ಕೇಂದ್ರ ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ ಇದೆ. ಸರ್ಕಾರ ಶೀಘ್ರದಲ್ಲೇ ಅವರ ತುಟ್ಟಿಭತ್ಯೆಯನ್ನು (ಡಿಎ) ಹೆಚ್ಚಿಸುವ ಸಾಧ್ಯತೆ ಇದೆ. ಸರ್ಕಾರ ವರ್ಷಕ್ಕೆ ಎರಡು ಬಾರಿ ಡಿಎ ಹೆಚ್ಚಿಸುತ್ತಿದೆ. ಜನವರಿಯಲ್ಲಿ ಸರ್ಕಾರ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ಈಗ ಮತ್ತೆ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಡಿಎ ಹೆಚ್ಚಳ ಕುರಿತು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಜುಲೈ 1ರಿಂದ ನೌಕರರು ಮತ್ತು ಪಿಂಚಣಿದಾರರ ಡಿಎ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ವರ್ಷದ ಜನವರಿಯಲ್ಲಿ, ಸರ್ಕಾರವು ನೌಕರರ ತುಟ್ಟಿಭತ್ಯೆಯನ್ನು ಶೇಕಡ 31ರಿಂದ ಶೇಕಡ 34ಕ್ಕೆ ಹೆಚ್ಚಿಸಿದೆ. ಡಿಎ ಹೆಚ್ಚಳದಿಂದ ಸುಮಾರು 50 ಲಕ್ಷ ಉದ್ಯೋಗಿಗಳು ಪ್ರಯೋಜನ ಪಡೆಯಲಿದ್ದಾರೆ.
ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ ಹೆಚ್ಚಳದ ನಂತರ ಡಿಎ ಶೇ.4ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರಸ್ತುತ, ನೌಕರರು ಶೇಕಡ 34 ಡಿಎ ಪಡೆಯುತ್ತಿದ್ದಾರೆ. ಈಗ ಶೇಕಡ ರಷ್ಟು ಏರಿಕೆಯಾದರೆ ಕೇಂದ್ರ ಸರ್ಕಾರದ ನೌಕರರು ಶೇಕಡ 38ರಷ್ಟು ಡಿಎ ಪಡೆಯಲಿದ್ದಾರೆ. ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ನೀಡಿದರೆ ಪಿಂಚಣಿದಾರರಿಗೆ ಡಿಆರ್ ನೀಡಲಾಗುತ್ತದೆ.

ಎಷ್ಟು ಸಂಬಳ ಹೆಚ್ಚಾಗುತ್ತದೆ?
ಮೂಲ ವೇತನ ರೂ 56,900 ಆಗಿರುವ ನೌಕರರು, ತುಟ್ಟಿ ಭತ್ಯೆ ಶೇಕಡ 38 ಆಗಿದ್ದರೆ, ಅವರು ರೂ 21,622 ರ ಡಿಎ ಪಡೆಯುತ್ತಾರೆ. ಪ್ರಸ್ತುತ ಶೇ.34ರ ದರದಲ್ಲಿ 19,346 ರೂ. ಡಿಎ ಪಡೆಯುತ್ತಿದ್ದಾರೆ. ಶೇ.4ರಷ್ಟು ಡಿಎ ಹೆಚ್ಚಳದಿಂದ ವೇತನದಲ್ಲಿ 2,276 ರೂಪಾಯಿ ಹೆಚ್ಚಳವಾಗಲಿದೆ. ಅಂದರೆ ವಾರ್ಷಿಕ ಸುಮಾರು 27,312 ರೂಪಾಯಿ ಹೆಚ್ಚಳವಾಗಲಿದೆ. ಸರ್ಕಾರದ ಡಿಎ ಹೆಚ್ಚಳದಿಂದ ಸುಮಾರು 50 ಲಕ್ಷ ನೌಕರರು ಪ್ರಯೋಜನ ಪಡೆಯಲಿದ್ದಾರೆ.
ಉತ್ತರಾಖಂಡ ಸರ್ಕಾರದಿಂದ ಡಿಎ ಹೆಚ್ಚಳ
ಉತ್ತರಾಖಂಡ ಸರ್ಕಾರವು ತನ್ನ ಉದ್ಯೋಗಿಗಳಿಗೆ ತುಟ್ಟಿಭತ್ಯೆಯನ್ನು (ಡಿಎ) ಶೇಕಡ 3ರಷ್ಟು ಹೆಚ್ಚಿಸಿದೆ. ಡಿಎ ಹೆಚ್ಚಳ ಜುಲೈ 1 ರಿಂದ ಜಾರಿಗೆ ಬರಲಿದೆ. ಇತ್ತೀಚಿನ ಹೆಚ್ಚಳದ ನಂತರ, ಉತ್ತರಾಖಂಡ ರಾಜ್ಯ ಸರ್ಕಾರಿ ನೌಕರರು ಈಗ ಶೇಕಡ 31ರಷ್ಟು ಡಿಎ ಪಡೆಯುತ್ತಾರೆ. ತುಟ್ಟಿಭತ್ಯೆ ಹೆಚ್ಚಳವು ಉತ್ತರಾಖಂಡದ ಸುಮಾರು 2.5 ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಪ್ರಯೋಜನವನ್ನು ನೀಡುತ್ತದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications