳು ವಿಪರೀತ ಹೆಚ್ಚಿನ ದರವನ್ನು ವಿಧಿಸುವುದರಿಂದ ಜನರನ್ನು ರಕ್ಷಿಸಲು ಈ ತೀರ್ಮಾನಕ್ಕೆ ಬರಲಾಗಿದೆ. ಸರ್ಕಾರಿ, ಅರೆ ಸರ್ಕಾರಿ ಸಿಬ್ಬಂದಿ ಹಾಗೂ ಬಿಳಿ ರೇಷನ್ ಕಾರ್ಡ್ ಇರುವಂಥವರನ್ನು ಯೋಜನೆಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಒಪ್ಪಂದವೊಂದಕ್ಕೆ ಸಹಿ ಮಾಡಲಾಗಿ ಎಂದು ಸಚಿವರು ತಿಳಿಸಿದ್ದಾರೆ.
ಕೊರೊನಾಗೆ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ
ಜನರಲ್ ಇನ್ಷೂರೆನ್ಸ್ ಪಬ್ಲಿಕ್ ಸೆಕ್ಟರ್ ಅಸೋಸಿಯೇಷನ್ ಜತೆಗೆ ಮಹಾರಾಷ್ಟ್ರ ಸರ್ಕಾರ ಈಗಾಗಲೇ ಒಪ್ಪಂದವೊಂದಕ್ಕೆ ಸಹಿ ಹಾಕಿದೆ. ಅದರ ಪ್ರಕಾರ, ಪುಣೆ ಹಾಗೂ ಮುಂಬೈನಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತದೆ. ಈವರೆಗೆ ಮಹಾರಾಷ್ಟ್ರದಲ್ಲಿ 11,506 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 485 ಮಂದಿ ಸಾವನ್ನಪ್ಪಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications